25-06-2026, 11:00 PM
ಮಾಣಿ, ಜೂನ್ 25: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮಜಿ ವೀರಕಂಭ ಶಾಲೆಯ ಮುಖಮಂಟಪದ ಮೇಲ್ಚಾವಣಿಗೆ ಅಳವಡಿಸಲಾದ ಶೀಟ್ಗಳ ಸಮರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮ ಮತ್ತು “ಯುವ ವೃಕ್ಷೋತ್ಸವ–2026” ಕಾರ್ಯಕ್ರಮವು ಗುರುವಾರ ಶಾಲಾ ಆವರಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಅಶೋಕ್ ಪಡ್ಪು ಮಾತನಾಡಿ, “ಶಾಲೆಗಳ ಅಭಿವೃದ್ಧಿಗೆ ನೀಡುವ […]
Read More
23-06-2026, 9:00 PM
ಕೂಳೂರು ಜೂನ್ 23: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 66ನೇ ಮನೆ-ಮನೆ ಭಜನೆ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಅವರ “ಅನುಗೃಹ” ನಿವಾಸದಲ್ಲಿ ಮಂಗಳವಾರ ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಭಾಸ್ಕರ್ ಕೋಟ್ಯಾನ್ ಅವರ ಮಾತೃಶ್ರೀಯವರನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ ಅವರು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ […]
Read More
23-06-2026, 1:00 PM
ಮೂಡುಬಿದಿರೆ, ಜೂನ್ 23: ಯುವವಾಹಿನಿ (ರಿ.) ಮೂಡುಬಿದರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮವು ಮಂಗಳವಾರ ಮೂಡುಬಿದರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಉದ್ಘಾಟನೆಯಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ಅವರು ಮಾತನಾಡಿ, “ಹೊಲಿಗೆ ಕಲಿತ ಮಹಿಳೆಯರು […]
Read More
22-06-2026, 9:00 PM
ಮಂಗಳೂರು: ದಿನಾಂಕ: 22-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ತಂಡ ಕದ್ರಿ ಕಂಬಳ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ […]
Read More
22-06-2026, 6:00 PM
ಮಾಣಿ, ಜೂನ್ 22: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಯುವ ವೃಕ್ಷೋತ್ಸವ–2026” ಅಂಗವಾಗಿ ಮಾಣಿ ವ್ಯಾಪ್ತಿಯ ವಿವಿಧ ಶಾಲೆಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಈ ಅಭಿಯಾನದ ಭಾಗವಾಗಿ ಶ್ರೀರಾಮಚಂದ್ರ ಪದವಿ ಪೂರ್ವ ಕಾಲೇಜು ಪೆರ್ನೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರ, ಸರಕಾರಿ ಪ್ರೌಢಶಾಲೆ ಸೂರ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು, ಮಾಣಿ ಶ್ರೀ ಉಳ್ಳಾಲ್ತಿ ಧರ್ಮಚಾವಡಿ ಹಾಗೂ ಇಡ್ಕಿದು ಗ್ರಾಮ ಪಂಚಾಯಿತಿ ಅಂಗನವಾಡಿ ಕೇಂದ್ರ […]
Read More
22-06-2026, 5:00 PM
ನಮಸ್ಕಾರ……ಮಳೆಗಾಲದ ಆಗಮನದೊಂದಿಗೆ ಪ್ರಕೃತಿ ಹೇಗೆ ಮೈದುಂಬಿ ಹಸಿರಾಗುತ್ತದೆಯೋ, ಹಾಗೆಯೇ ‘ಯುವಸಿಂಚನ’ ಪತ್ರಿಕೆಯ ಎರಡನೇ ಸಂಚಿಕೆಯೂ ನವಚೈತನ್ಯದೊಂದಿಗೆ ನಿಮ್ಮ ಕೈ ಸೇರುತ್ತಿದೆ. ಮೊದಲ ಸಂಚಿಕೆಯನ್ನು ಪ್ರೀತಿಯಿಂದ ಆಶೀರ್ವದಿಸಿದ ಓದುಗ ಪ್ರಭುಗಳಿಗೆ ಹಾಗೂ ಶ್ರಮಿಸಿದ ಎಲ್ಲಾ ಘಟಕಗಳಿಗೆ ನನ್ನ ಅನಂತ ವಂದನೆಗಳು. ಅಕ್ಷರ ಎಂಬುದು ಕೇವಲ ಕಪ್ಪು ಇಂಕಿನ ಗುರುತಲ್ಲ; ಅದು ಬದಲಾವಣೆಯ ಬೀಜ. ಬಿತ್ತಿದ ಪ್ರತಿ ಅಕ್ಷರವೂ ಯುವ ಮನಸ್ಸುಗಳಲ್ಲಿ ವಿಚಾರದ ಮೊಳಕೆಯೊಡೆಯಬೇಕು ಎಂಬುದು ನಮ್ಮ ಆಶಯ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೈಗಳಿಗೆ ಅಕ್ಷರಗಳೇ ಆಯುಧ. ಈ ನಿಟ್ಟಿನಲ್ಲಿ […]
Read More
22-06-2026, 5:00 PM
ಯುವವಾಹಿನಿ ಕುಟುಂಬದ ಅತ್ಮೀಯ ಸದಸ್ಯರೆ, ‘ಯುವಸಿಂಚನ’ದ ಚೊಚ್ಚಲ ಸಂಚಿಕೆಗೆ ನೀವು ತೋರಿದ ಅತೀವ ಪ್ರೀತಿ, ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ನಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಿವೆ. ಅದೇ ಲವಲವಿಕೆ ಮತ್ತು ಆತ್ಮವಿಶ್ವಾಸದೊಂದಿಗೆ, ಮಲೆನಾಡ ಮಳೆಯ ಸಿಂಚನದಂತೆ ಹಿತ ನೀಡುವ ಈ ದ್ವಿತೀಯ ಸಂಚಿಕೆಯನ್ನು ನಿಮ್ಮ ಕೈಗಿಡಲು ಹೆಮ್ಮೆ ಎನಿಸುತ್ತಿದೆ. ಯುವವಾಹಿನಿಯ ಪಯಣವು ಕೇವಲ ಕಾರ್ಯಕ್ರಮಗಳ ಸರಮಾಲೆಯಲ್ಲ; ಅದು ವ್ಯಕ್ತಿತ್ವವನ್ನು ಪಳಗಿಸುವ, ಸಮಾಜವನ್ನು ಭಾವನಾತ್ಮಕವಾಗಿ ಬೆಸೆಯುವ ಮತ್ತು ಹೊಸ ಭರವಸೆಯ ಹಾದಿಗಳನ್ನು ಸೃಷ್ಟಿಸುವ ಒಂದು ನಿರಂತರ ಜ್ಞಾನಯಜ್ಞ. ಬಂಟ್ವಾಳ […]
Read More
22-06-2026, 11:00 AM
ಸುರತ್ಕಲ್ ಜೂನ್ 22: ಮಕ್ಕಳ ಸುರಕ್ಷತೆ, ಪೋಕ್ಸೋ ಕಾಯಿದೆಯ ಅರಿವು, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಹಾಗೂ ಮೊಬೈಲ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಘು ನಾಯ್ಕ್ ಅವರು ಮಾತನಾಡಿ, “ಮಕ್ಕಳು ದೇಶದ ಭವಿಷ್ಯ. ಅವರ ಸುರಕ್ಷಿತ ಹಾಗೂ ನಿಶ್ಚಿಂತ ಬಾಲ್ಯವನ್ನು ಕಾಪಾಡುವುದು ನಮ್ಮೆಲ್ಲರ […]
Read More
21-06-2026, 11:00 PM
ಹೆಜಮಾಡಿ, ಜೂನ್ 21 : ಹಿರಿಯ ಸಾಹಿತಿ, ನಾಟಕಕಾರ, ಗೀತಾ ಸಾಹಿತ್ಯ ರಚನಾಕಾರ ಹಾಗೂ ಪತ್ರಕರ್ತರಾದ ಪರಮಾನಂದ ವಿ. ಸಾಲ್ಯಾನ್ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಯುವವಾಹಿನಿ (ರಿ.) ಹೆಜಮಾಡಿ ಘಟಕವು ಮಾನವೀಯ ಕಾಳಜಿಯಿಂದ ನೆರವಿನ ಹಸ್ತ ಚಾಚಿದೆ. ಮೂಲತಃ ಹೆಜಮಾಡಿ ಗ್ರಾಮದವರಾದ ಪರಮಾನಂದ ವಿ. ಸಾಲ್ಯಾನ್ ಅವರು ಹೆಜಮಾಡಿ ಬಿಲ್ಲವರ ಸಂಘ ಹಾಗೂ ಯುವವಾಹಿನಿಯ ವಿವಿಧ ಚಟುವಟಿಕೆಗಳಿಗೆ ಹಲವು ವರ್ಷಗಳಿಂದ ಅಮೂಲ್ಯ […]
Read More
21-06-2026, 9:00 PM
ಸುಳ್ಯ, ಜೂನ್ 21 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ 5ನೇ ಗುರು ಸ್ಪೂರ್ತಿ ಕಾರ್ಯಕ್ರಮವು ಸುಳ್ಯದ ಅಶ್ವಿನಿ ಲೋಕೇಶ್ ಅವರ ನಿವಾಸದಲ್ಲಿ ಭಕ್ತಿಪೂರ್ವಕವಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಯುವವಾಹಿನಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಯಿತು. ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಸ್ಮರಿಸುತ್ತಾ ನಡೆದ ಭಜನಾ ಕಾರ್ಯಕ್ರಮದಲ್ಲಿ ಸದಸ್ಯರು ಭಕ್ತಿಭಾವದಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ನಾರಾಯಣಗುರು ತತ್ವ ನಿರ್ದೇಶಕ ರೋಹಿತ್ ರೆಂಜಾಳ, ಸುಳ್ಯ ಘಟಕದ ಸ್ಥಾಪಕ […]
Read More