Yuvavahini

ಘಟಕಗಳು

ಯುವವಾಹಿನಿ ಎಂಬುದು ದೇಗುಲ : ಜಯಾನಂದ

ಉಡುಪಿ : ಸಾಮೂಹಿಕ ಪ್ರಯತ್ನದಿಂದ ಮಾತ್ರ ಮಾದರಿ ಸಂಘಟನೆ ನಿರ್ಮಾಣ ಸಾಧ್ಯ, ಹಾಗೂ ಯುವವಾಹಿನಿ ಎಂಬ ದೇವಾಲಯದಲ್ಲಿ ಅಧ್ಯಕ್ಷರು ಅರ್ಚಕರಾಗಿ ಸದಸ್ಯರು ಭಕ್ತಾದಿಗಳೆಂಬ ಪರಿಕಲ್ಪನೆಯಲ್ಲಿ ಯುವವಾಹಿನಿ ಸಾಗುತ್ತಿರುವುದು ಶ್ಲಾಘನೀಯ ಎಂದು ಮೆಸ್ಕಾಮ್ ಕಾರ್ಯಪಾಲಕ‌ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 10.06.2018 ರಂದು ಉದ್ಯಾವರ ಬಲಾಯಿಪಾದೆ ಯುವವಾಹಿನಿ ಸಭಾಭವನದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ‌ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಗಣೇಶ್ ಕುಮಾರ್ […]

Read More

ಯುವವಾಹಿನಿಯಿಂದ ಯುವಜನತೆಗೆ ಜಾಗೃತಿ : ರಮೇಶ್ ಅಂಚನ್

ಪಡುಬಿದ್ರಿ : ಸಮಾಜದಲ್ಲಿ ಯುವಜನಾಂಗವು ದಾರಿ ತಪ್ಪುತ್ತಿರುವ ಸಂದರ್ಭದಲ್ಲಿ ಸಂಘಟನೆಗಳ ಮೂಲಕ ಜಾಗೃತಿ ಮೂಡಿಸುವುದು ಅನಿವಾರ್ಯ. ಹಲವಾರು ಸಮಸ್ಯೆಗಳ ನಿವಾರಣೆಗೆ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಬಿಲ್ಲವರ ಯೂನಿಯನ್, ಕುದ್ರೊಟ್ಟು, ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳ್ ಬಡಾದ ಕಾರ್ಯದರ್ಶಿ ರಮೇಶ್ ಅಂಚನ್ ತಿಳಿಸಿದರು.   ಅವರು ಪಡುಬಿದ್ರಿ ಬಿಲ್ಲವ ಸಂಘದ ಸಭಾ ಭವನದಲ್ಲಿ ಜರಗಿದ ಯುವವಾಹಿನಿ ಪಡುಬಿದ್ರಿ ಘಟಕದ 2018 ನೇ ಸಾಲಿನ ಪದಗ್ರಹಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು […]

Read More

ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿ ಯುವವಾಹಿನಿ : ನರೇಶ್

ಹೆಜಮಾಡಿ : ವಿಜ್ಞಾನ ಮುಂದುವರಿದಂತೆ ಮಾನವೀಯ ಮೌಲ್ಯಗಳು ವ್ಯವಹಾರವಾಗಿ ಬದಲಾಗುತ್ತಿದೆ, ಪ್ರೀತಿ, ವಿಶ್ವಾಸ , ನಂಬಿಕೆ, ಗೌರವ, ಸ್ನೇಹ ಇಲ್ಲದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಯುವವಾಹಿನಿ ಕೆಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ದಿನಾಂಕ‌10.06.2018 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಸಮಾರಂಭ […]

Read More

ಯುವವಾಹಿನಿ ವೇಣೂರು ಘಟಕದಿಂದ ಉಚಿತ ಪುಸ್ತಕ ವಿತರಣೆ

ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಕರಿಮಣೇಲು ತಿಮ್ಮಣ್ಣಬೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನಿತೀಶ್ ಎಚ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ವಲಯ ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪರನೀರು, ನಿರ್ದೇಶಕರಾದ ಲವಶಾಂತಿ‌ ಪರನೀರು, ಹರೀಶ್ ಪಿ.ಎಸ್, ಸತೀಶ್ ಕಾಂತಿಬೆಟ್ಟು, ಕೃಷ್ಣಪ್ಪ ಪೂಜಾರಿ, ಹರೀಶ್ ಪೂಜಾರಿ ದೇಲಂಪುರಿ, ಮತ್ತಿತರರು ಉಪಸ್ಥಿತರಿದ್ದರು

Read More

ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ

ಸುಳ್ಯ: ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ ಸಮಾರಂಭ ಜೂ.9 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವಸದನದಲ್ಲಿ ನಡೆಯಿತು.  ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ ವಿಠಲ್‍ದಾಸ್ ಬೆಳ್ಳಾರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಚಂದ್ರಶೇಖರ್ ಹೈದಂಗೂರು ನೇತೃತ್ವದ ನೂತನ ತಂಡ ಪ್ರತಿಜ್ನಾವಿಧಿ ಸ್ವೀಕರಿಸಿದರು . ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ […]

Read More

ಸಮಾಜದ ನೆಮ್ಮದಿ ಯುವವಾಹಿನಿಯ ಗುರಿ : ಯಶವಂತ ಪೂಜಾರಿ

ಪಣಂಬೂರು : ಅವ್ಯವಸ್ಥೆಯನ್ನು ತಿಂದುಂಡು ಹೊದ್ದು ಮಲಗೇಳುವ ನಮ್ಮ ಪರಿಸ್ಥಿತಿಯನ್ನು ಬದಲಾಯುಸೋ ಪ್ರಯತ್ನಕ್ಕೆ ಯುವವಾಹಿನಿ ಸಂಘಟನೆ ಅನಿವಾರ್ಯ ಹಾಗೂ ಆಗ ಮಾತ್ರ ಒಂದು ಸುಭದ್ರ ನಾಳೆ, ಒಂದು ನೆಮ್ಮದಿಯ ನಾಳೆ, ಒಂದು ನಿರಾತಂಕ ನಾಳೆ, ಒಂದು ಸ್ಪಷ್ಟ ನಾಳೆ, ಒಂದು ಸಮೃದ್ಧಿಯ ನಾಳೆ ನಿರ್ಮಾಣಕ್ಕೆ ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 09.06.2018 ರಂದು ಪಣಂಬೂರು, ನವಮಂಗಳೂರು ಬಂದರು ಮಂಡಳಿಯ ರಿಕ್ರಿಯೇಶನ್ ಕ್ಲಬ್ ಇಲ್ಲಿ ಯುವವಾಹಿನಿ(ರಿ) ಪಣಂಬೂರು ಘಟಕದ […]

Read More

ಬಡ ಕುಟುಂಬಕ್ಕೆ ಸಹಾಯ ಹಸ್ತ

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಬಡ ಕುಟುಂಬದ ಮನೆಯನ್ನು ವಾಸ ಮಾಡಲು ಯೋಗ್ಯವಾಗುವಂತೆ ಮಾಡಲಾಯಿತು. ಕಟಪಾಡಿ ಮೂಡಬೆಟ್ಟು ಗ್ರಾಮದ ಶ್ಯಾಮಲ‌ ಪುರಾಣಿಕ್ ಎಂಬವರ ಮನೆ ವಾಸಿಸಲು‌ ಅನಾನುಕೂಲತೆಯಿಂದ ಕೂಡಿದ್ದು, , ಯುವವಾಹಿನಿ ಕಟಪಾಡಿ ಘಟಕವು ರೂ 25,000/- ವೆಚ್ಚದಲ್ಲಿ ಶೌಚಾಲಯ ನಿರ್ಮಾಣದೊಂದಿಗೆ ಮನೆಯನ್ನು ವಾಸಿಸಲು ಯೋಗ್ಯವಾಗುವಂತೆ ಮಾಡಲಾಯಿತು. ಕಾಪು ಪೋಲೀಸ್ ಠಾಣಾ ಉಪನಿರೀಕ್ಷಕ ನಿತ್ಯಾನಂದ ಗೌಡ, ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷ […]

Read More

ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಅಶೋಕ್ ಕೋಟ್ಯಾನ್ ಉಪಾಧ್ಯಕ್ಷರು : ನಾರಾಯಣ್ .ಬಿ.ಎಸ್ ಕಾರ್ಯದರ್ಶಿ : ಪ್ರವೀಣ್ ಪೂಜಾರಿ ಜತೆ ಕಾರ್ಯದರ್ಶಿ : ಮಹಾಬಲ ಅಮೀನ್ ಕೋಶಾಧಿಕಾರಿ : ಯೋಗೀಶ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಭಾರತಿ ಭಾಸ್ಕರ್ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಮಾಲತಿ ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುಜಿತ್ ಕುಮಾರ್ ಸಮಾಜ ಸೇವೆ […]

Read More

ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ : ಯೋಗೀಶ್

ಕಂಕನಾಡಿ : ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ. ದೇಶದ ಅಭಿವೃದ್ಧಿ ಯಾಗಬೇಕಾದರೆ ಮಾನವರ ಅಭಿವೃದ್ಧಿಯಾಗಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳಿದ್ದರೆ ಮಾತ್ರ ಮಾನವರ ಅಭಿವೃದ್ಧಿ ಸಾಧ್ಯ ಎಂದು ರೋಶನಿ ನಿಲಯದ ಚೈಲ್ಡ್ ಲೈನ್ ನಗರ ಸಂಚಾಲಕರಾದ ಯೋಗಿಶ್ ಮಲ್ಲಿಗೆ ಮಾಡು ತಿಳಿಸಿದರು. ಅವರು ದಿನಾಂಕ 07-06-2018ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವಾರದ ಸಭೆಯಲ್ಲಿ “ತಂಬಾಕು ರಹಿತ ದಿನ” ಮತ್ತು “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಲ್ಲಿ ತಂಬಾಕು ಕೂಡ ಒಂದು. […]

Read More

ಅಧ್ಯಕ್ಷರಾಗಿ ದಿನೇಶ್ ಹೆಜಮಾಡಿ ಆಯ್ಕೆ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದಿನೇಶ್ ಹೆಜಮಾಡಿ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ದಿನೇಶ್ ಹೆಜಮಾಡಿ ಉಪಾಧ್ಯಕ್ಷರು : ಮೀನಾಕ್ಷಿ ದೇವದಾಸ್ , ಸುನೀತಾ.ಎನ್.ಕರ್ಕೇರ ಕಾರ್ಯದರ್ಶಿ : ಜಯಶ್ರೀ ಸದಾಶಿವ ಜತೆ ಕಾರ್ಯದರ್ಶಿ : ವಿಜಯ ಅನಿಲ್ ಕೋಶಾಧಿಕಾರಿ : ಧನುಂಜಯ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಪ್ರಕಾಶಿನಿ.ಎಸ್.ಕೋಟ್ಯಾನ್ ಕ್ರೀಡೆ ಮತ್ತು ಆರೋಗ್ಯ ; ದೀಪಾ ದಿನೇಶ್ , ಪ್ರತಿಮಾ ಸಮಾಜ ಸೇವೆ : ಮೋಹನ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!