01-08-2026, 2:00 PM
ಮೂಡುಬಿದಿರೆ, ಆ. 1: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮೂಡುಬಿದಿರೆಯಲ್ಲಿ ಆಗಸ್ಟ್ 1ರಂದು ‘ವಿದ್ಯಾರ್ಥಿ ಮನೋಹಿತ’ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಾಗಾರ–2 ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ, ಶಿಸ್ತುಬದ್ಧ ಜೀವನಶೈಲಿಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಸಂತೋಷ್ ನಾಯ್ಕ್ […]
Read More
31-07-2026, 8:30 PM
ಕಲ್ಲಡ್ಕ, ಜುಲೈ 31: “ಎಲ್ಲಾ ಮತಧರ್ಮಗಳಲ್ಲಿರುವ ಉತ್ತಮಾಂಶಗಳ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಆಧ್ಯಾತ್ಮಿಕತೆ. ಶ್ರೀ ನಾರಾಯಣಗುರುಗಳ ಸಂದೇಶಗಳಲ್ಲಿ ಈ ವಿಶಾಲ ಮಾನವೀಯ ದೃಷ್ಟಿಕೋನ ಸ್ಪಷ್ಟವಾಗಿ ಕಾಣುತ್ತದೆ” ಎಂದು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಪ್ರಶಾಂತ್ ಅನಂತಾಡಿ ಹೇಳಿದರು.ಅವರು ಜುಲೈ 31ರಂದು ಮುರಬೈಲು–ಗೊಳ್ತಮಜಲು, ಕಲ್ಲಡ್ಕದ ಮೋಹನ್ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ – 73ನೇ ಮಾಲಿಕೆ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು.ಗುರುಗಳ ಚಿಂತನೆಗಳನ್ನು ಅರಿತಾಗ ಭಗವಾನ್ ಬುದ್ಧ, ಆದಿ […]
Read More
30-07-2026, 6:00 PM
ಮಂಗಳೂರು, ಜು. 30: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸೀಡಾಕ್), ಧಾರವಾಡ, ಸೀಡಾಕ್ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು, ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜುಲೈ 30ರಂದು ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ […]
Read More
29-07-2026, 8:00 PM
ಬಜಪೆ, ಜುಲೈ 29: ಗುರು ಪೂರ್ಣಿಮೆಯ ಪವಿತ್ರ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಇಲ್ಲಿ ಜುಲೈ 29ರಂದು ಸಂಜೆ 4.30ರಿಂದ 6.00 ಗಂಟೆಯವರೆಗೆ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರಿಂದ ವಿಶೇಷ ಭಜನಾ ಸಂಕೀರ್ತನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಭಜನಾ ಸಂಕೀರ್ತನೆಯ ಮೂಲಕ ಶ್ರೀ ನಾರಾಯಣ ಗುರುಗಳ ತತ್ವ-ಆದರ್ಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರು ಸ್ಮರಣೆಯಲ್ಲಿ ತೊಡಗಿದರು. ಭಜನಾ ಸಂಕೀರ್ತನೆಯ ಬಳಿಕ ಗುರುವರ್ಯರಿಗೆ ವಿಶೇಷ ಗುರುಪೂಜೆ […]
Read More
29-07-2026, 8:00 PM
ಕೂಳೂರು, ಜು. 29: ದೇಶದ ರಕ್ಷಣೆ ಮತ್ತು ಭದ್ರತೆಯ ವಿಚಾರ ಬಂದಾಗ ಭಾರತದ ಪ್ರತಿಯೊಬ್ಬ ಪ್ರಜೆಯೂ ಸೈನಿಕನ ಮನೋಭಾವವನ್ನು ಹೊಂದಿರಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಆಶೋಕ್ ಕುಮಾರ್ ಪಡ್ಪು ಹೇಳಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಫಲ್ಗುಣಿ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಗಿಲ್ ವಿಜಯ್ ದಿವಸ್–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೇಶದ ಭದ್ರತೆಗೆ ಸವಾಲೊಡ್ಡಿದ ಶತ್ರುಗಳನ್ನು ಧೈರ್ಯದಿಂದ ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರ ಸಾಹಸ, ಶೌರ್ಯ ಮತ್ತು ತ್ಯಾಗ […]
Read More
28-07-2026, 8:00 PM
ಮಂಗಳೂರು, ಜು. 28: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂದರೆ ಕಷ್ಟದ ದಿನಗಳ ಸಂಕೇತವಾಗಿತ್ತು. ನಿರಂತರ ಸುರಿಯುವ ಮಳೆಯಿಂದ ಸೂರ್ಯನ ಮುಖವೇ ಕಾಣದ ದಿನಗಳು, ಆಹಾರದ ಅಭಾವ, ಅನಾರೋಗ್ಯ ಮತ್ತು ಬದುಕಿನ ಸಂಕಷ್ಟಗಳು ಆಟಿಯ ಅವಿಭಾಜ್ಯ ಅಂಗವಾಗಿದ್ದವು. ಆ ದಿನಗಳ ಅನುಭವವನ್ನು ಮರೆಯಲು ಸಾಧ್ಯವಿಲ್ಲ ಎಂದು ಖ್ಯಾತ ಉಪನ್ಯಾಸಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕವು ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್, ಆಟಿದ ಕಂಪು-ನೆಂಪು ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ […]
Read More
27-07-2026, 10:00 PM
ಮಂಗಳೂರು, ಜುಲೈ 27: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುತ್ತಿರುವ “ಒಂದೇ ನಾಮ, ಒಂದೇ ಭಾವ” ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಜುಲೈ 27ರಂದು ಸಂಜೆ ಭಜನಾ ಸೇವೆಯು ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಮಂಜುಳ ಪ್ರಭಾಕರ್ ಮತ್ತು ಬಳಗ, ಅಶೋಕನಗರ, ಮಂಗಳೂರು ಅವರ ಸಹಯೋಗದಲ್ಲಿ ಭಜನಾ ಸಂಕೀರ್ತನ ನಡೆಯಿತು. ಭಜನಾ ತಂಡದ ಸದಸ್ಯರು ಹರಿನಾಮ ಸ್ಮರಣೆಯೊಂದಿಗೆ ಭಕ್ತಿರಸಪೂರ್ಣ ಭಜನೆಗಳನ್ನು ಗಾಯನ ಮಾಡಿ, ಶ್ರೀ ಗೋಕರ್ಣನಾಥ […]
Read More
27-07-2026, 6:00 PM
ಮಾಣಿ, ಜುಲೈ 27: ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷೆಯ “ಯುವ ಸೇವಾ ಸ್ಪರ್ಶ” ಯೋಜನೆಯ ಮೂರನೇ ಹಂತದ ಸೇವಾ ಕಾರ್ಯದ ಅಂಗವಾಗಿ, ಪೆರಾಜೆ ಗ್ರಾಮದ ನಿವಾಸಿ ಪದ್ಮಾವತಿ ಅವರಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳ ಕಿಟ್ನ್ನು ವಿತರಿಸಲಾಯಿತು. ಪದ್ಮಾವತಿ ಅವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದು, ಅನಾರೋಗ್ಯದ ಕಾರಣ ದುಡಿದು ಜೀವನ ನಿರ್ವಹಿಸಲು ಅಸಮರ್ಥರಾಗಿದ್ದಾರೆ. ಅವರ ಸಂಕಷ್ಟವನ್ನು, ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಮನಗಂಡ ಯುವವಾಹಿನಿ (ರಿ.) ಮಾಣಿ ಘಟಕವು ಮಾನವೀಯ ಕಳಕಳಿಯಿಂದ ಒಂದು ತಿಂಗಳಿಗೆ […]
Read More
26-07-2026, 8:00 PM
ಶಕ್ತಿನಗರ, ಜುಲೈ 26 : ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಜುಲೈ 26ರಂದು ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರಯೋಧರಿಗೆ ಮೌನ […]
Read More
26-07-2026, 7:00 PM
ಕಂಕನಾಡಿ, ಜುಲೈ 26: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ‘ಅಟಿದ ನೆಂಪು’ ಕಾರ್ಯಕ್ರಮವು ಜುಲೈ 26ರಂದು ಭಾನುವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಭಗವತಿ ಇಂಗ್ಲೀಷ್ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಾವತಿ ದೀಪ ಬೆಳಗಿಸಿ ಹಾಗೂ ಹಲಸಿನ ಹಣ್ಣನ್ನು ಸಾಂಪ್ರದಾಯಿಕವಾಗಿ ತುಂಡು ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿಂದಿನ ಕಾಲದಲ್ಲಿ ಸ್ಥಳೀಯವಾಗಿ ದೊರೆಯುವ ಸೊಪ್ಪು, ಹಣ್ಣು ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಜನರು ತಮ್ಮ ಜೀವನವನ್ನು ಸಾಗಿಸುತ್ತಿದ್ದರು. […]
Read More