22-07-2017, 5:13 AM
ಯುವವಾಹಿನಿ (ರಿ) ಪಣಂಬೂರು ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 22.07.2017 ರಂದು ಪಣಂಬೂರು NMPT ಕ್ರೀಯೇಶನ್ ಕ್ಲಬ್ ನಲ್ಲಿ ಜರುಗಿತು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಕುಳಾಯಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮಹಾನಗರ ಪಾಲಿಕಾ ಕಾರ್ಪೊರೇಟರ್ ಶ್ರೀಮತಿ ಪ್ರತಿಭಾ ಕುಳಾಯಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಯುವವಾಹಿನಿ ಪಣಂಬೂರು ಘಟಕದ 2017-18 […]
Read More
16-07-2017, 8:13 AM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 16.07.2017 ರಂದು ಸೋಪ್, ಸೋಪ್ ವಾಟರ್, ಬಾತ್ ಸೋಪ್ ತಯಾರಿಸುವ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಸುನೀತಾ ರವರು ಪ್ರಾತ್ಯಕ್ಷಿಕೆಯ ಮೂಲಕ ಈ ಕಾರ್ಯಾಗಾರ ನಡೆಸಿಕೊಟ್ಟರು. ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಹಾಗೂ ಸದಸ್ಯರು ಕಾರ್ಯಾಗಾರದ ಪ್ರಯೋಜನ ಪಡೆದರು.
Read More
16-07-2017, 4:19 AM
ಸಮಾಜದ ಕಡು ಬಡವರ ಸಂಕಷ್ಟಗಳಿಗೆ ಯುವ ಜನಾಂಗ ಸ್ಪಂದಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ , ಈ ನಿಟ್ಟಿನಲ್ಲಿ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ಮಹಾನಗರ ಪಾಲಿಕಾ ಹಣಕಾಸು ಮತ್ತು ತೆರಿಗೆ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 16.07.2017 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವ ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರುಸಮಾರಂಭದ ಅಧ್ಯಕ್ಷತೆ […]
Read More
10-07-2017, 1:50 PM
ಇತ್ತೀಚೆಗೆ ಬಡಗಬೆಳ್ಳೂರು ನಿವಾಸಿ ಯೋಗೀಶ್ ಪೂಜಾರಿ ವಿದ್ಯುತ್ ತಂತಿ ತಗುಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಈ ಸಾವಿನಿಂದಾಗಿ ಅವರ ಹೆಂಡತಿ ಹಾಗೂ ಸಣ್ಣ ನಾಲ್ಕು ಮಕ್ಕಳ ಬಡ ಸಂಸಾರ ಅನಾಥವಾಗಿದೆ.ಮೃತ ಯೋಗೀಶ್ ಪೂಜಾರಿಯವರ ಮನೆಗೆ ದಿನಾಂಕ 10.07/2017ರಂದು ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಬೇಟಿ ನೀಡಿ ರೂ 10,000/- ಸಾಂತ್ವನ ನಿಧಿ ನೀಡಲಾಯಿತು. ಹಾಗೂ ಮೂರು ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ನಿರ್ಧರಿಸಲಾಯಿತು ಈ ಸಂಧರ್ಭದಲ್ಲಿ ಯುವವಾಹಿನಿ ಅಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಅಧ್ಯಕ್ಷರಾದ […]
Read More
09-07-2017, 12:46 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 09.07.2017 ನೇ ಆದಿತ್ಯವಾರ ನಡ್ಪಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಗುರು ಸಂದೇಶವನ್ನು ಯುವವಾಹಿನಿ ಅಕ್ಷರಶಃ ಪಾಲಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ […]
Read More
09-07-2017, 5:08 AM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]
Read More
07-07-2017, 5:18 AM
ಯುವವಾಹಿನಿ (ರಿ) ಮೂಲ್ಕಿ ಘಟಕ ಆಶ್ರಯದಲ್ಲಿ ಮೂಲ್ಕಿ ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಹಾಗೂ ಈವಗ್ರೀನ್ ಇದರ ಜಂಟಿ ಸಹಯೋಗದಲ್ಲಿ ದಿನಾಂಕ 07-07-2017ರಂದು ಮೂಲ್ಕಿ ವಿಜಯ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.. ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಯಾದ ಡಾll ಹೆಚ್. ಶಾಂತರಾಮ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾll […]
Read More
02-07-2017, 5:13 AM
IAS, IPS ಮುಂತಾದ ಉನ್ನತ ಹುದ್ದೆಗಳ ಬಗ್ಗೆ ಆಸಕ್ತಿ ತೋರಿಸಿ, ಕೇವಲ ಡಾಕ್ಟರ್ ,ಇಂಜಿನಿಯರಿಂಗ್ ನಂತಹ ಹುದ್ದೆಗಳಿಗೆ ಮಾತ್ರ ಪ್ರಾಮುಖ್ಯತೆ ನೀಡದೆ, ಈ ದೇಶದ ಉನ್ನತ ಅಧಿಕಾರಿಗಳಾಗಿ ಸಮಾಜದ ಋಣ ತೀರಿಸಿ ಎಂದು ಉದ್ಯಮಿ, ಬಿಲ್ಲವ ಸಮಾಜದ ಮುಖಂಡರಾದ ಶ್ರೀ ಬಿ.ಎನ್.ಶಂಕರ ಪೂಜಾರಿ ತಿಳಿಸಿದರು. ಅವರು ದಿನಾಂಕ 02.07.2017 ನೇ ಆದಿತ್ಯವಾರ ಉಡುಪಿಯ ಕುತ್ಪಾಡಿ ,ಬಲಾಯಿಪಾದೆ ನಿತ್ಯಾನಂದ ಆರ್ಕೆಡ್ ಇಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ಜರುಗಿದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. SSLC […]
Read More
25-06-2017, 12:39 PM
ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ […]
Read More
25-06-2017, 12:09 PM
ನಾನು ನನ್ನದು,ನನ್ನಿಂದ ಎನ್ನುವ ಮಾತಿನಿಂದ ಸ್ವಲ್ಪ ಹೊರಗೆ ಬಂದು ನಾವು ನಮ್ಮದು, ನಮ್ಮೆಲ್ಲರ ಎನ್ನುವ ವಿಶಾಲ ಮನೋಭಾವ ಬೆಳೆಸಿಕೊಂಡರೆ ಆತ್ಮವಿಶ್ವಾಸ ಒಂದನ್ನುಳಿದು ಮಿಕ್ಕೆಲ್ಲವನ್ನೂ ಕಳೆದುಕೊಂಡರೂ ಚಿಂತೆ ಇಲ್ಲ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಮುಂದಿಟ್ಟುಕೊಂಡು ಮುನ್ನಡೆದರೆ ನಾವು ಖಂಡಿತಾ ಯಶಸ್ವಿಯಾಗುತ್ತೇವೆ.ಗುರುಗಳ ತತ್ವದಡಿಯಲ್ಲಿ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಯುವವಾಹಿನಿ ಕೂಳೂರು ಘಟಕದಿಂದ ಇನ್ನೂ ಉತ್ತಮ ಕಾರ್ಯಕ್ರಮ ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದು ಯುವವಾಹಿನಿ (ರಿ) ಕೂಳೂರು ಘಟಕದ. 2017-18 ನೇ ಸಾಲಿನ ನೂತನ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ […]
Read More