19-07-2026, 2:00 PM
ಕೊಲ್ಯ ಜುಲೈ19 : ಯುವವಾಹಿನಿ (ರಿ) ಕೊಲ್ಯ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುಪೂಜೆಯೊಂದಿಗೆ ಘಟಕದ ಅಧ್ಯಕ್ಷ ನಿತಿನ್ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 19.07.2026ರಂದು ನಡೆಯಿತು ಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ–ಸೋಮೇಶ್ವರದ ಅಧ್ಯಕ್ಷ ಶೇಷಪ್ಪ ಬೈದ್ಯಮನೆ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಕಳೆದ ಒಂದು ವರ್ಷದ […]
Read More
19-07-2026, 2:00 PM
ಸುರತ್ಕಲ್, ಜುಲೈ 19 : ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ “ಆಟಿದ ಐಸಿರ -2026” ಕಾರ್ಯಕ್ರಮವು 19-07-2026ರಂದು ಗುಡ್ಡೆಕೊಪ್ಲದ “ಮಾತೃಕೃಪಾ”ದಲ್ಲಿ ಘಟಕದ ಅಧ್ಯಕ್ಷೆ ರೇವತಿ ನವೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮನೆಯಂಗಳಕ್ಕೆ ಆಗಮಿಸಿದ ಆಟಿಕಳೆಂಜನಿಗೆ ಪುಷ್ಪ ಅವರು ಪಡಿಯಕ್ಕಿ ಸುರಿಯುವ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಿಕ್ಷಕಿ, ನಿರೂಪಕಿ ಹಾಗೂ ಜೈ ತುಳುನಾಡು (ರಿ.) ಬಂಟ್ವಾಳ ಘಟಕದ ಸಂಘಟನಾ ಕಾರ್ಯದರ್ಶಿ ರೇಣುಕಾ ಕಾಣಿಯೂರ್ ಅವರು ಮಾತನಾಡಿ, “ಆಟಿದ […]
Read More
19-07-2026, 9:00 AM
ನಿಯಮಾವಳಿ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ, 2026ರ ಆಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಯುವವಾಹಿನಿ ಭಜನಾ ಸ್ಪರ್ಧೆ–2026ರ ನಿಯಮಾವಳಿ ಈ ಕೆಳಗಿನಂತಿದೆ. 🔹 ಅರ್ಹತೆ ಮತ್ತು ಸದಸ್ಯತ್ವ1) ಇದು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾದ ಅಂತರ್ಘಟಕ ಭಜನಾ ಸ್ಪರ್ಧೆಯಾಗಿದೆ.2) ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ ವಾರ್ಷಿಕ ಸದಸ್ಯತ್ವ ಶುಲ್ಕ ಪಾವತಿಸಿ, ಕೇಂದ್ರ ಸಮಿತಿಯಿಂದ ಅನುಮೋದನೆಗೊಂಡ ಸದಸ್ಯತ್ವ ಸಂಖ್ಯೆ […]
Read More
16-07-2026, 8:30 PM
ಬಂಟ್ವಾಳ, ಜುಲೈ 16: “ಶ್ರೀ ನಾರಾಯಣಗುರುಗಳ ಸಂದೇಶಗಳು ಇಂದಿನ ಸಮಾಜ ಮತ್ತು ಜೀವನ ಮೌಲ್ಯಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಸಮಾನತೆ, ಮಾನವೀಯತೆ, ಶಿಕ್ಷಣ ಹಾಗೂ ಸೌಹಾರ್ದತೆಯ ಕುರಿತು ಗುರುದೇವರು ನೀಡಿದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ,” ಎಂದು ಶಿಕ್ಷಕಿ ತ್ರಿವೇಣಿ ರಮೇಶ್ ಹೇಳಿದರು. ಅವರು ದಿನಾಂಕ 16-07-2026 ರಂದು ನರಹರಿನಗರ, ಕಲ್ಲಡ್ಕದ ಶೇಖರ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಗುರುತತ್ವವಾಹಿನಿ ಮಾಲಿಕೆ–71ರ ಭಜನಾ […]
Read More
16-07-2026, 8:30 PM
ಉಡುಪಿ, ಜು. 16: ಯುವ ವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಜುಲೈ 16ರಂದು ಗುರುವಾರ ಸಂಜೆ ಬಿಂದಿಯವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಮನೆಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗುರು ಸತ್ಸಂಗ ಹಾಗೂ ಭಜನಾ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು. ಮುಖ್ಯೋಪಾಧ್ಯಾಯರು ಹಾಗೂ ಕಾರ್ಯಕ್ರಮದ ನಿರೂಪಕರಾದ ರಘುರಾಮ್ ಕೋಟ್ಯಾನ್ ಅವರು ಗುರು ಸಂದೇಶ ನೀಡಿ, ಯುವ ವಾಹಿನಿಯು ಯುವಜನತೆಗೆ ಪ್ರೇರಣೆಯಾಗುವ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾಗಿದ್ದು, ಸಮಾಜಕ್ಕೆ […]
Read More
16-07-2026, 6:00 PM
ಕುಪ್ಪೆಪದವು, ಜುಲೈ 16: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ಸಕ್ರಿಯ ಸದಸ್ಯೆ ಹರೀನಾಕ್ಷಿ ಅವರು ಆಕಸ್ಮಿಕವಾಗಿ ಬಿದ್ದು ಕಾಲಿನ ಮೂಳೆ ಮುರಿತಕ್ಕೊಳಗಾದ ಹಿನ್ನೆಲೆಯಲ್ಲಿ, ಘಟಕದ ವತಿಯಿಂದ ಆರೋಗ್ಯ ನಿಧಿಯಡಿ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಪದಾಧಿಕಾರಿಗಳು, ಸದಸ್ಯರ ಸಂಕಷ್ಟದ ಸಂದರ್ಭದಲ್ಲಿ ಯುವವಾಹಿನಿ ಸದಾ ಅವರೊಂದಿಗೆ ನಿಲ್ಲುವ ಬದ್ಧತೆಯನ್ನು ಹೊಂದಿದ್ದು, ಆರೋಗ್ಯ ನಿಧಿಯಂತಹ ಯೋಜನೆಗಳು ಸದಸ್ಯರಿಗೆ ನೆರವಾಗುವ ಮಹತ್ವದ ಉಪಕ್ರಮಗಳಾಗಿವೆ ಎಂದು ತಿಳಿಸಿದರು. ಹರೀನಾಕ್ಷಿ ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದರು. ಧನಸಹಾಯ ವಿತರಣೆಯ […]
Read More
16-07-2026, 4:00 PM
ಬೆಳ್ತಂಗಡಿ, ಜುಲೈ 16: “ಯುವವಾಹಿನಿಯು ಕೇವಲ ಒಂದು ಸಂಘಟನೆಯಲ್ಲ; ಸಮಾಜವನ್ನು ಬೆಸೆಯುವ ಮಹತ್ವದ ಶಕ್ತಿಯಾಗಿದೆ” ಎಂದು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು. ಅವರು ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ, ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ, ಉತ್ತಮ ನಾಯಕರನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ […]
Read More
16-07-2026, 2:00 PM
ಮಾಣಿ, ಜುಲೈ 16: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಘಟಕದ ಸದಸ್ಯರ ಮಕ್ಕಳಿಗೆ ‘ಪ್ರತಿಭಾ ಗೌರವ ಅಭಿನಂದನಾ ಕಾರ್ಯಕ್ರಮ’ ಆಯೋಜಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಆಧ್ಯಾ ಎಂ.ಎಸ್., ಗ್ರೀಷ್ಮಾ, ಪ್ರಗತಿ ಆರ್. ಸಾಲ್ಯಾನ್, ಹನ್ಶಿಕಾ ಎಸ್.ಡಿ. ಪೂಜಾರಿ, ಕೌಶಿಕ್, ದಿಶಾ ಕೆ. ಪೂಜಾರಿ, ದಿಶಾಂತ್ ಪೂಜಾರಿ ಹಾಗೂ ಪೂರ್ವಿ ಬಿ.ಕೆ. ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದ […]
Read More
16-07-2026, 1:00 PM
ಉಪ್ಪಿನಂಗಡಿ, ಜುಲೈ 16: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್ಗಳಿಗೆ ಭೇಟಿ ನೀಡಿ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ. ರಮ್ಯಾ ರಾಜಾರಾಮ್, ಡಾ. ಎಂ.ಆರ್. ಶೆಣೈ, ಡಾ. ಕೆ.ಜಿ. ಭಟ್, ಡಾ. ಎಂ.ಎನ್. ಭಟ್, ಡಾ. ರಘು, ಡಾ. ಸದಾನಂದ ಕುಂದರ್, ಡಾ. ಆಶಿತ್ ಎಂ.ವಿ., ಡಾ. ಶ್ವೇತಾ ಆಶಿತ್, […]
Read More
16-07-2026, 1:00 PM
ಉಪ್ಪಿನಂಗಡಿ, ಜುಲೈ 16: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಉಪ್ಪಿನಂಗಡಿ ಸರ್ಕಲ್ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯ ಅವರ ಹೆಸರನ್ನು ನಾಮಕರಣ ಮಾಡುವುದರ ಜೊತೆಗೆ, ಅವರ ಪ್ರತಿಮೆಯನ್ನು ನಿರ್ಮಿಸಿ ಮುಂದಿನ ಪೀಳಿಗೆಗೆ ಅವರ ದೇಶಸೇವೆ ಹಾಗೂ ತ್ಯಾಗವನ್ನು ಶಾಶ್ವತವಾಗಿ ಪರಿಚಯಿಸುವಂತೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ […]
Read More