Yuvavahini

ಘಟಕಗಳು

ಸಾರ್ವಜನಿಕ ಸಂವಹನ ತರಬೇತಿ ಶಿಬಿರ

ದಿನಾಂಕ 23-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಘಟಕದ ಸದಸ್ಯರಿಗಾಗಿ ಒಂದು ದಿನದ ಸಾರ್ವಜನಿಕ ಸಂವಹನ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9 ಗಂಟೆಯಿಂದ 2.30 ರ ತನಕ ಜರಗಿದ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೇಸೀ ಅಂತಾರಾಷ್ಟ್ರೀಯ ತರಬೇತುದಾರ ರಾಮಚಂದ್ರ ರಾವ್‌ರವರು ಸದಸ್ಯರು ಸಭೆಯಲ್ಲಿ ಮಾತನಾಡುವಾಗ ಯಾವ ರೀತಿ ಪೂರ್ವ ತಯಾರಿ ಮಾಡಬೇಕು, ಯಾವೊಂದು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂಬ ವಿಷಯವನ್ನು ತಿಳಿಸಿದರು. ನಂತರ ೨೫ ಮಂದಿಯ ಗುಂಪನ್ನು ಎರಡು ತಂಡಗಳಾಗಿ ವಿಂಗಡಿಸಿ […]

Read More

ಕತ್ತಲಿನಿಂದ ಬೆಳಕಿಗೆ ಕೂಳೂರು ಘಟಕದ ವಿನೂತನ ಕಾರ್ಯಕ್ರಮ

ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು. ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು, ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀಗುರು ವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇದ್ದಾವೆ. ಅಂಥವರನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲಾ ಸಾಮಾಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]

Read More

ಕಂಕನಾಡಿ ಯುವವಾಹಿನಿಯಿಂದ ಸಹಾಯ ಹಸ್ತ

ದಿನಾಂಕ 22-10-2016 ರಂದು ಕಂಕನಾಡಿ ಘಟಕದ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಮಗು ರಿಶಿತ್ ಕುಮಾರ್ ಅವರಿಗೆ ಧಾನಿಗಳ ಸಹಕಾರದಿಂದ ಒಟ್ಟು ಮಾಡಿದ ರೂ. 17,000/-ದ ಚೆಕ್‌ನ್ನು ಘಟಕಾಧ್ಯಕ್ಷರು ವಿತರಿಸುತ್ತಿರುವುದು.

Read More

ಆರೋಗ್ಯ ಮಾಹಿತಿ ಶಿಬಿರ

ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]

Read More

ಪಡುಬಿದ್ರಿ ಘಟಕದ ವತಿಯಿಂದ ವಿಚಾರಗೋಷ್ಠಿ ಕಾರ್ಯಕ್ರಮ

ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು […]

Read More

ಗುರುಜಯಂತಿ ಆಚರಣೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ದಿನಾಂಕ 25-9-2016 ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿಯ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 162 ನೇ ಜಯಂತಿ ಆಚರಣೆ ಹಾಗೂ ಗುರುಗಳ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಿದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜರಗಿತು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಸಿಂಚನ ಲೈಟಿಂಗ್ ಕಂಟ್ರೋಲ್‌ನ CEO ರತ್ನಾಕರ ಸುವರ್ಣ, ಮಾಜಿ […]

Read More

ಸುರತ್ಕಲ್ ಘಟಕದ ವತಿಯಿಂದ ಶ್ರೀ ಗುರುಸ್ಮರಣೆ ಕಾರ್ಯಕ್ರಮ

ದಿ. 18-09-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮ ಜರಗಿತು. ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸುರತ್ಕಲ್ ಪರಿಸರದ ಆಮಂತ್ರಿತ ಭಕ್ತಿಗೀತೆ ಸಂಗೀತ ಬಳಗದವರಿಂದ ಭಕ್ತಿಗೀತೆ ಹಾಡುಗಾರಿಕೆ ಸಮೂಹ ಸ್ಪರ್ಧೆಯನ್ನು ಘಟಕದ ಮಾಜಿ ಅಧ್ಯಕ್ಷ ವಿಜಯ ಎಸ್. ಕುಕ್ಯಾನ್‌ರವರ ಸಂಚಾಲಕತ್ವದಲ್ಲಿ ಆಯೋಜಿಸಲಾಗಿತ್ತು. ಭಕ್ತಿಗೀತೆ ಸ್ಪರ್ಧಾ ಕಾರ್ಯಕ್ರಮವನ್ನು ಸುರತ್ಕಲ್ ಅಕ್ಷಯ ಡೆವಲಪರ್‍ಸ್‌ನ ಮಾಲಕ ಅಕ್ಷಯ ಎನ್. ಬಂಗೇರರವರು ಉದ್ಘಾಟಿಸಿದರು. ಈ ಸ್ಪರ್ಧಾ […]

Read More

ಮಂಗಳೂರು ಮಹಿಳಾ ಘಟಕದ ವಿವಿಧ ಕಾರ್ಯಕ್ರಮಗಳು

ತಾ. 3-9-2016 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಸದಸ್ಯರಿಗೆ ಫಿನಾಯಿಲ್ ಹಾಗೂ ಲಿಕ್ವಿಡ್ ಸೋಪ್ ತಯಾರಿಸುವುದರ ಬಗ್ಗೆ ಜರಗಿದ ಮಾಹಿತಿ ಶಿಬಿರ. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ಲೇಡಿಹಿಲ್ ವೃತ್ತದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದವರೆಗೆ ಜರಗಿದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ವೆನ್‌ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಹಾಯಕರಿಗೆ (ಮನೆಯವರಿಗೆ) ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕದಿಂದ ಏರ್ಪಡಿಸಲಾಗಿತ್ತು. […]

Read More

ಬೆಳುವಾಯಿ ಘಟಕದ ಪದಗ್ರಹಣ ಕಾರ್ಯಕ್ರಮ

ಬೆಳುವಾಯಿ ಘಟಕದ 2016-17 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ತಾ. 18-9-2016 ರಂದು ಬೆಳುವಾಯಿಯ ಷಣ್ಮುಖಾನಂದ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆಯ ಮಹಾವೀರ ಕಾಲೇಜಿನ ಉಪನ್ಯಾಸಕ ಹರೀಶ್ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಬೆಳುವಾಯಿ ಇವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ವಿಠಲ್ ಎಂ. ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ […]

Read More

ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣ ಗುರು ನಾಮಫಲಕ ಅನಾವರಣ

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ನಗರದ ನಾಮಫಲಕ ಅನಾವರಣ ಕಾರ್ಯಕ್ರಮವು ಸೆ. 16 ರಂದು ಶಾಸಕ ಕೆ. ವಸಂತ ಬಂಗೇರ ಮಾರ್ಗದರ್ಶನದಲ್ಲಿ ಜರಗಿತು. ಪಟ್ಟಣ ಪಂಚಾಯತ್ ಬೆಳ್ತಂಗಡಿ, ಯುವವಾಹಿನಿ ಸಂಚಾಲನಾ ಸಮಿತಿ ಬೆಳ್ತಂಗಡಿ ನಗರ ಇವರ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನದ ಸಂದರ್ಭದಲ್ಲಿ ಬೆಳ್ತಂಗಡಿ ಹಳೆಕೋಟೆ ಸಾಯಿ ಮಂದಿರದ ಎದುರುಗಡೆ ಶ್ರೀ ನಾರಾಯಣಗುರು ನಗರದ ನಾಮಫಲಕವನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಅನಾವರಣಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣರಾವ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!