Yuvavahini

ಘಟಕಗಳು

ಪುತ್ತೂರು: ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ

ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ […]

Read More

ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017

ದಿನಾಂಕ 22-01-2017 ರಂದು ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017 ಕಾರ್ಯಕ್ರಮವು ಸುರತ್ಕಲ್‌ನ ಲಯನ್ಸ್‌ಕ್ಲಬ್ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಪ್ರಧಾನ ಕಾರ್ಯದರ್ಶಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ. ತಮ್ಮಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಎಸ್. ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಮತ್ತು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ಭಾಸ್ಕರ […]

Read More

ಮೂಲ್ಕಿ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಶ್ರೀ ನಾರಾಯಣಗುರು ಸೇವಾದಳ, (ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಯುವವಾಹಿನಿ (ರಿ) ಮೂಲ್ಕಿ ಘಟಕದ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ದಿನಾಂಕ 22-01-2017 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿರುತ್ತದೆ. ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಖ್ಯಾತ ಹೃದಯರೋಗ ತಜ್ಞ ಡಾ| ಸುಬ್ರಹ್ಮಣ್ಯಮ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. […]

Read More

ಮಂಗಳೂರು ಮಹಿಳಾ ಯುವವಾಹಿನಿಯ ಮಾಹಿತಿ ಕಾರ್ಯಾಗಾರ

ದಿನಾಂಕ 21-01-2017 ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಕೆಪಿಟಿ ಬಳಿಯ ಸರಕಾರಿ ಮಹಿಳಾ ತರಬೇತಿ ಕೇಂದ್ರದಲ್ಲಿ ಗೃಹರಕ್ಷಕ ದಳ ಮತ್ತು ಅಗ್ನಿಶಾಮಕ ಇವರಿಂದ ಅಣುಕು ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಡಿಸ್ಟ್ರಿಕ್ಟ್ ಫೈಯರ್ ಆಫೀಸರ್ ಪರಮೇಶ್ವರ್, ಡೆಪ್ಯುಟಿ ಕಮಾಡೆಂಟ್ ಆಫ್ ಹೋಂಗಾರ್ಡ್ ಹಾಗೂ ಐ.ಟಿ.ಐ.ನ ಪ್ರೊಫೆಸರ್ ಎ. ಬಾಲಕೃಷ್ಣ ಇವರುಗಳು ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ, ಘಟಕದ ಸಲಹೆಗಾರ ಅಶೋಕ್‌ಕುಮಾರ್, ಮಂಗಳೂರು ಘಟಕದ ಮಾಜಿ ಅಧ್ಯಕ್ಷ […]

Read More

ಉಡುಪಿ: ಸೌಂದರ್ಯವೃದ್ಧಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಗಾರ

ದಿನಾಂಕ 22-01-2017 ರಂದು ಯುವವಾಹಿನಿ(ರಿ) ಉಡುಪಿ ಘಟಕದ ನೇತೃತ್ವದಲ್ಲಿ ಮಹಿಳಾ ಸೌಂದರ್ಯವೃದ್ಧಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಎಂಬ ಮಹಿಳಾ ಕಾರ್ಯಕ್ರಮ ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮಲ್ಪೆ ಬಿಲ್ಲವ ಮಹಿಳಾ ಸಂಘ ಅಧ್ಯಕ್ಷೆ ಶ್ರೀಮತಿ ವಿಜಯ ಬಂಗೇರರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಸೌಂದರ್ಯ ತಜ್ಞೆಯಾದ ವೇದಾವತಿ ಸುವರ್ಣರವರು ಈ ಕಾರ್ಯಾಗಾರವನ್ನು ನಡೆಸಿಕೊಟ್ಟು ಉತ್ತಮ ಮಾಹಿತಿಯನ್ನು ನೀಡಿದರು. ಯುವವಾಹಿನಿ (ರಿ) ಮಂಗಳೂರು ಕೇಂದ್ರ ಸಮಿತಿಯ ಮಹಿಳಾ ಸಂಚಾಲಕಿ ಶ್ರೀಮತಿ ಗುಣವತಿ ರಮೇಶ್ ಅತಿಥಿಗಳಾಗಿ ಭಾಗವಹಿಸಿದರು. ಯುವವಾಹಿನಿ(ರಿ) ಉಡುಪಿ […]

Read More

ಯು.ಪಿಎಸ್.ಸಿ, ಕೆ.ಪಿ.ಎಸ್.ಸಿ. ಮತ್ತು ಐ.ಬಿ.ಪಿ.ಎಸ್ – ಉಚಿತ ಪ್ರೇರಣಾ ಶಿಬಿರ-2016-17

ದಿನಾಂಕ 22-1-2017 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ) ಮಂಗಳೂರು, ದಿ ಕ್ರಿಶ್ಚಿಯನ್ ಎಜ್ಯುಕೇಶನ್ ಸೊಸೈಟಿ (ರಿ) ಮಂಗಳೂರು, ರೋಟರಿ ಕ್ಲಬ್ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು I.A.S. ಮಂಗಳೂರು ಸಂಸ್ಥೆಗಳ ಸಹಯೋಗದೊಂದಿಗೆ UPSC/KAS/IBPS ಉಚಿತ ಪ್ರೇರಣಾ ಶಿಬಿರವು ಜರಗಿತು. ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಎಸ್‌ಪಿ ಭೂಷಣ್ ಗುಲಾಬ್ ರಾವ್ ಬೋರಸೆ IPS ಉದ್ಘಾಟಿಸಿ, ಮಾತನಾಡುತ್ತಾ ಸೇವಾ ಮನೋಭಾವ ಇರುವವರು ಕಠಿಣ ಅಭ್ಯಾಸ, ತರಬೇತು ಪಡೆದು ಜನ ಸೇವೆ ಮಾಡುವ ಮನೋಭಾವವಿದ್ದರೆ ಮಾತ್ರ ಐ.ಎ.ಎಸ್, ಕೆ.ಎ.ಎಸ್‌ನಂತಹ […]

Read More

ಕೂಳೂರು ಘಟಕದಿಂದ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 14-1-2017 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸುವರ್ಣ ಆರೋಗ್ಯಕ್ಕೆ ಸುರಕ್ಷಾ ಯೋಜನೆಗಳು ಎಂಬ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕರಾದ ಜಗನ್ನಾಥ್ ಶಿರ್ಲಾಲ್‌ರವರು ಆರೋಗ್ಯ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸುರಕ್ಷಾ ಯೋಜನೆಗಳಿದ್ದು, ಆಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರು […]

Read More

ಉಡುಪಿ : ’ತಲೆಗೊಂದು ಸೂರು’ ಕಾರ್ಯಕ್ರಮದ ಶಿಲಾನ್ಯಾಸ

ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]

Read More

ಉಪ್ಪಿನಂಗಡಿ ಯುವವಾಹಿನಿ : ಪದಗ್ರಹಣ 2016-17

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕಿಗೊಂದು ಅರ್ಥ ಬರಲು ಸಾಧ್ಯ ಮತ್ತು ನಾವು ಸಮುದಾಯ ಅಭಿವೃದ್ಧಿಯ ಜತೆಗೆ ಸಮಾಜದ ಅಭಿವೃದ್ಧಿಯ ಕಡೆಗೂ ದೃಷ್ಟ ಹಾಯಿಸಬೇಕು ಎಂದು ಪುತ್ತೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಜಯಂತ ನಡುಬೈಲು ತಿಳಿಸಿದರು. ಉಪ್ಪಿನಂಗಡಿ ಸ.ಮಾ.ಹಿ.ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿದ ಉಪ್ಪಿನಂಗಡಿ ಯುವವಾಹಿನಿಯ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಹಾಗೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಸಮಾನ […]

Read More

ಕಂಕನಾಡಿ ಘಟಕದ ವತಿಯಿಂದ ಶ್ರೀ ಮಹಾಂಕಾಳಿ ದೈವಸ್ಥಾನಕ್ಕೆ ಕುರ್ಚಿ ಕೊಡುಗೆ

ದಿನಾಂಕ 29-12-2016 ರಂದು ಕಂಕನಾಡಿ ಘಟಕದ ವತಿಯಿಂದ ಶ್ರೀ ಮಹಾಂಕಾಳಿ ದೈವಸ್ಥಾನದಲ್ಲಿ ವಾರದ ಪೂಜೆ ಹಾಗೂ ಭಜನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಅಲ್ಲದೆ ದೈವಸ್ಥಾನಕ್ಕೆ 50 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಸಲಹೆಗಾರರಾದ ಜಿ. ಪರಮೇಶ್ವರ ಪೂಜಾರಿ, ಘಟಕದ ಅಧ್ಯಕ್ಷ ಹರೀಶ್ ಕೆ. ಸನಿಲ್, ಶ್ರೀ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಘಟಕದ ಕಾರ್ಯದರ್ಶಿ ಭವಿತ್‌ರಾಜ್ ಹಾಗೂ ನಿಕಟಪೂರ್ವ ಅಧ್ಯಕ್ಷ ಶೇಖರ್ ಅಮೀನ್ ಉಪಸ್ಥಿತರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!