10-02-2026, 11:00 AM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ಮಾನವೀಯ ಸೇವಾ ಮನೋಭಾವಕ್ಕೆ ಸಾಕ್ಷಿಯಾಗಿ, ಕಾರ್ಕಳ ತಾಲೂಕು ಏರ್ಲಪಾಡಿ ಗ್ರಾಮದ ಚೈತ್ರ–ಸಂತೋಷ್ ದಂಪತಿಗಳ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ರೂ. 20,000 ಧನಸಹಾಯವನ್ನು ನೀಡಲಾಯಿತು. ಮಗುವಿಗೆ ಶ್ರವಣ ಯಂತ್ರ ಅಳವಡಿಕೆ ಹಾಗೂ ಅಗತ್ಯ ಶಸ್ತ್ರಚಿಕಿತ್ಸೆಗಾಗಿ ಈ ನೆರವು ಒದಗಿಸಲಾಗಿದ್ದು, ದಿನಾಂಕ 10/02/2026 ರಂದು ಘಟಕದ ಪದಾಧಿಕಾರಿಗಳು ಮಗುವಿನ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಧನಸಹಾಯವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮೀನ್ ಹಾಗೂ ಘಟಕದ […]
Read More
08-02-2026, 9:30 PM
ಪಡುಬಿದ್ರಿ : ದಿನಾಂಕ 08/02/2026 ರಂದು ಶ್ರೀ ಸಾರಂತಾಯ ಗರೋಡಿ ಉಲ್ಲಾಯ ದೈವಸ್ಥಾನ, ಸಸಿಹಿತ್ಲು ಇದರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರು ಬೆಳಿಗ್ಗೆಯಿಂದ ಸಂಜೆಯವರೆಗೆ ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡರು. ನೆರೆದಿದ್ದ ಭಕ್ತಜನರಿಗೆ ಅನ್ನ ಬಡಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ದೈವಸ್ಥಾನದ ಆಡಳಿತ ಮಂಡಳಿಯ ಪ್ರಶಂಸೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ದೇಣಿಗೆಯನ್ನು ಸಂಗ್ರಹಿಸಿ ದೇವಸ್ಥಾನಕ್ಕೆ ಒಪ್ಪಿಸಲಾಯಿತು.
Read More
08-02-2026, 6:00 PM
ಬೆಂಗಳೂರು: ಯುವಕರು ಸಮಾಜವನ್ನು ಬಲಿಷ್ಠ ಮತ್ತು ಆರೋಗ್ಯಕರ ದಿಕ್ಕಿನಲ್ಲಿ ಮುನ್ನಡೆಸುವ ಶಕ್ತಿ ಹೊಂದಿದ್ದಾರೆ; ಇಂತಹ ಕ್ರೀಡಾ ವೇದಿಕೆಗಳು ಅವರಲ್ಲಿ ಶಿಸ್ತು, ಏಕತೆ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತವೆ ಎಂದು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರು ಹಾಗೂ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಚೇರ್ಮೆನ್ ಸೂರ್ಯಕಾಂತ್ ಜೆ. ಸುವರ್ಣ ಅಭಿಪ್ರಾಯಪಟ್ಟರು.ಅವರು ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಚಿಕ್ಕಬಾಣಾವರ ಸಮೀಪದ ಗೋಲ್ಡನ್ ರೇ ಕ್ರೀಡಾಂಗಣದಲ್ಲಿ ಫೆಬ್ರವರಿ 8ರಂದು ಆಯೋಜಿಸಲಾದ “ಬ್ರಹ್ಮಶ್ರೀ ಕ್ರೀಡಾಕೂಟ 2026” ನ್ನು ಉದ್ಘಾಟಿಸಿ ಮಾತನಾಡಿ ಯುವಕರು ಸಮಾಜದ […]
Read More
07-02-2026, 11:00 AM
ಹೆಜಮಾಡಿ : ವಿದ್ಯೆಯೇ ಯುವವಾಹಿನಿಯ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಜ್ಞಾನದ ಬೆಳಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯವು ಸುಂದರವಾಗಿ ಅರಳುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿಧ್ಯಾ ರಾಕೇಶ್ ಹೇಳಿದರು. ಹೆಜಮಾಡಿ ಘಟಕವು ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಈ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದ್ದು, ಮುಂದೆಯೂ ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಅವರು ಯುವವಾಹಿನಿ(ರಿ.) ಹೆಜಮಾಡಿ ಘಟಕ ಹಾಗೂ ಸ್ವರ್ಣ ಸೌಹಾರ್ದ ಸಹಕಾರಿ […]
Read More
06-02-2026, 9:00 PM
ಕೊಲ್ಯ : ದಿನಾಂಕ 03-02-2026ರಿಂದ 06-02-2026ರವರೆಗೆ ಉಮಾಪುರಿ ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಜರಗಿದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಶ್ರದ್ಧಾ–ಭಕ್ತಿಯಿಂದ ಸ್ವಯಂಸೇವೆಯಲ್ಲಿ ತೊಡಗಿ ಭಕ್ತರ ಸೇವೆಯಲ್ಲಿ ನಿರತರಾದರು. ಧಾರ್ಮಿಕ ಭಾವನೆ ಮತ್ತು ಸೇವಾ ಮನೋಭಾವದಿಂದ ದೇವಸ್ಥಾನದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀದೇವಿಯ ಸಾನಿಧ್ಯದಲ್ಲಿ ಕೃತಾರ್ಥರಾದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ನಿತಿನ್ ಕರ್ಕೇರ ಅವರು ಸ್ವಯಂಸೇವೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ, ಅವರ ಸಹಕಾರ ಮತ್ತು ಸಮರ್ಪಣಾ ಮನೋಭಾವಕ್ಕೆ […]
Read More
04-02-2026, 11:56 AM
ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ಸದಸ್ಯರು ದಿನಾಂಕ 04.02.2026 ರಿಂದ 08.02.2026ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಇಲ್ಲಿ ನಡೆದ ಹಸಿರು ಹೊರೆಕಾಣಿಕೆ, ನೇಮೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಐದು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರ ವ್ಯವಸ್ಥೆ, ಅನ್ನಸಂತರ್ಪಣೆ, ಶಿಸ್ತು ನಿರ್ವಹಣೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಸದಸ್ಯರು ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಯುವವಾಹಿನಿ ಸದಸ್ಯರು ಶ್ರದ್ಧಾಭಕ್ತಿಯಿಂದ ಸೇವೆ ಸಲ್ಲಿಸಿ ದೈವಸ್ಥಾನದ ಆಡಳಿತ […]
Read More
04-02-2026, 11:00 AM
ಮೂಡುಬಿದಿರೆ : ಸೇವೆಯೇ ಧರ್ಮ ಎಂಬ ತತ್ವವನ್ನು ಕಾರ್ಯರೂಪಕ್ಕೆ ತಂದು, ಯುವವಾಹಿನಿ (ರಿ.) ಮೂಡುಬಿದಿರೆ ಘಟಕವು ಮಾನವೀಯತೆಯ ಮೌಲ್ಯವನ್ನು ಮತ್ತೊಮ್ಮೆ ಪ್ರತಿಪಾದಿಸಿದೆ. ಮೂಡುಮಾರ್ನಾಡು ಗ್ರಾಮದ ಸುಮಿತ್ರಾ–ವಿಶ್ವನಾಥ್ ದಂಪತಿಯ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯನ್ನು ಮರುನಿರ್ಮಿಸಲು ಸುಮಾರು 6 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಿ, ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಸುಮಾರು 600 ಚದರ ಅಡಿ ವಿಸ್ತೀರ್ಣದ ಮನೆ ನಿರ್ಮಾಣದ ಮೂಲಕ ಅಶಕ್ತ ಕುಟುಂಬಕ್ಕೆ ಭದ್ರ ಆಶ್ರಯ ಕಲ್ಪಿಸುವ ಸಂಕಲ್ಪವನ್ನು ಘಟಕ ಕೈಗೊಂಡಿದೆ. ಯುವವಾಹಿನಿಯ ಮಾಜಿ ಅಧ್ಯಕ್ಷರು […]
Read More
03-02-2026, 8:00 PM
ಮಂಗಳೂರು : ಬಿಲ್ಲವ ಸಮಾಜದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ಸಮಾಜಸೇವೆಯ ದೀರ್ಘ ಪಯಣದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯು ಶಾಶ್ವತ ಆಡಳಿತ ಕಚೇರಿ ನಿರ್ಮಾಣ ಎಂಬ ಮಹತ್ತರ ಸಂಕಲ್ಪವನ್ನು ಕೈಗೊಂಡಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹೇಳಿದರು. ಸರಕಾರದಿಂದ ಮಂಜೂರಾದ ಸ್ವಂತ ನಿವೇಶನದಲ್ಲಿ ನೂತನ ಆಡಳಿತ ಕಚೇರಿ ಕಟ್ಟಡದ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಶುಭಾರಂಭ ಮಾಡಲಾಗಿದೆ. ಈ ಮಹತ್ವದ ಯೋಜನೆ ಯುವವಾಹಿನಿಯ ಸದಸ್ಯರ ದೇಣಿಗೆಯಿಂದಲೇ ಸಾಕಾರಗೊಳ್ಳಬೇಕು ಎಂಬುದು ಕೇಂದ್ರ ಸಮಿತಿಯ ದೃಢ […]
Read More
02-02-2026, 10:00 PM
ಮುಲ್ಲಕಾಡ್ : ಯುವವಾಹಿನಿ (ರಿ.) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ನಾಗೇಶ್ ಅಮೀನ್ ಮುಲ್ಲಕಾಡ್ ಅವರ ಕುಟುಂಬಸ್ಥರ ಆಶ್ರಯದಲ್ಲಿ ನಡೆಸಿಕೊಡಲಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯ ಯಕ್ಷಗಾನ ಬಯಲಾಟವು ದಿನಾಂಕ 02-02-2026ರ ಸೋಮವಾರ ನಡೆಯಿತು. ಈ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಹರೀಶ್ ಕೆ. ಸುವರ್ಣ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.ಈ ಸಮಾರಂಭದಲ್ಲಿ ಯುವವಾಹಿನಿ ಮಂಗಳೂರು ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಅನೇಕ ಸದಸ್ಯರು […]
Read More
01-02-2026, 9:00 PM
ಪಡುಬಿದ್ರೆ/ಮಂಗಳೂರು : ಮಹಿಳಾ ಸಬಲೀಕರಣಕ್ಕೆ ಕ್ರೀಡೆಯನ್ನೇ ವೇದಿಕೆಯಾಗಿಸಿಕೊಂಡು, ಮಹಿಳಾ ಶಕ್ತಿಯನ್ನು ಸಮಾಜದ ಮುಂದಿಡುವ ಶ್ಲಾಘನೀಯ ಕಾರ್ಯವನ್ನು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಯಶಸ್ವಿಯಾಗಿ ನೆರವೇರಿಸಿದೆ. ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸ್ಥಳೀಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ “ಬಿಲ್ಲವ ಪ್ರೀಮಿಯರ್ ಲೀಗ್ (BPL) – 2026” ಮಹಿಳಾ ಕ್ರಿಕೆಟ್ ಪಂದ್ಯಾಟವು ಕೇವಲ ಕ್ರೀಡಾಕೂಟವಲ್ಲದೆ, ಸಂಘಟನೆ, ಏಕತೆ ಹಾಗೂ ಸಬಲೀಕರಣದ ಜೀವಂತ ಸಂದೇಶವಾಗಿ ಮೂಡಿಬಂದಿತು. ಪ್ರಮುಖವಾಗಿ ಯುವವಾಹಿನಿಯ ಮಹಿಳಾ ಸದಸ್ಯರಿಂದಲೇ ಆಯೋಜಿಸಲ್ಪಟ್ಟ ಈ […]
Read More