Yuvavahini

ಘಟಕಗಳು

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ದಿನಾಂಕ: 22-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ತಂಡ ಕದ್ರಿ ಕಂಬಳ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಭಜನಾ ತಂಡದ […]

Read More

ಯುವವಾಹಿನಿ ಮಾಣಿ ಘಟಕದಿಂದ ವಿವಿಧೆಡೆ ಹಸಿರು ಅಭಿಯಾನ

ಮಾಣಿ, ಜೂನ್ 22: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಯುವ ವೃಕ್ಷೋತ್ಸವ–2026” ಅಂಗವಾಗಿ ಮಾಣಿ ವ್ಯಾಪ್ತಿಯ ವಿವಿಧ ಶಾಲೆಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಈ ಅಭಿಯಾನದ ಭಾಗವಾಗಿ ಶ್ರೀರಾಮಚಂದ್ರ ಪದವಿ ಪೂರ್ವ ಕಾಲೇಜು ಪೆರ್ನೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರ, ಸರಕಾರಿ ಪ್ರೌಢಶಾಲೆ ಸೂರ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು, ಮಾಣಿ ಶ್ರೀ ಉಳ್ಳಾಲ್ತಿ ಧರ್ಮಚಾವಡಿ ಹಾಗೂ ಇಡ್ಕಿದು ಗ್ರಾಮ ಪಂಚಾಯಿತಿ ಅಂಗನವಾಡಿ ಕೇಂದ್ರ […]

Read More

ಕಾರ್ಯನಿರ್ವಾಹಕ ಸಂಪಾದಕರ ಮಾತು : ಹರೀಶ್ ವಿ. ಪಚ್ಚನಾಡಿ

ನಮಸ್ಕಾರ……ಮಳೆಗಾಲದ ಆಗಮನದೊಂದಿಗೆ ಪ್ರಕೃತಿ ಹೇಗೆ ಮೈದುಂಬಿ ಹಸಿರಾಗುತ್ತದೆಯೋ, ಹಾಗೆಯೇ ‘ಯುವಸಿಂಚನ’ ಪತ್ರಿಕೆಯ ಎರಡನೇ ಸಂಚಿಕೆಯೂ ನವಚೈತನ್ಯದೊಂದಿಗೆ ನಿಮ್ಮ ಕೈ ಸೇರುತ್ತಿದೆ. ಮೊದಲ ಸಂಚಿಕೆಯನ್ನು ಪ್ರೀತಿಯಿಂದ ಆಶೀರ್ವದಿಸಿದ ಓದುಗ ಪ್ರಭುಗಳಿಗೆ ಹಾಗೂ ಶ್ರಮಿಸಿದ ಎಲ್ಲಾ ಘಟಕಗಳಿಗೆ ನನ್ನ ಅನಂತ ವಂದನೆಗಳು. ಅಕ್ಷರ ಎಂಬುದು ಕೇವಲ ಕಪ್ಪು ಇಂಕಿನ ಗುರುತಲ್ಲ; ಅದು ಬದಲಾವಣೆಯ ಬೀಜ. ಬಿತ್ತಿದ ಪ್ರತಿ ಅಕ್ಷರವೂ ಯುವ ಮನಸ್ಸುಗಳಲ್ಲಿ ವಿಚಾರದ ಮೊಳಕೆಯೊಡೆಯಬೇಕು ಎಂಬುದು ನಮ್ಮ ಆಶಯ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೈಗಳಿಗೆ ಅಕ್ಷರಗಳೇ ಆಯುಧ. ಈ ನಿಟ್ಟಿನಲ್ಲಿ […]

Read More

ಅಧ್ಯಕ್ಷರ ಮಾತು : ಅಶೋಕ್ ಕುಮಾರ್ ಪಡ್ಪು

ಯುವವಾಹಿನಿ ಕುಟುಂಬದ ಅತ್ಮೀಯ ಸದಸ್ಯರೆ, ‘ಯುವಸಿಂಚನ’ದ ಚೊಚ್ಚಲ ಸಂಚಿಕೆಗೆ ನೀವು ತೋರಿದ ಅತೀವ ಪ್ರೀತಿ, ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ನಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಿವೆ. ಅದೇ ಲವಲವಿಕೆ ಮತ್ತು ಆತ್ಮವಿಶ್ವಾಸದೊಂದಿಗೆ, ಮಲೆನಾಡ ಮಳೆಯ ಸಿಂಚನದಂತೆ ಹಿತ ನೀಡುವ ಈ ದ್ವಿತೀಯ ಸಂಚಿಕೆಯನ್ನು ನಿಮ್ಮ ಕೈಗಿಡಲು ಹೆಮ್ಮೆ ಎನಿಸುತ್ತಿದೆ. ಯುವವಾಹಿನಿಯ ಪಯಣವು ಕೇವಲ ಕಾರ್ಯಕ್ರಮಗಳ ಸರಮಾಲೆಯಲ್ಲ; ಅದು ವ್ಯಕ್ತಿತ್ವವನ್ನು ಪಳಗಿಸುವ, ಸಮಾಜವನ್ನು ಭಾವನಾತ್ಮಕವಾಗಿ ಬೆಸೆಯುವ ಮತ್ತು ಹೊಸ ಭರವಸೆಯ ಹಾದಿಗಳನ್ನು ಸೃಷ್ಟಿಸುವ ಒಂದು ನಿರಂತರ ಜ್ಞಾನಯಜ್ಞ. ಬಂಟ್ವಾಳ […]

Read More

ಮಕ್ಕಳ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿ: ರಘು ನಾಯ್ಕ್

ಸುರತ್ಕಲ್ ಜೂನ್ 22: ಮಕ್ಕಳ ಸುರಕ್ಷತೆ, ಪೋಕ್ಸೋ ಕಾಯಿದೆಯ ಅರಿವು, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು ಹಾಗೂ ಮೊಬೈಲ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್‌ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಘು ನಾಯ್ಕ್ ಅವರು ಮಾತನಾಡಿ, “ಮಕ್ಕಳು ದೇಶದ ಭವಿಷ್ಯ. ಅವರ ಸುರಕ್ಷಿತ ಹಾಗೂ ನಿಶ್ಚಿಂತ ಬಾಲ್ಯವನ್ನು ಕಾಪಾಡುವುದು ನಮ್ಮೆಲ್ಲರ […]

Read More

ಸಹಾಯಧನ ಹಸ್ತಾಂತರ

ಹೆಜಮಾಡಿ, ಜೂನ್ 21 : ಹಿರಿಯ ಸಾಹಿತಿ, ನಾಟಕಕಾರ, ಗೀತಾ ಸಾಹಿತ್ಯ ರಚನಾಕಾರ ಹಾಗೂ ಪತ್ರಕರ್ತರಾದ ಪರಮಾನಂದ ವಿ. ಸಾಲ್ಯಾನ್ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಯುವವಾಹಿನಿ (ರಿ.) ಹೆಜಮಾಡಿ ಘಟಕವು ಮಾನವೀಯ ಕಾಳಜಿಯಿಂದ ನೆರವಿನ ಹಸ್ತ ಚಾಚಿದೆ. ಮೂಲತಃ ಹೆಜಮಾಡಿ ಗ್ರಾಮದವರಾದ ಪರಮಾನಂದ ವಿ. ಸಾಲ್ಯಾನ್ ಅವರು ಹೆಜಮಾಡಿ ಬಿಲ್ಲವರ ಸಂಘ ಹಾಗೂ ಯುವವಾಹಿನಿಯ ವಿವಿಧ ಚಟುವಟಿಕೆಗಳಿಗೆ ಹಲವು ವರ್ಷಗಳಿಂದ ಅಮೂಲ್ಯ […]

Read More

ಯುವವಾಹಿನಿ (ರಿ.) ಸುಳ್ಯ ಘಟಕದಿಂದ 5ನೇ ಗುರು ಸ್ಪೂರ್ತಿ ಕಾರ್ಯಕ್ರಮ

ಸುಳ್ಯ, ಜೂನ್ 21 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ 5ನೇ ಗುರು ಸ್ಪೂರ್ತಿ ಕಾರ್ಯಕ್ರಮವು ಸುಳ್ಯದ ಅಶ್ವಿನಿ ಲೋಕೇಶ್ ಅವರ ನಿವಾಸದಲ್ಲಿ ಭಕ್ತಿಪೂರ್ವಕವಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಯುವವಾಹಿನಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಆಯೋಜಿಸಲಾಯಿತು. ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಸ್ಮರಿಸುತ್ತಾ ನಡೆದ ಭಜನಾ ಕಾರ್ಯಕ್ರಮದಲ್ಲಿ ಸದಸ್ಯರು ಭಕ್ತಿಭಾವದಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ನಾರಾಯಣಗುರು ತತ್ವ ನಿರ್ದೇಶಕ ರೋಹಿತ್ ರೆಂಜಾಳ, ಸುಳ್ಯ ಘಟಕದ ಸ್ಥಾಪಕ […]

Read More

ಯುವವಾಹಿನಿ ಶಕ್ತಿನಗರ ಘಟಕದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶಕ್ತಿನಗರ ಜೂನ್ 21 : ಯುವವಾಹಿನಿ (ರಿ.) ಶಕ್ತಿನಗರ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಶಕ್ತಿನಗರ ಕುಂಟಲ್ಪಾಡಿ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಅಂತರಾಷ್ಟ್ರೀಯ 12ನೇ ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕುಂಟಲ್ಪಾಡಿ ಇಲ್ಲಿ ಆಚರಿಸಲಾಯಿತು. ಅಂತರಾಷ್ಟ್ರೀಯ ಯೋಗ ದಿನಾಚರಣೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಸಾರುವ ದಿನವಾಗಿದ್ದು, ಯೋಗದ ಮೂಲಕ ಆರೋಗ್ಯಕರ ಜೀವನ ಹಾಗೂ ಯೋಗಕ್ಷೇಮವನ್ನು ಕಾಪಾಡಿಕೊಳ್ಳುವ […]

Read More

ಹಸಿರು ಪ್ರಕೃತಿ – ಯೋಗ ಸಂಸ್ಕೃತಿ

ಕಾಪು, ಜೂನ್ 21: ನಮ್ಮ ಶಾರೀರಿಕ ಆರೋಗ್ಯವನ್ನು ವೃದ್ಧಿಸುವ ಅಂತರಾಷ್ಟ್ರೀಯ ಯೋಗ ದಿನ ಹಾಗೂ ಭೂಮಿಯ ಆರೋಗ್ಯವನ್ನು ರಕ್ಷಿಸುವ ವಿಶ್ವ ಪರಿಸರ ದಿನದ ಅಂಗವಾಗಿ ಯುವವಾಹಿನಿ (ರಿ.) ಕಾಪು ಘಟಕ ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕಾಪು ಘಟಕದ ಸಹಯೋಗದಲ್ಲಿ “ಹಸಿರು ಪ್ರಕೃತಿ – ಯೋಗ ಸಂಸ್ಕೃತಿ” ಕಾರ್ಯಕ್ರಮವು ಜೂನ್ 21ರಂದು ಸಂಜೆ 5 ಗಂಟೆಗೆ ಕಾಪು ಬಿಲ್ಲವ ಸಹಾಯಕ ಸಂಘದ ಸಭಾಭವನದಲ್ಲಿ ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಶ್ರೀ ಪತಂಜಲಿ ಯೋಗ […]

Read More

ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕೂಳೂರು, ಜೂನ್ 21 : ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಬೆಳಿಗ್ಗೆ 6 ಗಂಟೆಗೆ ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ನಾರಾಯಣಗುರು ದೇವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಪತಂಜಲಿ ಯೋಗ ಪ್ರತಿಷ್ಠಾನದ ಖ್ಯಾತ ಯೋಗ ಶಿಕ್ಷಕರಾದ ವಿಶು ಕುಮಾರ್ ಹಾಗೂ ರೇಖಾ ಸಂದೀಪ್ ಅವರು ಘಟಕದ ಸದಸ್ಯರಿಗೆ ಯೋಗಾಸನ ಮತ್ತು ಪ್ರಾಣಾಯಾಮದ ತರಬೇತಿಯನ್ನು ನೀಡಿದರು. ಯೋಗಾಭ್ಯಾಸದ ಮಹತ್ವ, ದೈಹಿಕ ಮತ್ತು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!