Yuvavahini

ಘಟಕಗಳು

ಯುವವಾಹಿನಿ (ರಿ) ಸುರತ್ಕಲ್ ಘಟಕದಿಂದ ಎರಡು ದಿನಗಳ ಪ್ರವಾಸ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್‌ಸ್ಟ್ಯಾಂಡ್‌ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್‌ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್‌ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]

Read More

ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ

ಕಾರ್ಕಳ: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ “ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ” ಕಾರ್ಯಕ್ರಮವು ಜನವರಿ 3ರಂದು ಘಟಕದ ಪೂರ್ವಾಧ್ಯಕ್ಷರಾದ ಗಣೇಶ್ ಸಾಲ್ಯಾನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮವನ್ನು ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಸರಕಾರ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು […]

Read More

ನಾರಾಯಣಗುರುಗಳ ಸಂದೇಶ ಸಮಾಜದ ಸಮರಸತೆಗೆ ಪ್ರೇರಣೆ

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವು ಜಾತಿ–ಮತ–ಭೇದಗಳನ್ನು ಮೀರಿ ಮಾನವೀಯತೆಯ ಆಧಾರದ ಮೇಲೆ ಸಮಾಜವನ್ನು ಒಗ್ಗೂಡಿಸುವ ಶಾಶ್ವತ ಚಿಂತನೆಯಾಗಿದೆ. ಗುರುಗಳ ತತ್ತ್ವಗಳು, ಶಾಂತಿ, ಸೌಹಾರ್ದತೆ ಮತ್ತು ಸಮತೋಲನದ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ. ಗುರುಗಳ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸಮಾಜ ಸಮರಸತೆ ಸಾಧ್ಯವಾಗುತ್ತದೆ ಎಂಬ ಸತ್ಯವನ್ನು ಈ ಚಿಂತನೆ ನಮಗೆ ನೆನಪಿಸುತ್ತದೆ ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಜನವರಿ 01ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ರಾಮನಗರ ಮದ್ವದಲ್ಲಿ, ಯುವವಾಹಿನಿ ಬಂಟ್ವಾಳ […]

Read More

ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 30-12-2025ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕ ಸೌಮ್ಯ ಲಾಯಿಲಾ ಅವರ “ಕನಸು” ನಿವಾಸದಲ್ಲಿ ಯುವವಾಹಿನಿ ಕುಟುಂಬ ಸದಸ್ಯರ ಭಾಗವಹಿಸುವಿಕೆಯೊಂದಿಗೆ ನಡೆಯಿತು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಕಾರ್ಯಕ್ರಮವನ್ನು ಹಿರಿಯರಾದ ಗಿರಿಧರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, […]

Read More

ಶಿವಗಿರಿ ತೀರ್ಥಾಟನೆ

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಅನುಯಾಯಿಗಳ ತಂಡವು ದಿನಾಂಕ: 29- 12-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಕೇರಳದ ಶಿವಗಿರಿಯಲ್ಲಿ ಡಿಸಂಬರ್ 30, 31 ರಂದು ನಡೆಯಲಿರುವ ತೀರ್ಥಾಟನೆಯಲ್ಲಿ ಭಾಗವಹಿಸಲು ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.)ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ, ಹರೀಶ್ ವಿ. ಪಚ್ಚನಾಡಿ ಮತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಯುವವಾಹಿನಿ ಪೊರ್ಲಾ ಬಾಲೆ

ಯುವವಾಹಿನಿ (ರಿ.) ಕಾರ್ಕಳ ಘಟಕದ ಆಶ್ರಯದಲ್ಲಿ 6ನೇ ವರ್ಷದ “ಯುವವಾಹಿನಿ ಪೊರ್ಲಾ ಬಾಲೆ – 2025” ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಡಿಸೆಂಬರ್ 23ರಂದು ಮಂಗಳವಾರ ಸಂಜೆ 5.30ಕ್ಕೆ ಕಾರ್ಕಳದ ಶ್ರೀ ಕೃಷ್ಣ ಸಮುದಾಯ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಕೆರ್ವಾಸೆ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಾಲ್ ಕುಮಾರ್, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ […]

Read More

ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಆಯ್ಕೆ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ನಡೆದ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶದ ಸಂದರ್ಭದಲ್ಲಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಯುವವಾಹಿನಿಯ 38 ನೇ ವಾರ್ಷಿಕ ಸಮಾವೇಶದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಣೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೇಖಾಗೋಪಾಲ್, ಪ್ರಥಮ ಉಪಾಧ್ಯಕ್ಷರಾಗಿ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಕೋಶಾಧಿಕಾರಿಯಾಗಿ ಸತೀಶ್ ಕಿಲ್ಪಾಡಿ ಮೂಲ್ಕಿ, ಜತೆ ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ […]

Read More

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್. ಸಾಲ್ಯಾನ್ ಆಯ್ಕೆ

ಉಪ್ಪಿನಂಗಡಿ: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಮನೋಜ್ ಎನ್. ಸಾಲ್ಯಾನ್ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು: ಮನೋಜ್ ಎನ್. ಸಾಲ್ಯಾನ್ – ಸುಣ್ಣಾಜೆ ಪ್ರಥಮ ಉಪಾಧ್ಯಕ್ಷರು: ಅಂಕಿತ್ ಎಂ.ಜೆ. ದ್ವಿತೀಯ ಉಪಾಧ್ಯಕ್ಷರು: ಲಕ್ಷ್ಮೀಶ – ನಿಡ್ಡೆಂಕಿ ಕಾರ್ಯದರ್ಶಿ: ರಮೇಶ್ ಎಸ್. ಸಾಂತ್ಯ ಜೊತೆ ಕಾರ್ಯದರ್ಶಿ: ನಯನಾ ಮನೋಹರ್ ಕೋಶಾಧಿಕಾರಿ: ಸದಾಶಿವ ಬಂಗೇರ – ಎಲಿಯ ವ್ಯಕ್ತಿತ್ವ ವಿಕಸನ ನಿರ್ದೇಶಕರು: ವನಿತಾ ಕೃಷ್ಣಪ್ಪ […]

Read More

ಯುವವಾಹಿನಿ ಕಡಬ ಘಟಕದ ಅಧ್ಯಕ್ಷರಾಗಿ ಉಮೇಶ್ ಬಲ್ಪ ಆಯ್ಕೆ

ಕಡಬ : ಯುವವಾಹಿನಿ (ರಿ.) ಕಡಬ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಬಲ್ಪ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಉಮೇಶ್ ಬಳ್ಪ ಉಪಾಧ್ಯಕ್ಷರು : ಸರಿತಾ ಉಂಡಿಲ ಕಾರ್ಯದರ್ಶಿ:ಸತೀಶ್ ಕೊರಪ್ಪಣೆ ಜತೆ ಕಾರ್ಯದರ್ಶಿ: ರಾಜು ಪದವು ಕೋಶಾಧಿಕಾರಿ: ಸುಧಾಕರ ಪೂಜಾರಿ ಬಲ್ಯ ವ್ಯಕ್ತಿತ್ವ ವಿಕಸನ ನಿರ್ದೇಶಕರು : ರೇಖಾ ಐತ್ತೂರು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ದೀಕ್ಷಿತ್ ಪಣೆಮಜಲು ಸಮಾಜ […]

Read More

ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷರಾಗಿ ಮಹೇಶ್ ಕಲ್ಲಪಣೆ ಆಯ್ಕೆ

ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಹೇಶ್ ಕಲ್ಲಪಣೆ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು : ಮಹೇಶ್ ಕಲ್ಲಪಣೆಪ್ರಥಮ ಉಪಾಧ್ಯಕ್ಷರು : ನೂತನ ನೆಟ್ಟಾರುದ್ವಿತೀಯ ಉಪಾಧ್ಯಕ್ಷರು : ಬಾಲಕೃಷ್ಣ ತಡಗಜೆಕಾರ್ಯದರ್ಶಿ : ರಂಜಿತ್ ದರ್ಖಾಸ್ತುಜತೆ ಕಾರ್ಯದರ್ಶಿ : ಚಂದ್ರಾವತಿ ಸುಳ್ಯಕೋಶಾಧಿಕಾರಿ : ಹರೀಶ್ ದೋಳವ್ಯಕ್ತಿತ್ವ ವಿಕಸನ ನಿರ್ದೇಶಕರು : ಉಮೇಶ್ ಮಣಿಕ್ಕರಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ಲವಿನ್ ಸುಳ್ಯಸಮಾಜ ಸೇವಾ ನಿರ್ದೇಶಕರು : ಶಶಿಕಲಾ ನೀರಬಿದಿರೆಸಾಂಸ್ಕೃತಿಕ, ಕಲೆ ಮತ್ತು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!