21-02-2026, 12:38 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ “ನಮ್ಮ ನಡಿಗೆ – ಶ್ರೀಗುರುವಿನೆಡೆಗೆ” ಎಂಬ ವಿಶೇಷ ಸಂಕಲ್ಪದೊಂದಿಗೆ ಶನಿವಾರದಂದು ತೀರ್ಥಾಟನೆಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು. ಭವ್ಯ ಸ್ವಾಗತ ಮತ್ತು ಮೆರವಣಿಗೆ: ದಿನಾಂಕ 21-02-2026ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಆಗಮಿಸಿದ ಶಿವಗಿರಿ ಪೀಠಾಧಿಪತಿಗಳನ್ನು ಮಹಿಳಾ ಘಟಕದ ವತಿಯಿಂದ ಭವ್ಯವಾಗಿ ಬರಮಾಡಿಕೊಳ್ಳಲಾಯಿತು. ಅಲ್ಲಿಂದ ಪೀಠಾಧಿಪತಿಗಳ ನೇತೃತ್ವದಲ್ಲಿ ಯಾತ್ರೆಯು ಕುದ್ರೋಳಿ ಕ್ಷೇತ್ರದತ್ತ ಸಾಗಿತು.ಧಾರ್ಮಿಕ ಕಾರ್ಯಕ್ರಮಗಳು: ಕ್ಷೇತ್ರಕ್ಕೆ ಆಗಮಿಸಿದ ಯಾತ್ರಿಗಳು […]
Read More
20-02-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಧಾರ್ಮಿಕ ಜಾಗೃತಿ ಮತ್ತು ಸದಸ್ಯರ ನಡುವಿನ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಐವತ್ತೊಕ್ಲು ಗ್ರಾಮದ ಪೊಳೆಂಜದಲ್ಲಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ದಿನಾಂಕ 20.02.2026ರ ಶುಕ್ರವಾರ ಸಂಜೆ ಶ್ರೀಮತಿ ಮತ್ತು ಶ್ರೀ ನಾಗೇಶ್ ಪೂಜಾರಿಯವರ ಗೃಹದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಪಾಲ್ಗೊಂಡರು. ಸಂಜೆ 7.15 ರಿಂದ 9.00 ಗಂಟೆಯವರೆಗೆ ನಡೆದ ಭಜನೆಯಲ್ಲಿ ಸುಶ್ರಾವ್ಯವಾಗಿ ನಾಮಸಂಕೀರ್ತನೆ ಮಾಡುವ ಮೂಲಕ ಭಕ್ತಿ ಸೇವೆಯನ್ನು ಸಮರ್ಪಿಸಲಾಯಿತು. ಧಾರ್ಮಿಕ ಬದ್ಧತೆ: […]
Read More
19-02-2026, 8:00 PM
ಕಾರ್ಕಳ: “ಸಮಾಜದಲ್ಲಿರುವ ಅಶಕ್ತರಿಗೆ ಆಸರೆಯಾಗುವುದು ಮತ್ತು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಪ್ರೋತ್ಸಾಹಿಸುವುದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಾವು ಸಲ್ಲಿಸುವ ನಿಜವಾದ ಪೂಜೆ. ಗುರುಗಳ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಬೇಕು,” ಎಂದು ಉಡುಪಿಯ ನಿವೃತ್ತ ಉಪನ್ಯಾಸಕರಾದ ದಯಾನಂದ ಬಿ. ಕಿದಿಯೂರು ಅವರು ಕರೆ ನೀಡಿದರು.ಅವರು ಯುವವಾಹಿನಿ (ರಿ.) ಕಾರ್ಕಳ ಘಟಕದ ನೇತೃತ್ವದಲ್ಲಿ, ಕಾಂತಾವರ ಬಿಲ್ಲವ ಸಂಘದ ಆತಿಥ್ಯದಲ್ಲಿ ದಿನಾಂಕ 19.02.2026 ರಂದು ನಡೆದ “ಗುರುಭ್ಯೋ […]
Read More
19-02-2026, 9:30 AM
ಬಂಟ್ವಾಳ : ಫೆಬ್ರವರಿ 28 ಹಾಗೂ ಮಾರ್ಚ್ 01ರಂದು ನಡೆಯಲಿರುವ ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮ ಸಮಾರಂಭದ ಆಮಂತ್ರಣ ಪತ್ರವನ್ನು ಬಂಟ್ವಾಳದಲ್ಲಿ ಭಾರತ ಸರ್ಕಾರದ ಮಾಜಿ ವಿತ್ತ ಸಚಿವರಾದ ಬಿ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಲ್ಲಿ ಯುವವಾಹಿನಿ ಉಡುಪಿ ಘಟಕವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿದ್ದು, ಅಶಕ್ತ ಕುಟುಂಬಗಳ ಮನೆ ನಿರ್ಮಾಣದಂತಹ ಮಹತ್ವದ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿರುವುದು […]
Read More
17-02-2026, 9:11 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ […]
Read More
15-02-2026, 10:30 AM
ಉಪ್ಪಿನಂಗಡಿ : ಯುವಜನರ ನಿರ್ಲಕ್ಷ್ಯ ಮನೋಭಾವದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ನಮ್ಮನ್ನು ಮಾತ್ರವಲ್ಲದೆ ನಮ್ಮನ್ನು ನಿರೀಕ್ಷಿಸುತ್ತಿರುವ ಮನೆಯವರನ್ನೂ ರಕ್ಷಿಸುತ್ತದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಯುವಜನತೆ ತಮ್ಮ ಹೆತ್ತವರಿಗೆ ನೀಡುವ ಅತಿ ದೊಡ್ಡ ಕೊಡುಗೆ ಎಂದು ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಅಧಿಕಾರಿ ಚರಣ್ ಕೆ.ಎಸ್ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15.02.2026 […]
Read More
13-02-2026, 8:24 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. […]
Read More
12-02-2026, 9:00 PM
ಸಿದ್ದಕಟ್ಟೆ : ಸಮಾನತೆ ಮತ್ತು ಮಾನವತೆಯ ಸಂದೇಶವನ್ನು ಸಾರಿದ ನಾರಾಯಣಗುರುಗಳ ಚಿಂತನೆಗಳು ಸಮಾಜವನ್ನು ಒಂದೇ ಸೂತ್ರದಲ್ಲಿ ಕಟ್ಟುವ ಶಕ್ತಿಯಾಗಿದೆ. ಮನುಷ್ಯನ ಮೌಲ್ಯವು ಅವನ ಜನ್ಮದಲ್ಲಲ್ಲ, ಅವನ ಮಾನವೀಯ ಗುಣಗಳಲ್ಲಿ ಇದೆ ಎಂಬುದು ಅವರ ತತ್ತ್ವದ ಸಾರವಾಗಿದೆ. ಪರಸ್ಪರ ಗೌರವ, ಪ್ರೀತಿ ಮತ್ತು ಸಹಕಾರದಿಂದ ಬದುಕಿದಾಗ ಮಾತ್ರ ಸಮಾಜ ನಿಜವಾದ ಅರ್ಥದಲ್ಲಿ ಬಲಿಷ್ಠವಾಗುತ್ತದೆ. ನಾರಾಯಣಗುರುಗಳ ಆದರ್ಶಗಳು ಇಂದು ಸಹ ಸಮಾನತೆ, ಸಹೋದರತೆ ಮತ್ತು ಮಾನವತೆಯ ದೀಪವನ್ನು ಬೆಳಗಿಸುತ್ತಿವೆ. ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಫೆಬ್ರವರಿ […]
Read More
10-02-2026, 8:00 PM
ಕೊಣಾಜೆ, ಫೆ.10 : ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಯುವ ಸಂಜೀವಿನಿ ವತಿಯಿಂದ 5ನೇ ಸೇವಾ ಕಾರ್ಯವಾಗಿ ಫೆಬ್ರವರಿ 10, 2026ರಂದು ಮಂಗಳವಾರ ಪುಣ್ಯಕೋಟಿ ನಗರ, ಕೈರಂಗಳದಲ್ಲಿರುವ ಅಮೃತ ಧಾರ ಗೋಶಾಲೆಯ ಅನಾಥ ಹಸುಗಳ ಪಾಲನೆಗಾಗಿ ಧನ ಸಹಾಯ ಹಸ್ತಾಂತರಿಸಲಾಯಿತು. ಒಂದು ಹಸುವಿನ ವಾರ್ಷಿಕ ಪಾಲನೆಗಾಗಿ ರೂ. 15,000/- ಮೊತ್ತವನ್ನು ಗೋ ಸಂರಕ್ಷಣಾ ಕೇಂದ್ರಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಗೋಮಾತೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಧನ ಸಹಾಯ […]
Read More
10-02-2026, 4:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ 2026ನೇ ಎಪ್ರಿಲ್ 19ರಂದು ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ಇದರ ನಿಯಮಾವಳಿಗಳನ್ನು ಕೇಂದ್ರ ಸಮಿತಿಯು ಬಿಡುಗಡೆಗೊಳಿಸಿದೆ. ನಿಯಮಾವಳಿಗಳು ಅರ್ಹತೆ ಮತ್ತು ಸದಸ್ಯತ್ವ : 1) ಈ ಸ್ಪರ್ಧೆಯು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾಗಿರುವ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆಯಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ […]
Read More