07-06-2026, 10:00 PM
ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]
Read More
07-06-2026, 10:00 PM
ಕೆಂಜಾರು-ಕರಂಬಾರು: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ಕೊಟ್ಟಿಯೂರು ಪುಣ್ಯಕ್ಷೇತ್ರಗಳ ಪವಿತ್ರ ಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಜೂನ್ 6, 2026ರಂದು ರಾತ್ರಿ 8.30 ಗಂಟೆಗೆ ಶ್ರೀ ದೇವಿ ಭಜನಾ ಮಂದಿರ, ಕೆಂಜಾರು-ಕರಂಬಾರುವಿನಿಂದ ಯಾತ್ರೆಯು ಅತ್ಯಂತ ಉತ್ಸಾಹದಿಂದ ಆರಂಭವಾಯಿತು. ಈ ಧಾರ್ಮಿಕ ಪ್ರವಾಸದಲ್ಲಿ ಒಂದು ಬಸ್ಸಿನಲ್ಲಿ 50 ಮಂದಿ ಹಾಗೂ ಒಂದು ಟಿಟಿ ವಾಹನದಲ್ಲಿ 14 ಮಂದಿ ಸೇರಿದಂತೆ ಒಟ್ಟು 64 ಮಂದಿ ಯಾತ್ರಿಕರು ಭಾಗವಹಿಸಿದ್ದರು.ಮರುದಿನ ಮುಂಜಾನೆ ಸುಮಾರು 4.00 ಗಂಟೆಗೆ ಯಾತ್ರಿಕರು ಪವಿತ್ರ ಕೊಟ್ಟಿಯೂರು ಕ್ಷೇತ್ರವನ್ನು […]
Read More
07-06-2026, 7:00 PM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಜೂನ್ 7ರಂದು 51 ಸದಸ್ಯರೊಂದಿಗೆ ಕುಂದಾಪುರದ UVA ಮೆರಿಡಿಯನ್ ವಾಟರ್ ಪಾರ್ಕ್ಗೆ ಒಂದು ದಿನದ ಸೌಹಾರ್ದಯುತ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಪ್ರವಾಸವು ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸದಸ್ಯರೆಲ್ಲರೂ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನದಲ್ಲಿ ಭಾಗವಹಿಸಿದರು. ಪ್ರವಾಸದ ಮಧ್ಯೆ ಸದಸ್ಯರಿಗಾಗಿ ಉಪಹಾರದ ವ್ಯವಸ್ಥೆ […]
Read More
07-06-2026, 11:00 AM
ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಜೂನ್ 7ರಂದು ಬಿ.ಸಿ.ರೋಡ್ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು. 2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್, ಜತೆ ಕಾರ್ಯದರ್ಶಿಯಾಗಿ ಧನುಷ್ ಮಧ್ವ […]
Read More
07-06-2026, 11:00 AM
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆಯಾದ “ಯುವ ಸೇವಾ ಸ್ಪರ್ಶ” ಕಾರ್ಯಕ್ರಮದಡಿ ಮೊದಲನೇ ಸೇವಾ ಹಸ್ತವನ್ನು ಅಗತ್ಯವಿರುವ ಕುಟುಂಬವೊಂದಕ್ಕೆ ವಿತರಿಸಲಾಯಿತು. ಮಾಣಿ ಗ್ರಾಮದ ದಿವಂಗತ ವೀರಪ್ಪ ಪೂಜಾರಿ ಅವರ ಕುಟುಂಬವು ಆರ್ಥಿಕ ಹಾಗೂ ಆರೋಗ್ಯ ಸಂಬಂಧಿತ ಸಂಕಷ್ಟಗಳನ್ನು ಎದುರಿಸುತ್ತಿದ್ದು, ನಾಲ್ಕು ಹೆಣ್ಣು ಮಕ್ಕಳ ಪೈಕಿ ಮೂವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕುಟುಂಬದ ಒಬ್ಬ ಸದಸ್ಯರು ಮಾತ್ರ ದುಡಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಈ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಯುವವಾಹಿನಿ (ರಿ.) […]
Read More
05-06-2026, 11:00 AM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 05-06-2026ರಂದು ವಿಶ್ವ ಪರಿಸರ ದಿನಾಚರಣೆ ಹಾಗೂ ಬಳ್ಪ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಯುವವಾಹಿನಿ (ರಿ.) ಕಡಬ ಘಟಕ ಮತ್ತು ಗ್ರಾಮ ಅರಣ್ಯ ಸಮಿತಿ ಬಳ್ಪ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಪಂಜ ವಲಯದ ಉಪ ವಲಯ ಅರಣ್ಯ ಅಧಿಕಾರಿಗಳಾದ ಮಹಬೂಬ್ ಇಲಾ ಅವರು ಉದ್ಘಾಟಿಸಿ, […]
Read More
05-06-2026, 10:00 AM
ಮಾಣಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು – ಬದುಕಿಗೆ ನೆರಳು” ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ದಿನಾಂಕ 05.06.2026ರಂದುನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದ ವಠಾರದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ನಾರಾಯಣಗುರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಸಾಲಿಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ಕೊಡಾಜೆ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಕಾರ್ಯದರ್ಶಿ […]
Read More
01-06-2026, 8:00 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಅಂಗವಾಗಿ, ದಿನಾಂಕ 01-06-2026ರಂದು ಸೋಮವಾರ ಸಂಜೆ 5.30 ಗಂಟೆಗೆ ಭಜನಾ ಸೇವಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಈ ಭಜನಾ ಸೇವೆಯು ಶ್ರೀರಾಮ ಕ್ಷತ್ರಿಯ ಭಜನಾ ತಂಡ, ಸುರತ್ಕಲ್ ಇವರ ಸಹಯೋಗದೊಂದಿಗೆ ನೆರವೇರಿತು. ಸಂಜೆ 7.00 ಗಂಟೆಗೆ ಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಕ್ಷೇತ್ರದ ವತಿಯಿಂದ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]
Read More