Yuvavahini

ಘಟಕಗಳು

ಸ್ವಚ್ಚತಾ ಕಾರ್ಯಕ್ರಮ

ಪುತ್ತೂರು: ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ 14/04/2024ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಘಟಕದ ಅಧ್ಯಕ್ಷರಾದ ಜಯರಾಮ್ ಬಿ ಏನ್ ವಹಿಸಿದರು. ಉದ್ಘಾಟನೆಯನ್ನು ನಿವೃತ್ತ ಯೋಧರಾದ ವಸಂತ ಸಾರಕೆರೆರವರು ತೆಂಗಿನ ಕಾಯಿ ಹೊಡೆಯುವ ಮೂಲಕ ಚಾಲನೆ ನೀಡಿದರು. ಸ್ವಚ್ಛತಾ ಕಾರ್ಯಕ್ರಮವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ತೆರಳುವ ಮಾರ್ಗ ನೆರಿಮೊಗೆರು ರಸ್ತೆಯಿಂದ ಮುಕ್ವೆಯವರೆಗೆ ಸ್ವಚ್ಚತೆಯನ್ನು ಮಾಡಿ ಯಶಸ್ವಿಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು […]

Read More

ಬಿಸು ಪರ್ಬದ ಪೊಸ ಕಣಿ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 14-04-2024ರ ಭಾನುವಾರ ಸಂಜೆ 3.30ಕ್ಕೆ ಯುಗಾದಿ ಹಬ್ಬದ ಆಚರಣೆ, ಬಿಸು ಕಣಿ ಬಗ್ಗೆ ಮಾಹಿತಿ, ಮಹಿಳೆಯರಿಗಾಗಿ ಕಾರ್ಯಕ್ರಮ, ತುಳಿಲಿಪಿ ಪರೀಕ್ಷೆ ಬರೆದವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಮಾಣ ಪತ್ರ, ಗುರುವಂದನೆ ಇತ್ಯಾದಿ ಕಾರ್ಯಕ್ರಮಗಳು ನಡೆದವು. ನಾರಾಯಣ ಗುರುವರ್ಯರ ಭಾವಚಿತ್ರದ ಮುಂದೆ ಬಿಸು ಕಣಿಯನಿಟ್ಟು ದೀಪ ಹಚ್ಚಿ ಕೈಮುಗಿದು ಕಾರ್ಯಕ್ರಮ ಆರಂಭವಾಯಿತು. ಬಂದ ಸದಸ್ಯರಿಗೆಲ್ಲ ವಿವಿಧ ಆಟಗಳನ್ನು ಆಡಿಸಲಾಯಿತು. ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟವರು ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ […]

Read More

ಮನೆ ಮನೆ ಭಜನೆ

ಮಂಗಳೂರು: ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-04-2024 ಶುಕ್ರವಾರ ಸಂಜೆ ಘಟಕದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ್ ಪೂಜಾರಿರವರು ದೇರೆಬೈಲ್ ನಲ್ಲಿ ನೂತನವಾಗಿ ನಿರ್ಮಿಸಿದ ಮನೆಯ ಗೃಹಪ್ರವೇಶ ದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರಾದ ಮನಿಷಾ ರೋಪೇಶ್, ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು […]

Read More

ಶ್ರೀ ರಾಮ ತಾರಕ ಭಜನೋತ್ಸವ

ಬೆಳ್ತಂಗಡಿ:ಶ್ರೀ ರಾಮ ಕ್ಷೇತ್ರ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ದಿನಾಂಕ 10/04/2024 ರಂದು ನಡೆದ ಜಾತ್ರಾ ಮಹೋತ್ಸವ ಹಾಗೂ ಶ್ರೀ ರಾಮ ತಾರಕ ಭಜನೋತ್ಸವ ಕಾರ್ಯಕ್ರಮದಲ್ಲಿ ಸಂಜೆ 4.00 ರಿಂದ 7.00 ಗಂಟೆವರೆಗೆ ನಡೆದ ಭಜನೆಯಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಸದಸ್ಯರು ಭಾಗಿಯಾಗಿದ್ದರು. ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಮಾಜಿ ಅಧ್ಯಕ್ಷರು, ಸಲಹೆಗಾರರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲ ಸದಸ್ಯರಿಗೆ ಅರ್ಚಕರು ಪ್ರಸಾದ ನೀಡಿ ಗೌರವಿಸಿದರು.

Read More

ಯುವವಾಹಿನಿ ಸ್ವಚ್ಛ ಪರಿಕಲ್ಪನೆ

ಮೂಡಬಿದರೆ: ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಹಾಗೂ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಮಿಜಾರು ಮೂಡಬಿದ್ರೆ ಸಹಯೋಗದಲ್ಲಿ ಯುವವಾಹಿನಿ ಸ್ವಚ್ಛ ಪರಿಕಲ್ಪನೆ – 2024 ಎರಡನೇ ಹಂತದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಆರಂಭವು 07/04/2024 ನೇ ಆದಿತ್ಯವಾರ ಲಕ್ಷ್ಮಿ ಛಾಯಾ ನಿವಾಸ, ಬೆಟ್ಕೇರಿ ಮೂಡಬಿದ್ರೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಲಕ್ಷ್ಮಿಛಾಯಾ ನಿವಾಸದ ಮುಂಭಾಗದಲ್ಲಿ ಸಾಂಕೇತಿಕವಾಗಿ ಶ್ರೀಧರ್ ಆಚಾರ್ಯ ಹಿರಿಯ ಸ್ವರ್ಣ ಉದ್ಯಮಿ ಮೂಡುಬಿದ್ರೆ ಇವರು ಗಿಡ ನೆಡುವ ಮೂಲಕ ಉದ್ಘಾಟನೆಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. […]

Read More

ಯುವವಾಹಿನಿ(ರಿ.) ಪುತ್ತೂರು ಘಟಕ – ಪ್ರವಾಸ

ದಿನಾಂಕ : 07-04-2024 ರಂದು ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಬ್ರಹ್ಮಾವರದ ಉಪ್ಪಿನಕೊಟೆಯ” Relax Leisure Park” ಗೆ ಹಮ್ಮಿಕೊಂಡಿದ್ದರು. ಮುಂಜಾನೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಎಲ್ಲರೂ ಪರಿಚಯ ಮಾಡಿಕೊಂಡು Relax Liesure ಪಾರ್ಕ್ ತಲುಪಿ ಉಪಹಾರ ಮಾಡಿ ಬೋಟಿನ ಮೂಲಕ ಸಾಗಿದಾಗ ಮುಖ್ಯಸ್ಥರು ಮಾಹಿತಿಯನ್ನು ನೀಡಿದರು. ಸದಸ್ಯರು ಎರಡು ತಂಡಗಳನ್ನು ಮಾಡಿ ವಾಲಿಬಾಲ್, ಹಗ್ಗಜಗ್ಗಾಟ ಆಡುವುದರ ಮುಖಾಂತರ ಪರಸ್ಪರ ಮನರಂಜಿಸಿದರು. ಮದ್ಯಾಹ್ನದ […]

Read More

ಮಹಿಳೆ ಅಬಲೆಯಲ್ಲ ಸಬಲೆ – ವೃಂದಾ ಎಸ್. ಹೆಗ್ಡೆ

ಮಂಗಳೂರು: ಮಹಿಳೆ ಅಬಲೆಯಲ್ಲ ಅವಳೂ ಕೂಡಾ ಸಬಲಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಪುರುಷರಷ್ಟೇ ಸರಿಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾಳೆ ಎಂದು ಸಮಾಜ ಸೇವಕಿ ವೃಂದಾ ಎಸ್ ಹೆಗ್ಡೆ ಹೇಳಿದರು. ದಿನಾಂಕ 30-03-2024ರಂದು ಉರ್ವಸ್ಟೋರಿನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜರುಗಿದ ಸ್ತ್ರೀ ಐಸಿರಿ ಸುಸ್ತಿರತೆಯ ಹಾದಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ. ಯತ್ರನಾರ್ಯಸ್ತು […]

Read More

ಕುಣಿತ ಭಜನೆ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪುತ್ತೂರು ಘಟಕದ ಆಶ್ರಯದಲ್ಲಿ ದಿನಾಂಕ 26/03/2024 ರಂದು ಬ್ರಹ್ಮ ಶ್ರೀ ನಾರಾಯಣ ಗುರುಮಂದಿದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಪ್ರಯುಕ್ತ ಘಟಕದ ವತಿಯಿಂದ ಬೆಳಿಗ್ಗೆ ಗಂಟೆ 9.30ಕ್ಕೆ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಪುತ್ತೂರು ಘಟಕದ ಅಧ್ಯಕ್ಷರು ಜಯರಾಮ್ ಬಿ ಎನ್ ವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ಬಿಲ್ಲವ ಸಂಘ(ರಿ.) ಪುತ್ತೂರು ಇದರ ಅಧ್ಯಕ್ಷರಾದ ಸತೀಶ್ ಕೇಡೆಂಜಿ […]

Read More

ಗುರು ಮಂದಿರ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ: ಕುಮಾರ್ ಪೂಜಾರಿ ಇರುವೈಲ್

ಮಂಗಳೂರು: ಊರಿನ 10 ಜನ ಸೇರಿ, ಸಮಾನ ಸ್ವಇಚ್ಛೆ ಇದ್ದರೆ ಗುರು ಮಂದಿರ ಅತೀ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ ಎಂದು ದಿನಾಂಕ 23-03-2024 ರಂದು ಯುವವಾಹಿನಿ(ರಿ.) ಶಕ್ತಿನಗರ ಘಟಕದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆ ಮಾಡಿರುವ ಕುಮಾರ್ ಪೂಜಾರಿ ಇರುವೈಲ್ ನುಡಿದರು. ಕಾರ್ಯಕ್ರಮವು ಕುಂಟಲ್ಪಾಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆಯಿತು. 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಕೆ. ಮಹಾಕಾಳಿ ಒಂದನೇ ಉಪಾಧ್ಯಕ್ಷರಾಗಿ ತುಕಾರಾಂ, ಎರಡನೆಯ ಉಪಾಧ್ಯಕ್ಷರಾಗಿ ಸುಜಾತ, ಕಾರ್ಯದರ್ಶಿಯಾಗಿ […]

Read More

ವಿಶೇಷ ಗುರು ಪೂಜೆ

ಮೂಲ್ಕಿ: ಯುವವಾಹಿನಿ ಸದಸ್ಯ ರೊಳಗೆ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬ ದೊಂದಿಗೆ ಬೆರೆಯಲು ದಿನಾಂಕ 19/08/2023 ರಿಂದ 09/03/2024 ರವರೆಗೆ ಮನೆ ಮನೆ ಭಜನೆ ಭಜನಾ ಸಂಕೀರ್ತನೆ ಜರಗಿತು.ಒಟ್ಟು 24 ಸದಸ್ಯರುಗಳ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಸಿ ಸಮಾರೋಪವಾಗಿ ದಿನಾಂಕ 14/03/2024 ರಂದು ಮೂಲ್ಕಿ ಬಿಲ್ಲವ ಸಂಘದ ಗುರು ಮಂದಿರದಲ್ಲಿ ಭಜನೆ ಹಾಗೂ ವಿಶೇಷ ಗುರುಪೂಜೆ ನಡೆಯಿತು. ಅರ್ಚಕರಾದ ಕೃಷ್ಣ ಶಾಂತಿರವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಅನ್ನಪ್ರಸಾದ ವಿತರಿಸಲಾಯ್ತು.ಈ ಸಂದರ್ಭದಲ್ಲಿ ಮೂಲ್ಕಿ ಬಿಲ್ಲವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!