Yuvavahini

ಘಟಕಗಳು

ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಜೂನ್ 7ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು. 2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್, ಜತೆ ಕಾರ್ಯದರ್ಶಿಯಾಗಿ ಧನುಷ್ ಮಧ್ವ […]

Read More

ಕರುಣೆಯ ಹೃದಯಗಳಿಂದ ಮೂಡಿದ ಸೇವೆಯ ಸ್ಪರ್ಶ, ಸಂಕಷ್ಟದಲ್ಲಿರುವವರಿಗೆ ಬದುಕಿನ ಆಶಾಕಿರಣ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆಯಾದ “ಯುವ ಸೇವಾ ಸ್ಪರ್ಶ” ಕಾರ್ಯಕ್ರಮದಡಿ ಮೊದಲನೇ ಸೇವಾ ಹಸ್ತವನ್ನು ಅಗತ್ಯವಿರುವ ಕುಟುಂಬವೊಂದಕ್ಕೆ ವಿತರಿಸಲಾಯಿತು. ಮಾಣಿ ಗ್ರಾಮದ ದಿವಂಗತ ವೀರಪ್ಪ ಪೂಜಾರಿ ಅವರ ಕುಟುಂಬವು ಆರ್ಥಿಕ ಹಾಗೂ ಆರೋಗ್ಯ ಸಂಬಂಧಿತ ಸಂಕಷ್ಟಗಳನ್ನು ಎದುರಿಸುತ್ತಿದ್ದು, ನಾಲ್ಕು ಹೆಣ್ಣು ಮಕ್ಕಳ ಪೈಕಿ ಮೂವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕುಟುಂಬದ ಒಬ್ಬ ಸದಸ್ಯರು ಮಾತ್ರ ದುಡಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಈ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಯುವವಾಹಿನಿ (ರಿ.) […]

Read More

ವಿಶ್ವ ಪರಿಸರ ದಿನಾಚರಣೆ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 05-06-2026ರಂದು ವಿಶ್ವ ಪರಿಸರ ದಿನಾಚರಣೆ ಹಾಗೂ ಬಳ್ಪ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಯುವವಾಹಿನಿ (ರಿ.) ಕಡಬ ಘಟಕ ಮತ್ತು ಗ್ರಾಮ ಅರಣ್ಯ ಸಮಿತಿ ಬಳ್ಪ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಪಂಜ ವಲಯದ ಉಪ ವಲಯ ಅರಣ್ಯ ಅಧಿಕಾರಿಗಳಾದ ಮಹಬೂಬ್ ಇಲಾ ಅವರು ಉದ್ಘಾಟಿಸಿ, […]

Read More

ಯುವ ವೃಕ್ಷೋತ್ಸವಕ್ಕೆ ಚಾಲನೆ

ಮಾಣಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು – ಬದುಕಿಗೆ ನೆರಳು” ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ದಿನಾಂಕ 05.06.2026ರಂದುನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದ ವಠಾರದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ನಾರಾಯಣಗುರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಸಾಲಿಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಕಾರ್ಯದರ್ಶಿ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ

ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಅಂಗವಾಗಿ, ದಿನಾಂಕ 01-06-2026ರಂದು ಸೋಮವಾರ ಸಂಜೆ 5.30 ಗಂಟೆಗೆ ಭಜನಾ ಸೇವಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಈ ಭಜನಾ ಸೇವೆಯು ಶ್ರೀರಾಮ ಕ್ಷತ್ರಿಯ ಭಜನಾ ತಂಡ, ಸುರತ್ಕಲ್ ಇವರ ಸಹಯೋಗದೊಂದಿಗೆ ನೆರವೇರಿತು. ಸಂಜೆ 7.00 ಗಂಟೆಗೆ ಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಕ್ಷೇತ್ರದ ವತಿಯಿಂದ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]

Read More

ಅಡ್ಡಪರಿಣಾಮವಿಲ್ಲದ ಚಿಕಿತ್ಸಾ ಪದ್ಧತಿಯೇ ಹೊಮಿಯೋಪತಿ : ಗಿರೀಶ್ ಕೋಟ್ಯಾನ್

ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]

Read More

ಜ್ಞಾನ ಮತ್ತು ಸಂಸ್ಕಾರಗಳೊಂದಿಗೆ ಪಡೆದ ಶಿಕ್ಷಣವು ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ರೂಪಿಸುತ್ತದೆ : ಯಶೋಧರ ಬಂಗೇರ

ಅಳಕೆ : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಶ್ರೀ ನಾರಾಯಣಗುರುಗಳ ” ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ” ಎಂಬ ಸಂದೇಶವು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು. ಜ್ಞಾನ ಮತ್ತು ಸಂಸ್ಕಾರಗಳೊಂದಿಗೆ ಪಡೆದ ಶಿಕ್ಷಣವು ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ರೂಪಿಸಿ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದರು. ಶಿಕ್ಷಣದ ಮೂಲಕ ಸಮಾನತೆ, ಸಹೋದರತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಬೆಳೆಸಿಕೊಂಡು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಂತೆ […]

Read More

‘ಮನೆ ಮನೆ ಭಜನೆ’

ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ‘ಮನೆ ಮನೆ ಭಜನೆ’ ಸರಣಿಯ ಅಂಗವಾಗಿ ಘಟಕದ ಸಕ್ರಿಯ ಸದಸ್ಯರಾದ ರಾಘವೇಂದ್ರ ಪೂಜಾರಿ ಹಾಗೂ ತಾರಾವತಿ ದಂಪತಿಗಳ ರಜತ ಮಹೋತ್ಸವದ (25ನೇ ವರ್ಷದ) ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಅವರ ನಿವಾಸದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ನೆರವೇರಿತು. ​ಇದೇ ಸುಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಅವರ ಪೌರೋಹಿತ್ಯದಲ್ಲಿ ಭಕ್ತಿಪೂರ್ವಕ “ದುರ್ಗಾ ನಮಸ್ಕಾರ ಪೂಜೆ”ಯು ಸಂಪನ್ನಗೊಂಡಿತು. ಧಾರ್ಮಿಕ ವಿಧಿವಿಧಾನಗಳ ನಂತರ ಯುವವಾಹಿನಿ ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!