Yuvavahini

ಘಟಕಗಳು

ಮೃತ ಯೋಗೀಶ್ ಪೂಜಾರಿ ಕುಟುಂಬಕ್ಕೆ ಸಾಂತ್ವನ

ಇತ್ತೀಚೆಗೆ ಬಡಗಬೆಳ್ಳೂರು ನಿವಾಸಿ ಯೋಗೀಶ್ ಪೂಜಾರಿ ವಿದ್ಯುತ್ ತಂತಿ ತಗುಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಈ ಸಾವಿನಿಂದಾಗಿ ಅವರ ಹೆಂಡತಿ ಹಾಗೂ ಸಣ್ಣ ನಾಲ್ಕು ಮಕ್ಕಳ ಬಡ ಸಂಸಾರ ಅನಾಥವಾಗಿದೆ.ಮೃತ ಯೋಗೀಶ್ ಪೂಜಾರಿಯವರ ಮನೆಗೆ ದಿನಾಂಕ 10.07/2017ರಂದು ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಬೇಟಿ ನೀಡಿ ರೂ 10,000/- ಸಾಂತ್ವನ ನಿಧಿ ನೀಡಲಾಯಿತು. ಹಾಗೂ ಮೂರು ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ನಿರ್ಧರಿಸಲಾಯಿತು ಈ ಸಂಧರ್ಭದಲ್ಲಿ ಯುವವಾಹಿನಿ ಅಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಅಧ್ಯಕ್ಷರಾದ […]

Read More

ಗುರುಗಳ ಸಂದೇಶ ಪಾಲಿಸುತ್ತಿರುವ ಯುವವಾಹಿನಿ ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದಿದೆ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 09.07.2017 ನೇ ಆದಿತ್ಯವಾರ ನಡ್ಪಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಗುರು ಸಂದೇಶವನ್ನು ಯುವವಾಹಿನಿ ಅಕ್ಷರಶಃ ಪಾಲಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ […]

Read More

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]

Read More

ಮೂಲ್ಕಿ ಯುವವಾಹಿನಿಯಿಂದ ವನಮಹೋತ್ಸವ

ಯುವವಾಹಿನಿ (ರಿ) ಮೂಲ್ಕಿ ಘಟಕ ಆಶ್ರಯದಲ್ಲಿ ಮೂಲ್ಕಿ ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಹಾಗೂ ಈವಗ್ರೀನ್ ಇದರ ಜಂಟಿ ಸಹಯೋಗದಲ್ಲಿ ದಿನಾಂಕ 07-07-2017ರಂದು ಮೂಲ್ಕಿ ವಿಜಯ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.. ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಯಾದ ಡಾll ಹೆಚ್. ಶಾಂತರಾಮ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾll […]

Read More

ನಾಗರಿಕ ಸೇವಾ ಹುದ್ದೆಗಳಿಗೆ ಒಲವು ತೋರಿಸಿ : ಶಂಕರ ಪೂಜಾರಿ

IAS, IPS ಮುಂತಾದ ಉನ್ನತ ಹುದ್ದೆಗಳ ಬಗ್ಗೆ ಆಸಕ್ತಿ ತೋರಿಸಿ, ಕೇವಲ ಡಾಕ್ಟರ್ ,ಇಂಜಿನಿಯರಿಂಗ್ ನಂತಹ ಹುದ್ದೆಗಳಿಗೆ ಮಾತ್ರ ಪ್ರಾಮುಖ್ಯತೆ ನೀಡದೆ, ಈ ದೇಶದ ಉನ್ನತ ಅಧಿಕಾರಿಗಳಾಗಿ ಸಮಾಜದ ಋಣ ತೀರಿಸಿ ಎಂದು ಉದ್ಯಮಿ, ಬಿಲ್ಲವ ಸಮಾಜದ ಮುಖಂಡರಾದ ಶ್ರೀ ಬಿ.ಎನ್.ಶಂಕರ ಪೂಜಾರಿ ತಿಳಿಸಿದರು. ಅವರು ದಿನಾಂಕ 02.07.2017 ನೇ ಆದಿತ್ಯವಾರ ಉಡುಪಿಯ ಕುತ್ಪಾಡಿ ,ಬಲಾಯಿಪಾದೆ ನಿತ್ಯಾನಂದ ಆರ್ಕೆಡ್ ಇಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ಜರುಗಿದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. SSLC […]

Read More

ಕೌಟುಂಬಿಕ ಸಾಮರಸ್ಯ, ಸತತ ಪ್ರಯತ್ನ ,ಇಚ್ಛಾಶಕ್ತಿ, ಇವೇ ಯುವವಾಹಿನಿ ಸಾಧನೆಯ ಹಿಂದಿರುವ ಶಕ್ತಿ :- ಸಂಕಮಾರ್

ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ […]

Read More

ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾಗಿ ಪುಷ್ಪರಾಜ್

  ನಾನು ನನ್ನದು,ನನ್ನಿಂದ ಎನ್ನುವ ಮಾತಿನಿಂದ ಸ್ವಲ್ಪ ಹೊರಗೆ ಬಂದು ನಾವು ನಮ್ಮದು, ನಮ್ಮೆಲ್ಲರ ಎನ್ನುವ ವಿಶಾಲ ಮನೋಭಾವ ಬೆಳೆಸಿಕೊಂಡರೆ ಆತ್ಮವಿಶ್ವಾಸ ಒಂದನ್ನುಳಿದು ಮಿಕ್ಕೆಲ್ಲವನ್ನೂ ಕಳೆದುಕೊಂಡರೂ ಚಿಂತೆ ಇಲ್ಲ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಮುಂದಿಟ್ಟುಕೊಂಡು ಮುನ್ನಡೆದರೆ ನಾವು ಖಂಡಿತಾ ಯಶಸ್ವಿಯಾಗುತ್ತೇವೆ.ಗುರುಗಳ ತತ್ವದಡಿಯಲ್ಲಿ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಯುವವಾಹಿನಿ ಕೂಳೂರು ಘಟಕದಿಂದ ಇನ್ನೂ ಉತ್ತಮ ಕಾರ್ಯಕ್ರಮ ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದು ಯುವವಾಹಿನಿ (ರಿ) ಕೂಳೂರು ಘಟಕದ. 2017-18 ನೇ ಸಾಲಿನ ನೂತನ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ […]

Read More

ಪುತ್ತೂರು ಯುವವಾಹಿನಿಯ 2016-17ನೇ ಸಾಲಿನ ಮಹಾಸಭೆ

ನಿರಂತರ ಸಂಪರ್ಕ ಹಾಗೂ ನಿರಂತರ ಸಭೆಗಳನ್ನು ನಡೆಸುವ ಮೂಲಕ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸಬಹುದು ಎಂದು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ.ಬಂಟ್ವಾಳ್ ತಿಳಿಸಿದರು.ಅವರು ದಿನಾಂಕ 25.06.2017 ನೇ ಆದಿತ್ಯವಾರ ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಪುತ್ತೂರು ಘಟಕದ 2016-17 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾದ ಜಯಂತ ಪೂಜಾರಿ ಕೆಂಗುಡೇಲು ಮಾತನಾಡಿ ಯುವವಾಹಿನಿ ಹಾಗೂ ಬಿಲ್ಲವ ಸಂಘದ ಮೂಲಕ […]

Read More

ಬಿಲ್ಲವ ಸಮಾಜದ ಕಟ್ಟುಪಾಡು:- ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 24.06.2017ರಂದು ಜರುಗಿದ ವಾರದ ಸಭೆಯಲ್ಲಿ ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಇವರು ಬಿಲ್ಲವ ಸಮಾಜದ ಕಟ್ಟುಪಾಡು ಎಂಬ ವಿಚಾರದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಯುವವಾಹಿನಿ (ರಿ) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್, ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ರವೀಂದ್ರ ಎಸ್.ಕೋಟ್ಯಾನ್, ಕಾರ್ಯದರ್ಶಿ ರಿತೇಶ್ ಕೆ.ನಿಕಟಪೂರ್ವ ಅಧ್ಯಕ್ಷರಾದ ಭಾಸ್ಕರ್ ಸಾಲ್ಯಾನ್ ಅಗರಮೇಲು ಹಾಗೂ ಸುರತ್ಕಲ್ ಯುವವಾಹಿನಿ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Read More

ಯುವವಾಹಿನಿ ಪಡುಬಿದ್ರೆ ಘಟಕದ ಅಧ್ಯಕ್ಷರಾಗಿ ಸಂತೋಷ್ ಅಧಿಕಾರ ಸ್ವೀಕಾರ

  ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!