Yuvavahini

ಘಟಕಗಳು

ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರ

ಬಂಟ್ವಾಳ, ಜು. 25 : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಐ.ಎಂ.ಎ. ಮಂಗಳೂರು ಶಾಖೆಯ ಸಹಕಾರದೊಂದಿಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಯಶಸ್ವಿಯಾಗಿ ನಡೆಯಿತು. ಆರೋಗ್ಯ ಜಾಗೃತಿ ಹಾಗೂ ಸಮಾಜಸೇವೆಯ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಯುವವಾಹಿನಿಯ ಸುಮಾರು 70 ಮಂದಿ ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ […]

Read More

ದುರ್ಗಾಪೂಜೆ ಪ್ರಯುಕ್ತ ಭಜನಾ ಸಂಕೀರ್ತನೆ

ವಿಟ್ಲ, ಜು. 24 : ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಘಟಕದ ಸದಸ್ಯೆ ಹರಿಣಾಕ್ಷಿ ಸುಧಾಕರ ಪೂಜಾರಿ ಅವರ ಮನೆಯಲ್ಲಿ ದುರ್ಗಾಪೂಜೆಯ ಪ್ರಯುಕ್ತ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಭಜನಾ ಸಂಕೀರ್ತನೆಯು ಶ್ರದ್ಧಾ-ಭಕ್ತಿಯಿಂದ ನೆರವೇರಿದ್ದು, ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ವಾತಾವರಣವನ್ನು ಮೂಡಿಸಿತು. ದೇವಿಯ ಸನ್ನಿಧಿಯಲ್ಲಿ ನಡೆದ ಭಜನಾ ಸೇವೆಯಲ್ಲಿ ಯುವವಾಹಿನಿ ಸದಸ್ಯರು ಭಕ್ತಿಗೀತೆಗಳನ್ನು ಹಾಡುವ ಮೂಲಕ ದುರ್ಗಾದೇವಿಯ ಕೃಪೆಗೆ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷ ಕೆ.ಟಿ. ಆನಂದ ಪೂಜಾರಿ, ಎರಡನೇ […]

Read More

ಗುರುತತ್ವವಾಹಿನಿ 72ನೇ ಮಾಲಿಕೆ

ಬಂಟ್ವಾಳ, ಜು. 23 : ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಗುರುತತ್ವವಾಹಿನಿ 72ನೇ ಮಾಲಿಕೆ ಕಾರ್ಯಕ್ರಮವು ಗುರುವಾರ ಸಜೀಪ ಮುನ್ನೂರು ಗ್ರಾಮದ ಪುರುಷೋತ್ತಮ ಪೂಜಾರಿ ಮಿತ್ತಕಟ್ಟ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಗುರುತತ್ವ ಸಂದೇಶ ನೀಡಿದ ಜಯಶಂಕರ್ ಕಾನ್ಸಾಲೆ ಅವರು, ಶ್ರೀ ನಾರಾಯಣ ಗುರುಗಳ ತತ್ವಗಳು ಸಮಾಜದಲ್ಲಿ ಸಮಾನತೆ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಶಾಶ್ವತ ಸಂದೇಶಗಳಾಗಿವೆ. ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ವ್ಯಕ್ತಿಯೊಂದಿಗೆ ಸಮಾಜವೂ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಹೇಳಿದರು. ಯುವವಾಹಿನಿ […]

Read More

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಸಮಿತಿಯಿಂದ ಕನ್ಯಾಡಿ ಸ್ವಾಮೀಜಿ ಆಶೀರ್ವಾದ

ಬೆಳ್ತಂಗಡಿ, ಜು. 22 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯು ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಕನ್ಯಾಡಿಯ ಶ್ರೀರಾಮ ಕ್ಷೇತ್ರದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಮಹಾಮಂಡಲೇಶ್ವರ ಶ್ರೀರಾಮ ಕ್ಷೇತ್ರ, ಕನ್ಯಾಡಿಯಲ್ಲಿ ನಡೆದ ಈ ಭೇಟಿಯು ಯುವವಾಹಿನಿಯ ನೂತನ ಸಾಲಿನ ಸಂಘಟನಾ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಶುಭಾರಂಭದ ಸಂಕೇತವಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು, ಯುವವಾಹಿನಿಯು ಶಿಕ್ಷಣ, ಉದ್ಯೋಗ ಮತ್ತು […]

Read More

ಆತ್ಮವಿಶ್ವಾಸ, ಛಲ ಹಾಗೂ ಸೂಕ್ತ ಮಾಹಿತಿ ಯಶಸ್ವಿ ಉದ್ಯಮಕ್ಕೆ ಅಡಿಪಾಯ : ಅಶೋಕ್ ಕುಮಾರ್ ಪಡ್ಪು

ಮಂಗಳೂರು, ಜುಲೈ 20 : “ನಮಗೆ ಕನಸುಗಳಿರಬೇಕು. ಹಾಗೆಯೇ ದೂರದೃಷ್ಟಿಯೂ ಇರಬೇಕು. ನೀವು ಯಾವ ಕ್ಷೇತ್ರದಲ್ಲಿ ಉದ್ಯಮ ಆರಂಭಿಸಬೇಕೆಂದು ಬಯಸುತ್ತೀರೋ, ಆ ಕ್ಷೇತ್ರವನ್ನು ‘ನಾನು ಸಾಧಿಸಬಲ್ಲೆ’ ಎಂಬ ಆತ್ಮವಿಶ್ವಾಸದಿಂದ ಆಯ್ಕೆ ಮಾಡಿಕೊಂಡು, ಅದರ ಬಗ್ಗೆ ಸೂಕ್ತ ಮಾಹಿತಿಯನ್ನು ಪಡೆದುಕೊಳ್ಳಬೇಕು. ಹಿಂಜರಿಕೆಯಿಂದ ಸಮಯವನ್ನು ವ್ಯರ್ಥ ಮಾಡಿದರೆ, ಕಳೆದ ಸಮಯ ಮತ್ತೆ ಮರಳಿ ಸಿಗುವುದಿಲ್ಲ” ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, […]

Read More

ಭಕ್ತಿಭಾವದಿಂದ ನಡೆದ ಸಾಪ್ತಾಹಿಕ ಭಜನಾ ಸಂಕೀರ್ತನ ಸೇವೆ

ಮಂಗಳೂರು, ಜುಲೈ 20: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ, ಸೋಮವಾರ ಸಂಜೆ ನಡೆದ ಭಜನಾ ಸೇವೆಯು ಭಕ್ತಿಭಾವದಿಂದ ನೆರವೇರಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ನಾರಾಯಣ ಗುರು ಸೇವಾ ಮಂದಿರ, ಕೂಳೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಹಾಡುವ ಮೂಲಕ ಶ್ರೀ ಗೋಕರ್ಣನಾಥ ಹಾಗೂ ಬ್ರಹ್ಮಶ್ರೀ […]

Read More

ಅಧ್ಯಕ್ಷರಾಗಿ ಜೀವನ್ ಕೊಲ್ಯ ಆಯ್ಕೆ

ಕೊಲ್ಯ ಜುಲೈ 19 : ಯುವವಾಹಿನಿ (ರಿ) ಕೊಲ್ಯ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಜೀವನ್ ಕೊಲ್ಯ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು : ಜೀವನ್ ಕೊಲ್ಯಪ್ರಥಮ ಉಪಾಧ್ಯಕ್ಷರು : ಜೀವನ್ ಬೆರಿಕೆದ್ವಿತೀಯ ಉಪಾಧ್ಯಕ್ಷರು : ಲತೀಶ್ ಪಾಪುದಡಿಕಾರ್ಯದರ್ಶಿ : ಮುಕೇಶ್ ಕಿನ್ಯಜೊತೆ ಕಾರ್ಯದರ್ಶಿ : ಭಾಸ್ಕರ್ ಮಡ್ಯಾ‌ರ್ಕೋಶಾಧಿಕಾರಿ : ಅನಿತಾ ಸುಂದರ್ ನಿರ್ದೇಶಕರುನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಶಶಿಕಾಂತ್ ಪರ್ಯಾತ್ತೂರ್ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸವಿತಾ ಬಂಗೇರಕ್ರೀಡಾ […]

Read More

ಗುರು ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಹೊನ್ನಪ್ಪ ಕೈಂದಾಡಿ

ಸುಳ್ಯ, ಜುಲೈ 19 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಜೂನ್ ತಿಂಗಳ ‘ಗುರುಸ್ಪೂರ್ತಿ’ ಕಾರ್ಯಕ್ರಮವು ಘಟಕದ ಪೂರ್ವಾಧ್ಯಕ್ಷ ಸುನಿಲ್ ಪೂಜಾರಿ ಕಳಂಜಪಟ್ಟೆ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಹೊನ್ನಪ್ಪ ಕೈಂದಾಡಿ ಅವರು ನಾರಾಯಣಗುರುಗಳ ಸಂದೇಶವನ್ನು ನೀಡುತ್ತಾ, ಗುರುಗಳ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸೌಹಾರ್ದತೆ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕೆಂದು ಕರೆ ನೀಡಿದರು. ಯುವವಾಹಿನಿ (ರಿ.) ಸುಳ್ಯ ಘಟಕದ ಅಧ್ಯಕ್ಷ ಮಹೇಶ್ ಕಲ್ಪಣೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ […]

Read More

ಕ್ರೀಡೆ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ: ರೋಹಿತ್ ಎಸ್

ಬೆಂಗಳೂರು, ಜುಲೈ 19: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ “ಕೋಟಿ ಚೆನ್ನಯ್ಯ ಟ್ರೋಫಿ – ಸೀಸನ್ 2” ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಸಂಭ್ರಮ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿತ್ಯಾನಂದ ಶೆಟ್ಟಿ ಹಾಗೂ ನಂಜುಂಡ ಪೂಜಾರಿ ಅವರು, ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. […]

Read More

ಆಟಿ ಅನಿಷ್ಟವಲ್ಲ ಆತ್ಮಸ್ಟೈರ್ಯ ತುಂಬುವ ಕಾಲ -ಪ್ರೋ. ಭಾಸ್ಕರ್ ರೈ ಕುಕ್ಕುವಲ್ಲಿ

ಬಜಪೆ ಜುಲೈ 19 : ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ -ಕರಂಬಾರು ಇವರ ಸಹಕಾರದಲ್ಲಿ “ಆಟಿದ ನೆಂಪು -2026” ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಬಜಪೆ ಇಲ್ಲಿ 19.07.2026 ರಂದು ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಊರಿಗೆ ಬಂದ ಮಾರಿ ರೋಗದ ಕಳೆ ರುಜಿನದ ಕೊಳೆಯ ಕಳೆಯುತ್ತಾ ಮನೆಯಂಗಳಕ್ಕೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!