25-01-2026, 8:30 PM
ಮಂಗಳೂರು : ಸೇವಾ ಮನೋಭಾವ, ಸಂಘಟನಾ ಶಕ್ತಿ ಮತ್ತು ಸಮಾಜಮುಖಿ ಚಿಂತನೆಯ ದಶಕದ ಪಯಣವನ್ನು ಸ್ಮರಿಸುವಂತೆ, ಯುವವಾಹಿನಿ (ರಿ.) ಕಂಕನಾಡಿ ಘಟಕದ ದಶಮಾನೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ದಿನಾಂಕ 25-01-2026ರ ಆದಿತ್ಯವಾರ ಕಂಕನಾಡಿ ಗರೋಡಿ ಸಮೀಪದ ಸಮೃದ್ಧಿ ಭವನದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರು ಮಾತನಾಡಿ,“ಹಿರಿಯರು ನಡೆದು ಬಂದ ತತ್ವಾದರ್ಶಗಳೇ ಸಂಘಟನೆಯ ನೆಲೆ. ಆ ಮಾರ್ಗದರ್ಶನವಿಲ್ಲದೆ ಹೊಸಬರ ಹೆಜ್ಜೆಗಳು […]
Read More
25-01-2026, 1:00 PM
ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳಿಗೆ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಅರಿವು ಮೂಡಿಸುವ ಉದ್ದೇಶದಿಂದ “ಮಾಹಿತಿ ಕಾರ್ಯಾಗಾರ – 2k26” ಕಾರ್ಯಕ್ರಮವನ್ನು ದಿನಾಂಕ 25.01.2026ರ ಆದಿತ್ಯವಾರ ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್ನಲ್ಲಿ ಆಯೋಜಿಸಲಾಯಿತು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ.ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಉದ್ದೇಶ, ಘಟಕಗಳ ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳ ಜವಾಬ್ದಾರಿ–ಕರ್ತವ್ಯಗಳು […]
Read More
25-01-2026, 11:00 AM
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡೋತ್ಸವದ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ ಶಿಬಿರವನ್ನು ಬಂಟ್ವಾಳ ಎಸ್.ವಿ.ಎಸ್ ಕ್ರೀಡಾಂಗಣದಲ್ಲಿ 2026ನೇ ಜನವರಿ 28ರಂದು ಆಯೋಜಿಸಲಾಯಿತು ಯುವವಾಹಿನಿ ಬಂಟ್ವಾಳ ಘಟಕದ ಮಾದರಿ ಕಾರ್ಯ ಶ್ಲಾಘನೀಯ : ಅಶೋಕ್ ಕುಮಾರ್ ಪಡ್ಪುಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ ಕಾರ್ಯ ಶ್ಲಾಘನೀಯ […]
Read More
25-01-2026, 11:00 AM
ಉಡುಪಿ: ನಾರಾಯಣ ಗುರುಗಳು ವಿಶ್ವಕ್ಕೆ ಸಾರ್ವಕಾಲಿಕ ಸಂದೇಶ ನೀಡಿದ ಜಗದ್ಗುರುಗಳು. ಅವರ ಚಿಂತನೆಗಳು ಪ್ರಸ್ತುತ ಯುವ ಜನತೆಗೆ ಹೆಚ್ಚು ಪ್ರೇರಣೆಯಾಗಬೇಕು. ಜಾತಿ ಮತ ಧರ್ಮಗಳ ಸಾಮರಸ್ಯ ಸಾರಿದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರ ಸಂಘಟಿಸುವ ಮೂಲಕ ಯುವವಾಹಿನಿ ಉಡುಪಿ ಘಟಕವು ಗುರುತಿಸಿಕೊಂಡಿರುವುದು ಸ್ತುತ್ಯರ್ಹವೆಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ಯುವವಾಹಿನಿ ಉಡುಪಿ ಘಟಕವು ಬನ್ನಂಜೆ ಬಿಲ್ಲವರ ಸೇವಾ ಸಂಘದ […]
Read More
24-01-2026, 10:00 PM
ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ 11ನೇ ವರ್ಷದ ಅಂಗವಾಗಿ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸ್ಥಾಪಿಸಲಾದ ‘ವಿದ್ಯಾನಿಧಿ’ಯನ್ನು ಬಲವರ್ಧನೆಗೊಳಿಸುವ ಸಲುವಾಗಿ ದಿನಾಂಕ 24/01/2026 ರಂದು ಶನಿವಾರ ಬಜಪೆ ಕೇಂದ್ರ ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ತುಳು ಪೌರಾಣಿಕ ಸಿನಿ ನಾಟಕ ‘ಪೊರಿಪುದಪ್ಪೆ ಜಲದುರ್ಗೆ’ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಬೆನಕ ಆರ್ಟ್ಸ್ ಕುಡ್ಲ ಕಲಾವಿದರಿಂದ ನಡೆದ ಈ ನಾಟಕಾಭಿನಯ ಅಭೂತಪೂರ್ವ ಯಶಸ್ಸು ಕಂಡು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳಿಂದ ಅಪಾರ […]
Read More
24-01-2026, 1:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]
Read More
23-01-2026, 4:58 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31 ಹಾಗೂ ಫೆಬ್ರವರಿ 01ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲ್ಪಟ್ಟಿದ್ದು, ಇದರ ಅಂಗವಾಗಿ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಗುರುದೇವರ ಸ್ಮರಣೆಯೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು ಅವರು ಮಾತನಾಡಿ, ಯುವವಾಹಿನಿ (ರಿ.) […]
Read More
23-01-2026, 10:36 AM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 23-01-2026ರ ಶುಕ್ರವಾರ ಸಂಜೆ 5.00 ರಿಂದ 7.00 ಗಂಟೆಯವರೆಗೆ ಕಡಬದ ಜಯದುರ್ಗ ದೇವಸ್ಥಾನದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ದೇವಸ್ಥಾನದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದರು. ಸಮಾಜಮುಖಿ ಕಾರ್ಯಗಳ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿಗೆ ಯುವವಾಹಿನಿ ಸದಾ ಬದ್ಧವಾಗಿರುವುದಕ್ಕೆ ಈ ಶ್ರಮದಾನ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರಮದಾನದಲ್ಲಿ […]
Read More
22-01-2026, 9:00 PM
ಉಪ್ಪಿನಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ನಕ್ಷತ್ರ ಶತಭಿಷ ದಿನವಾದ 22.01.2026ರ ಗುರುವಾರದಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಹಾಗೂ ಬಜತ್ತೂರು ಬಿಲ್ಲವ ಗ್ರಾಮ ಸಮಿತಿಯ ಸಂಯುಕ್ತ ಆಶ್ರಯದಲ್ಲಿ “ಗುರು ಸ್ಮರಣೆ – 2026” ಭಜನಾ–ಸಂಕೀರ್ತನಾ ಕಾರ್ಯಕ್ರಮ ನಡೆಯಿತು ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಹಾಗೂ ಗ್ರಾಮ ಸಮಿತಿಯ ಸದಸ್ಯರು ಸೇರಿದಂತೆ ಒಟ್ಟು 65 ಮಂದಿ ಭಕ್ತಿಯಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಗುರು ಮಂದಿರದ ಸಂಚಾಲಕರಾದ ಅಶೋಕ್ ಕುಮಾರ್ ಪಡ್ಪು, […]
Read More