Yuvavahini

ಘಟಕಗಳು

ಕಲಿಕೆಯಲ್ಲಿ ನಿಧಿಯೇ ಸರಿ – ಕು| ನಿಧಿಶ್ರೀ ಯು. ಪೂಜಾರಿ

ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]

Read More

ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆ

ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 30-07-2016 ರಂದು ಬಲ್ಮಠದ ಶ್ರದ್ಧಾನಂದ ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆಯನ್ನು (hair cutting) ಘಟಕದ ಕೆಲವು ಸೌಂದರ್ಯ ತಜ್ಞೆಯರಿಂದ ನಡೆಸಿಕೊಡಲಾಯಿತು. ಮಕ್ಕಳಿಗೆ ಸ್ವೀಟ್, ಬಿಸ್ಕೆಟ್, ಪೆನ್, ಪೆನ್ಸಿಲ್‌ಗಳನ್ನು ನೀಡಲಾಯಿತು. ಸುಮಾರು 35 ಮಕ್ಕಳು ಇವುಗಳ ಪ್ರಯೋಜನ ಪಡೆದರು.

Read More

ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ

ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]

Read More

ಹಳೆಯಂಗಡಿ ಘಟಕದ ವತಿಯಿಂದ ಆಟಿದ ಆಯನ ಕಾರ್ಯಕ್ರಮ

ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]

Read More

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ವಿವಿಧ ಕಾರ್ಯಕ್ರಮಗಳು

ಘಟಕದ ವತಿಯಿಂದ ತಾ. 16-7-2016 ರಂದು ಕೋಡಿಕಲ್ ದ.ಕ. ಜಿಲ್ಲಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ, ಸಸಿ ವಿತರಣೆ ಹಾಗೂ ಶಾಲೆಯ 30 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿರುತ್ತದೆ. ಕಾರ್ಯಕ್ರಮವನ್ನು ಕೋಡಿಕಲ್ ಬಿಲ್ಲವ ಸಂಘ ಇದರ ಅಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ದೇವೇಂದ್ರ ಕೋಟ್ಯಾನ್‌ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಯ ಜಯಪ್ಪ ಅದ್ಯಪಾಡಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೀಣಾ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್, ಘಟಕದ ಸಲಹೆಗಾರರ ಸಾಧು ಪೂಜಾರಿ ಹಾಗೂ […]

Read More

ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಯುವವಾಹಿನಿ (ರಿ) ಉಡುಪಿ ಘಟಕದ ಇದರ ನೇತೃತ್ವದಲ್ಲಿ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ತಾ. 17-7-2016 ರಂದು ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜೇಂದ್ರ ಕುಮಾರ್ ಉಪಾಧ್ಯಕ್ಷರು ತಾಲೂಕು ಪಂಚಾಯತ್ ಉಡುಪಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ(ರಿ) ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಯುವ ಉದ್ಯಮಿಗಳಾದ ಜಗನ್ನಾಥ ಪೂಜಾರಿ ಮತ್ತು ಲ|ಶಾಲಿನಿ ಡಿ.ಬಂಗೇರ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 19 ಮಕ್ಕಳಿಗೆ ರೂ. 65000 ದಷ್ಟು ವಿದ್ಯಾನಿಧಿಯನ್ನು ವಿತರಿಸಲಾಯಿತು. ವಿದ್ಯಾನಿಧಿ ಸಂಚಾಲಕರಾದ ರಘುನಾಥ್ […]

Read More

ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ […]

Read More

ಮುಲ್ಕಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ ಅಭಿಯಾನ

ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆ, ಬಡತನ, ಅಜ್ಞಾನ ಹಾಗೂ ಜಾತೀಯತೆ ತಾಂಡವಾಡುತ್ತಿದ್ದು, ಸಂಪೂರ್ಣ ಕೇರಳವೇ ಒಂದು ಭ್ರಾಂತಾಲಯವೆಂದು ಸ್ವಾಮಿ ವಿವೇಕಾನಂದರಿಂದ ಕರೆಯಲ್ವಟ್ಟ ದಿನಗಳವು, ಬಿಡುಗಡೆ ಇಲ್ಲದ ಬೇಡಿಯಿಂದ ಶತಮಾನಗಳಿಂದಲು ಅಸ್ಪೃಶ್ಯರು ಮೇಲ್ವರ್ಗದವರೆಂದು ಗುರುತಿಸಲ್ಪಟ್ಟ ಜನರಿಂದ ತುಳಿತಕ್ಕೊಳಪಟ್ಟಿದ್ಟರು. ಜಾತಿಬೇಧದ ಬೇರುಗಳ ಜೊತೆ ದಾಸ್ಯದ ಭೀಕರತೆ ಜನಜೀವನದಲ್ಲಿ ಬಹಳ ಆಳಕ್ಕೆ ಇಳಿದಿತ್ತು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ರಾಜೀವ್ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ಪೊಲೀಸ್ ಅಧಿಕಾರಿ ಶಾಂತಾರಾಮ್ ಇವರಿಗೆ ಅಭಿನಂದನೆ

ಪೊಲೀಸ್ ಇಲಾಖೆಯಲ್ಲಿನ ತಮ್ಮ ವಿಶೇಷ ಸೇವೆಗಾಗಿ 2015-16 ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪ್ರಾಮಾಣಿಕ, ನಿಷ್ಠಾವಂತ ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್ ಇವರನ್ನು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಯುವವಾಹಿನಿ ಸಲಹೆಗಾರರಾದ ಬಿ. ತಮ್ಮಯ, ಅಣ್ಣು ಪೂಜಾರಿ, ಅಧ್ಯಕ್ಷರಾದ ರಾಜೇಶ್ ಸುವರ್ಣ, ಕೋಶಾಧಿಕಾರಿ […]

Read More

ಯುವವಾಹಿನಿ(ರಿ) ಹಳೆಯಂಗಡಿ ಘಟಕದಿಂದ ಉಚಿತ ಪುಸ್ತಕ ವಿತರಣೆ

ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ: 12-6-2016 ರಂದು ಹಳೆಯಂಗಡಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಕೊಲ್ನಾಡು ದಿ! ಕಮಲ ಬೂಬ ಅಮೀನ್‌ರವರ ಸ್ಮರಣಾರ್ಥ ಅವರ ಮಕ್ಕಳಿಂದ (ಪೂಜಾ ಎರೇಂಜರ್‍ಸ್ & ಕೆಟರರ್‍ಸ್) ಇವರ ಪ್ರಾಯೋಜಕತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ.ಗಣೇಶ್ ಜಿ. ಬಂಗೇರ ವಹಿಸಿದರು. ಶ್ರೀ ಜೈಕೃಷ್ಣ ಬಿ. ಕೋಟ್ಯಾನ್, ಮಾಲಕರು ಪೂಜಾ ಎರೇಂಜರ್‍ಸ್ & ಕೆಟರರ್‍ಸ್ ಹಳೆಯಂಗಡಿ ಇವರು ಹಳೆಯಂಗಡಿ ಸುತ್ತಮುತ್ತಲ್ಲಿನ 41 ಅರ್ಹ ಶಾಳಾ ಮತ್ತು ಕಾಲೇಜು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!