15-06-2026, 8:00 PM
ಮಂಗಳೂರು: ದಿನಾಂಕ: 15-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಯುವವಾಹಿನಿ (ರಿ.) ಕೂಳೂರು ಘಟಕ ಇವರ ಸಹಯೋಗದೊಂದಿಗೆ ನಡೆಯಿತು. ಕೂಳೂರು ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರ ತಂಡವು ಭಕ್ತಿ ಭಾವದಿಂದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]
Read More
14-06-2026, 1:00 PM
ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 14-06-2026ರಂದು ಶಕ್ತಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವೃಕ್ಷೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಸದಸ್ಯರೆಲ್ಲರೂ ಒಟ್ಟಾಗಿ ಹಣ್ಣುಗಳ ಸಸಿಗಳನ್ನು ನೆಟ್ಟು ವೃಕ್ಷಾರೋಪಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ರುದ್ರಭೂಮಿಯ ವ್ಯವಸ್ಥಾಪಕರಾದ ಪದ್ಮನಾಭ ಅಂಚನ್ ಕಕ್ಕೆಬೆಟ್ಟು ಅವರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಸಂಸ್ಥೆಯು […]
Read More
14-06-2026, 1:00 PM
ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಹರೀಶ್ ದೋಳ ಅವರ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ವಿವಿಧ ಮೋಜಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟುಂಬ ಸದಸ್ಯರ ಪರಸ್ಪರ ಒಡನಾಟ ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ […]
Read More
14-06-2026, 1:00 PM
ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]
Read More
14-06-2026, 10:00 AM
ಬೆಂಗಳೂರು : ಬಿ ಕೆ ಹರಿಪ್ರಸಾದ್ ಅವರು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ದಿನಾಂಕ 14.06.2026 ಯುವವಾಹಿನಿ ಕೇಂದ್ರ ಸಮಿತಿಯ ಸುಮಾರು 50 ಸದಸ್ಯರ ತಂಡವು ಬೆಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರು ಬಿ ಕೆ ಹರಿಪ್ರಸಾದ್ ಅವರಿಗೆ ಶುಭ ಹಾರೈಸಿ, ಅವರ ಮುಂದಿನ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಯಶಸ್ಸನ್ನು ಕೋರಿದರು. ಹರಿಪ್ರಸಾದ್ ಅವರು ಯುವವಾಹಿನಿಯ ಸಮಾಜಮುಖಿ ಚಟುವಟಿಕೆಗಳನ್ನು ಶ್ಲಾಘಿಸಿ, ಸಂಸ್ಥೆಯ ಕಾರ್ಯಗಳಿಗೆ ತಮ್ಮ […]
Read More
13-06-2026, 1:00 PM
ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]
Read More
13-06-2026, 1:00 PM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರಸಿದ್ಧ ಕೊಟ್ಟಿಯೂರು ಮಹಾದೇವ ದೇವಸ್ಥಾನಕ್ಕೆ ದಿನಾಂಕ 14.06.2026ರಂದು ಭಕ್ತಿಪೂರ್ವಕ ತೀರ್ಥಯಾತ್ರೆಯನ್ನು ಆಯೋಜಿಸಲಾಯಿತು. ದಿನಾಂಕ 13.06.2026ರಂದು ರಾತ್ರಿ 10:30 ಗಂಟೆಗೆ ಬಳ್ಪದಿಂದ ಸುಬ್ರಹ್ಮಣ್ಯ – ಇರಿಟ್ಟಿ ಮಾರ್ಗವಾಗಿ ವ್ಯಾನ್ನಲ್ಲಿ ಪ್ರಯಾಣ ಆರಂಭಿಸಲಾಯಿತು. ಈ ಯಾತ್ರೆಯಲ್ಲಿ ಘಟಕದ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ನಿರ್ದೇಶಕರು, ಬಳ್ಪ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರು ಸೇರಿದಂತೆ ಸುಮಾರು 26 ಮಂದಿ ಸದಸ್ಯರು ಭಾಗವಹಿಸಿದ್ದರು. ಮರುದಿನ ಬೆಳಿಗ್ಗೆ ಸುಮಾರು 4:00 […]
Read More
13-06-2026, 1:00 PM
ಮಾಣಿ : “ಮರದ ನೆರಳು ಬದುಕಿಗೆ ನೆರಳು” ಎಂಬ ಧ್ಯೇಯೋದ್ದೇಶದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಕೆದಿಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಿಮಾರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಅಂಗನವಾಡಿ ಕೇಂದ್ರ ಪೆರಾಜೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರದ ಕುರಿತು ಜಾಗೃತಿ […]
Read More