Yuvavahini

ಘಟಕಗಳು

ರಕ್ಷಾ ಬಂಧನ ಗುರುನಮನ, ವಿದ್ಯಾರ್ಥಿವೇತನ ವಿತರಣೆ

ವೇಣೂರು: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ರಕ್ಷಾ ಬಂಧನ ,ಗುರುನಮನ, ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ದಿನಾಂಕ 26.08.2018 ರಂದು ಮೂಡುಕೋಡಿ ಯೋಗೀಶ್ ಪೂಜಾರಿಯವರ ಮನೆಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರಾದ ನಿತೀಶ್ ಎಚ್ ವಹಿಸಿದ್ದರು , ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಜಯ ಪೂಜಾರಿ ನಾರಾವಿ ಮಾತನಾಡುತ್ತಾ ರಕ್ಷಾ ಬಂಧನದ ಮೂಲಕ ಯುವಕರಲ್ಲಿ ಸಹೋರತೆ ಗಟ್ಟಿಯಾಗುತ್ತದೆ, ವಿದ್ಯಾರ್ಥಿವೇತನ ನೀಡುವ ಮೂಲಕ ಗುರುನಮನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಮಾತನಾಡುತ್ತಾ ನಮ್ಮ ಘಟಕವು ಹಲವಾರು […]

Read More

ಎಂಡೋ ಪಾಲನಾ ಕೇಂದ್ರಕ್ಕೆ ಕೊಡುಗೆ

ಪುತ್ತೂರು : ಯುವವಾಹಿನಿ(ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಯುವವಾಹಿನಿ ಸಂಚಲನ ಸಮಿತಿ ನರಿಮೊಗರು ಮತ್ತು ಬಿಲ್ಲವ ಗ್ರಾಮ ಸಮಿತಿ ನರಿಮೊಗರು ಇದರ ವತಿಯಿಂದ ದಿನಾಂಕ 25/8/2018 ಶನಿವಾರದಂದು ನಡೆದ ಕಾರ್ಯಕ್ರಮದಲ್ಲಿ ಎಂಡೋ ಪೀಡಿತರ ಪಾಲನ ಕೇಂದ್ರ ಕ್ಯೊಲ, ಇಲ್ಲಿನ ಎಂಡೊ ಪೀಡಿತ ಮಕ್ಕಳಿಗೆ ಬಟ್ಟೆಬರೆ ಕೊಡುಗೆಯಾಗಿ ನೀಡಲಾಯಿತು. . ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ SSLCಯಲ್ಲಿ 77% ಅಂಕ ಪಡೆದು ವಿಶಿಷ್ಟ ಸಾದನೆ ಮಾಡಿದ ನಮ್ಮ ಸಮುದಾಯದ ಎಂಡೋ ಪೀಡಿತ […]

Read More

ಮದುವೆ ಸಮಾರಂಭದಲ್ಲಿ ಹೀಗೊಂದು ಸಹಾಯಹಸ್ತ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಸದಸ್ಯರಾದ ಮಹೇಶ್ ಕನೀರುತೋಟ ಇವರ ಸಹೋದರಿಯ ಶುಭವಿವಾಹವು ದಿನಾಂಕ 19.08.2018 ರಂದು ಅಡ್ಕ ಶ್ರೀ ಭಗವತಿ ಸಭಾಭವನದಲ್ಲಿ ಜರಗಿತು. ಈ ಶುಭವಿವಾಹದ ಶುಭಸಮಾರಂಭದಲ್ಲಿ ವಧೂ-ವರರ ಕುಟುಂಬಸ್ಥರ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸರ್ವ ಸದಸ್ಯರ ಸಹಕಾರದಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿದ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹ ಕಾರ್ಯಕ್ರಮವನ್ನು ಶುಭವಿವಾಹದ ಸಭಾಂಗಣದಲ್ಲಿ ಆಯೋಜಿಸಿದ್ದು ,ನೂತನ ವಧು ವರರಿಗೆ ಶುಭಹಾರೈಸಲು ಬಂದಂತಹ ನೆಂಟರಿಷ್ಟರೆಲ್ಲರೂ ಈ ನಿಧಿಸಂಗ್ರಹಣಾ ಕಾರ್ಯಕ್ರಮಕ್ಕೆ ಸ್ಪಂದಿಸಿ ತಮ್ಮ […]

Read More

ಉಚಿತ ದಂತ ಚಿಕಿತ್ಸಾ ಶಿಬಿರ

ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕ ಹಾಗೂ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ಮುಕ್ಕ ಇವರ ಜಂಟಿ ಆಶ್ರಯದಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇದರ ಸಭಾಭವನದಲ್ಲಿ ದಿನಾಂಕ 19.08.2018 ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಸೇಸಪ್ಪ ಅಮೀನ್ ರವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂದಿರದ ಗೌರವ ಅಧ್ಯಕ್ಷ ರಾದ ವಿಶ್ವಾನಂದ ಶೆಟ್ಟಿ,ಗೌರವ ಸಲಹೆಗಾರರಾದ ಜಗನ್ನಾಥ ಸಾಲ್ಯಾನ್ ,ಶ್ರೀನಿವಾಸ್ […]

Read More

ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ರಸ್ತೆ ದುರಸ್ತಿ

ಬೆಳ್ತಂಗಡಿ : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಓಡಿಲ್ನಾಳದ ಸಂಚಾಲನ ಸಮಿತಿ ಸದಸ್ಯರಿಂದ ದಿನಾಂಕ 19.08.2018 ರಂದು ಮಳೆಯಿಂದ. ಸಂಪೂರ್ಣವಾಗಿ ಹದಗೆಟ್ಟ ಪಣೆಜಾಲು ಅದೇಲು ಸಂಪರ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಕುವೆಟ್ಟು ಇವರ ಸಹಕಾರದೊಂದಿಗೆ ದುರಸ್ತಿಗೋಳಿಸಿದರು.ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಶಶಿದರ್ ಅದೇಲು ಸಲಹೆಗಾರದ ರವಿ ಪೂಜಾರಿ ಅದೇಲು ಸಮಿತಿಯ ಕಾರ್ಯದರ್ಶಿ ನಾಗೇಶ್ ಪೂಜಾರಿ ಅದೇಲು ಸದಸ್ಯರಾದ ಬಾಬು ಪೂಜಾರಿ ಅದೇಲು ನವೀನ್ ಅದೇಲು ರಮೇಶ್ ಅದೇಲು ನೀತೇಶ್ ಅದೇಲು ರಕ್ಷಿತ್ ಅದೇಲು ವಿಶ್ವನಾಥ್ ಪೂಜಾರಿ […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ವಾರ್ಷಿಕ ಕ್ರೀಡಾಕೂಟ

ಹಳೆಯಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ164ನೇ ಜನ್ಮ ದಿನದ ಪ್ರಯುಕ್ತ ಜರಗಿಸಲಾದ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 19-08-2018 ರಂದು ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ (ರಿ) ಹಳೆಯಂಗಡಿಯ ಸಂಯುಕ್ತ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಉದ್ಯಮಿ ಸದಾಶಿವ ಎನ್.ಎಸ್ ಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಅಧ್ಯಕ್ಷರಾದ ಚಂದ್ರಶೇಖರ ನಾನಿಲ್,ಯುವವಾಹಿನಿ ಅಧ್ಯಕ್ಷ ಹೇಮನಾಥ ಬಿ.ಕರ್ಕೇರ ನಿಕಟಪೂರ್ವ ಅಧ್ಯಕ್ಷ ಶರತ್ ಕುಮಾರ್, ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್ ಸುವರ್ಣ ಪ್ರಧಾನ ಕಾರ್ಯದರ್ಶಿ […]

Read More

ಗುರುಜಯಂತಿ ಪ್ರಯುಕ್ತ ಕೆಸರು ಗದ್ದೆ ಕ್ರೀಡಾಕೂಟ ಕ್ರೀಡಾಕೂಟ

  ಹೆಜಮಾಡಿ : ಯುವವಾ‌‌ಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಬೃಹ್ಮಶ್ರಿ ನಾರಾಯಣ ಗುರುಗಳ 164ನೇ ಜಯಂತಿಯ ಅಂಗವಾಗಿ ದಿನಾಂಕ 19/08/2018 ರ ಆದಿತ್ಯವಾರದಂದು ಹೆಜಮಾಡಿ ಬಿಲ್ಲವರ ನಾಲ್ಕು ಕರೆಯ ಹತ್ತು ಸಮಸ್ತರಿಗೆ ಹಾಗೂ ಸಾರ್ವಜನಿಕರಿಗೆ ದಿ. ಸೋಮಪ್ಪ ಪೂಜಾರಿಯವರ ಗದ್ದೆಯಲ್ಲಿ ಜರಗಿದ ಕೆಸರು ಗದ್ದೆ ಕ್ರೀಡಾಕೂಟವನ್ನು ಯುವವಾಹಿನಿ ಹಳೆಯಂಗಡಿ ಘಟಕದ ಅಧ್ಯಕ್ಷ ದಿನೇಶ್ ಹೆಜಮಾಡಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಲ ಗರಡಿ ಹೆಜಮಾಡಿಯ ಪ್ರಧಾನ ಅರ್ಚಕರಾದ ಶೀ ಗುರುರಾಜ್ ಅಮೀನ್ ರವರು ಜ್ಯೋತಿ ಬೆಳಗಿಸಿ […]

Read More

ಮಾತು ಕೃತಿಯೊಡನೆ ಸೇರಿದಾಗ ಮಾತ್ರ ಆಡಿದ ಮಾತಿಗೆ ಬೆಲೆ : ನಡುಬೈಲು

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ದಿನಾಂಕ 19.08.2018 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಅಶೋಕ್ ಎಮ್.ಸುವರ್ಣ ಸಮಾರಂಭ ಉದ್ಘಾಟಿಸಿದರು. 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದ ಯುವವಾಹಿನಿ ಕೇಂದ್ರ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ ಮನುಷ್ಯರಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಸಮಯ ಪ್ರಜ್ಞೆ ,ಪರೋಪಕಾರ ದಂತಹ ಗುಣಗಳು ಮೇಳೈಸಿದಾಗ ಸ್ವಸ್ಥ ಸಮಾಜದ ನಿರ್ಮಾಣ […]

Read More

ಅಧ್ಯಕ್ಷರಾಗಿ ರಿತೇಶ್ ಬಿ.ಕೋಟ್ಯಾನ್ ಆಯ್ಕೆ

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಿತೇಶ್.ಬಿ.ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್.ಡಿ.ಕೆ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ರಿತೇಶ್ ಬಿ ಕೋಟ್ಯಾನ್ ಉಪಾಧ್ಯಕ್ಷರು : ಮಧುಕರ್ ಅಂಚನ್ ಕಾರ್ಯದರ್ಶಿ : ಕಾರ್ತಿಕ್ ಡಿ.ಕೆ ಜೊತೆ ಕಾರ್ಯದರ್ಶಿ : ಜೀವನ್ ವಿ.ಎಸ್ ಕೋಶಾಧಿಕಾರಿ : ಕಮಲಾಕ್ಷ ಅಂಬಾಡಿ ಜೊತೆ ಕೋಶಾಧಿಕಾರಿ : ಭಾಸ್ಕರ್ ಪೂಜಾರಿ   ನಿರ್ದೇಶಕರು ಕ್ರೀಡೆ : ನಿತಿನ್ ಸುವರ್ಣ ನಾರಾಯಣಗುರು ತತ್ವಪ್ರಚಾರ ಅನುಷ್ಠಾನ   : […]

Read More

ಸೇನೆಗೆ ಸೇರುವಂತೆ ಯುವಜನಾಂಗಕ್ಕೆ ಪ್ರೇರಣೆ ಅಗತ್ಯ : ಮಹಂತೇಶ್ ಗಡದ್

ಮಂಗಳೂರು : ಭಾರತೀಯ ಸೇನೆಗೆ ಸೇರುವಂತೆ ಇಂದಿನ ಯುವಜನಾಂಗಕ್ಕೆ ಪ್ರೇರಣೆ ನೀಡುವ ಕಾರ್ಯ ನಡೆಯಬೇಕಾಗಿದೆ. ಎಂದು ಅಭಿನಂದನೆ ಸ್ವೀಕರಿಸಿದ ಮಹಂತೇಶ್ ಗಡದ್ ತಿಳಿಸಿದರು ಮತ್ತು ಯುವವಾಹಿನಿಗೆ ಕೃತಜ್ಞತೆ ತಿಳಿಸಿದರು. ದಿನಾಂಕ‌ 18.08.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಯುವವಾಹಿನಿ ಸಭಾಂಗಣದಲ್ಲಿ ಭಾರತೀಯ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ‌ ಘಟಕದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಭಾರತೀಯ ಭೂಸೇನೆಯಲ್ಲಿ 17 ವರ್ಷಗಳ ಅಮೂಲ್ಯ ಸೇವೆ ಸಲ್ಲಿಸಿದ ಹವಾಲ್ದಾರ್ ಮಹಂತೇಶ್ ಗಡದ್ ಇವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!