28-06-2026, 2:00 PM
ಶಕ್ತಿನಗರ, ಜೂನ್ 28: ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ […]
Read More
28-06-2026, 1:00 PM
ಮಾಣಿ, ಜೂ. 28: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಯುವ ಸದಸ್ಯತ್ವ ಅರಿವು, ನಾಯಕತ್ವ ತರಬೇತಿ ಹಾಗೂ ವಿದ್ಯಾರ್ಥಿ ಅಭಿನಂದನಾ ಕಾರ್ಯಕ್ರಮ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜೇಶ್ ಸುವರ್ಣ, ಬಂಟ್ವಾಳ ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪ್ರೌಢಶಾಲಾ ಮಂಡಳಿಯ ಅಧ್ಯಕ್ಷ ಕಿರಣ್ ಹೆಗ್ಡೆ ಮಾತನಾಡಿ, “ಯುವಜನರಲ್ಲಿ ಸಂಘಟನಾ ಮನೋಭಾವ, […]
Read More
28-06-2026, 1:00 PM
ಬೆಂಗಳೂರು, ಜೂ. 28: ಯುವವಾಹಿನಿ (ರಿ.) ಬೆಂಗಳೂರು ಘಟಕದ ನೂತನ ಕಚೇರಿಯನ್ನು ಚಿಕ್ಕಬಿದಿರೆಕಲ್ಲು ಸಮೀಪದ ಭವಾನಿನಗರದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಭಾನುವಾರ ಉದ್ಘಾಟಿಸಲಾಯಿತು. ಗುರುಗಳಾದ ಜಯಂತ್ ಸಾಲಿಯಾನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್ ಹಾಗೂ ಸುಧೀರ್ ಎಸ್.ಪಿ. ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶ್ರೀಧರ್ ಡಿ., ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೋಟ್ಯಾನ್, ನಿಕಟಪೂರ್ವ ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ, ನೂತನ ಅಧ್ಯಕ್ಷ […]
Read More
28-06-2026, 1:00 PM
ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಾಮಾಜಿಕ ಜಾಲತಾಣ ಹಾಗೂ ವೆಬ್ಸೈಟ್ ಸಂಪಾದಕರಾದ ರಾಜೇಶ್ ಸುವರ್ಣ ಅವರು ಯುವಕರಿಗೆ ಸದಸ್ಯತ್ವದ ಮಹತ್ವ, ನಾಯಕತ್ವದ ಗುಣಗಳು […]
Read More
28-06-2026, 10:00 AM
ಮಾಣಿ: “ಮರದ ನೆರಳು – ಬದುಕಿಗೆ ನೆರಳು” ಎಂಬ ಮಹೋನ್ನತ ಧ್ಯೇಯದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿದ್ದ “ಯುವ ವೃಕ್ಷೋತ್ಸವ” ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಘಟಕವು 20 ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿತು. ಅಭಿಯಾನದ ಸಮಾರೋಪ ಕಾರ್ಯಕ್ರಮವು ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಈ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು […]
Read More
27-06-2026, 5:30 PM
ಪುತ್ತೂರು, ಜೂನ್ 27: ಸಮಾಜಸೇವೆಯ ಅಂಗವಾಗಿ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಕೊಯಿಲತಡ್ಕ ಅಂಗನವಾಡಿ ಕೇಂದ್ರಕ್ಕೆ ಅಗತ್ಯವಿದ್ದ ಡಿಜಿಟಲ್ ಸ್ಕೇಲ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಅಂಗನವಾಡಿ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘಟಕದ ವತಿಯಿಂದ ಡಿಜಿಟಲ್ ಸ್ಕೇಲ್ ಅನ್ನು ಹಸ್ತಾಂತರಿಸಲಾಯಿತು. ಮಕ್ಕಳ ಆರೋಗ್ಯದ ಮೇಲ್ವಿಚಾರಣೆ ಹಾಗೂ ಬೆಳವಣಿಗೆಯನ್ನು ನಿಖರವಾಗಿ ದಾಖಲಿಸಲು ಈ ಉಪಕರಣವು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಪುತ್ತೂರು ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಸಂಘಟನಾ ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ […]
Read More
26-06-2026, 1:00 PM
ವೇಣೂರು ಜೂನ್ 26: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ “ಬೆಳಕು” ಯೋಜನೆಯಡಿ ಸಮಾಜಮುಖಿ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡು, ಬೆಳ್ತಂಗಡಿ ತಾಲೂಕಿನ ಪೇರಿ–ಹೊಸಂಗಡಿ ಗ್ರಾಮದ ಶ್ರೀಮತಿ ಬೇಬಿ ಅವರ ಮನೆಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು. ಈ ಕಾರ್ಯಕ್ರಮವು ದಿನಾಂಕ 26-06-2026ರಂದು ಪೇರಿ–ಹೊಸಂಗಡಿ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್ ನಾರಾವಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನ ಹಾಗೂ “ಆಸರೆ” ಯೋಜನೆ ಕುರಿತು ಚರ್ಚಿಸಿ, […]
Read More
25-06-2026, 11:00 PM
ಮಾಣಿ, ಜೂನ್ 25: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮಜಿ ವೀರಕಂಭ ಶಾಲೆಯ ಮುಖಮಂಟಪದ ಮೇಲ್ಚಾವಣಿಗೆ ಅಳವಡಿಸಲಾದ ಶೀಟ್ಗಳ ಸಮರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮ ಮತ್ತು “ಯುವ ವೃಕ್ಷೋತ್ಸವ–2026” ಕಾರ್ಯಕ್ರಮವು ಗುರುವಾರ ಶಾಲಾ ಆವರಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಅಶೋಕ್ ಪಡ್ಪು ಮಾತನಾಡಿ, “ಶಾಲೆಗಳ ಅಭಿವೃದ್ಧಿಗೆ ನೀಡುವ […]
Read More
25-06-2026, 8:00 PM
ಉಡುಪಿ, ಜೂನ್ 25: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಗುರುವಾರ ಸಂಜೆ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಸಂದೇಶ್ ಕಟಪಾಡಿ ಅವರ ಆತಿಥ್ಯದಲ್ಲಿ ಕಟಪಾಡಿಯಲ್ಲಿರುವ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಜನಾ ಸಂಕೀರ್ತನೆ ನಡೆಸಿದರು. ಬಳಿಕ ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಸುವರ್ಣ ಅವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ, ಎಲ್ಲರಿಗೂ ಮಹಾಪ್ರಸಾದ ವಿತರಿಸಿದರು. ಗುರು ಸಂದೇಶ ನೀಡಿದ ಖ್ಯಾತ ನಿರೂಪಕರು ಹಾಗೂ ಘಟಕದ […]
Read More
25-06-2026, 11:00 AM
ಉಡುಪಿ, ಜೂನ್ 25: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ “ಮನೆಗೊಂದು ಮರ – ಊರಿಗೊಂದು ವನ” ಅಭಿಯಾನಕ್ಕೆ ಗುರುವಾರ ಸಂಜೆ ಕಟಪಾಡಿಯಲ್ಲಿರುವ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಸಂದೇಶ್ ಕಟಪಾಡಿ ಅವರ ನಿವಾಸದ ಪರಿಸರದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ಹಾಗೂ ಯುವವಾಹಿನಿ (ರಿ.) ಉಡುಪಿ ಘಟಕದ ಸಮಾಜ ಸೇವಾ ನಿರ್ದೇಶಕ ಸುಜಿತ್ ಮಟ್ಟು ಅವರು ಗಿಡಗಳನ್ನು ವಿತರಿಸುವ ಮೂಲಕ […]
Read More