08-09-2024, 5:07 AM
ಮಂಗಳೂರು : ಯುವವಾಹಿನಿ (ರಿ) ಕಂಕನಾಡಿ ಘಟಕದ ಸಹಯೋಗದಲ್ಲಿ ದಿನಾಂಕ 08-09-2024 ಗರೋಡಿ ಸಮೃದ್ಧಿ ಸಭಾಭವನದಲ್ಲಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿದ ಲೋಕೇಶ್ ಪೂಜಾರಿ, ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಕಂಕನಾಡಿ ಘಟಕವು ಹಮ್ಮಿಕೊಂಡಿರುವ ಸಮಾಜಮುಖಿ ಹತ್ತು ಹಲವು ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು, ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ಎಂದು ನುಡಿದರು. ಯುವವಾಹಿನಿ (ರಿ) ಕಂಕನಾಡಿ ಘಟಕ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ವಹಿಸಿ, […]
Read More
05-09-2024, 1:56 PM
ಕೊಣಾಜೆ : ಪ್ರಸ್ತುತ ಕಾಲದಲ್ಲಿ ತಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಆಗಬೇಕೆಂದು ಬಯಸುವವರೇ ಹೆಚ್ಚು. ಆದರೆ ಶಿಕ್ಷಕರಾಗಬೇಕೆನ್ನುವವರು ಬಹಳ ಕಡಿಮೆ. ಎಲ್ಲಾ ವೃತ್ತಿಯ ಮೂಲ ಬೇರು ಆಗಿರುವ ಶಿಕ್ಷಕ ವೃತ್ತಿಯೇ ಅತ್ಯಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವೃತ್ತಿಯ ಬಗ್ಗೆಯೂ ಹೆಚ್ಚು ಒಲವು ಅಗತ್ಯ ಎಂದು ನಿವೃತ್ತ ಶಿಕ್ಷಕರಾದ ಗಂಗಾಧರ ಪೂಜಾರಿ ಅವರು ಹೇಳಿದರು. ಅವರು ಕೊಣಾಜೆ ಗ್ರಾಮ ಚಾವಡಿಯ ಯುವವಾಹಿನಿ (ರಿ) ಘಟಕದ ವತಿಯಿಂದ ಗುರುವಾರ 05-09-2024 ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ […]
Read More
05-09-2024, 5:23 AM
ಉಪ್ಪಿನಂಗಡಿ : ಯುವವಾಹಿನಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ ಶಿಕ್ಷಕರಿಗೆ ಗೌರವಾರ್ಪಣೆ ಸಲ್ಲಿಸುವ ಗುರು ವಂದನಾ ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷರಾದ ಸೋಮಸುಂದರ್ ರವರ ಅಧ್ಯಕ್ಷತೆಯಲ್ಲಿ, ದಿನಾಂಕ 05-09-2024ರಂದು ಅಪರಾಹ್ನ ನಡೆಸಲಾಯಿತು. ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಪೀಲ್ಯ ಮನೆ ಅಣ್ಣು ಪೂಜಾರಿಯವರನ್ನು ಅವರ ಪೀಲ್ಯ ಮನೆಯಲ್ಲಿ ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಅವಿಭಜಿತ ಪುತ್ತೂರು ತಾಲೂಕಿನ ಆಲಂತಾಯ ಗ್ರಾಮದ ಬಟ್ಲಡ್ಕ ಮನೆಯಲ್ಲಿ ನಿವೃತ್ತ ಶಿಕ್ಷಕ ದಂಪತಿಗಳಾದ ಸಂಜೀವ […]
Read More
04-09-2024, 5:58 AM
ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿ ಇವರನ್ನು ಅಭಿನಂದಿಸಲಾಯಿತು. ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆ ಎಂದು ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಾಸು ಪೂಜಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಕಾರ್ಯದರ್ಶಿ ಚೇತನ್ ಮುಂಡಾಜೆ, ಉಪಾಧ್ಯಕ್ಷ ನಾರಾಯಣ ಪೂಜಾರಿ ಪಲ್ಲಿಕಂಡ, ನಾಗೇಶ್ ಪೂಜಾರಿ ನೈಬೇಲು, ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಮಾಜಿ ಅಧ್ಯಕ್ಷರಾದ ಟಿ.ರಾಮಚಂದ್ರ […]
Read More
31-08-2024, 2:53 PM
ಬಂಟ್ವಾಳ : ಗುರುಗಳ ಸಂದೇಶದ ತತ್ವಾದರ್ಶಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಆದರ್ಶ ಬದುಕಿನಲ್ಲಿ ಹೆಜ್ಜೆಹಾಕಿದಾಗ ಅದಕ್ಕಿಂತ ದೊಡ್ಡದಾದ ಗುರುಪೂಜೆ ಮತ್ತೊಂದಿಲ್ಲ . ಆರಾಧನೆಯ ಜೊತೆಗೆ ಗುರುಗಳ ಆದರ್ಶಗಳನ್ನು ಅಪ್ಪಿಕೊಳ್ಳುವ ಮನಸ್ಸು ನಮ್ಮದಾಗಬೇಕು ಎಂದು ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ ಕೆ ಅಭಿಪ್ರಾಯಪಟ್ಟರು. ಅವರು 170ನೇ ನಾರಾಯಣ ಗುರುಜಯಂತಿ ಆಚರಣೆಯ ಸಲುವಾಗಿ ಬಿ.ಸಿ.ರೋಡ್ ಯುವವಾಹಿನಿ ಕಛೇರಿಯಲ್ಲಿ ದಿನಾಂಕ 31-08-2024 ರಂದು ನಡೆದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದರು. ಮಾಜಿ ಅಧ್ಯಕ್ಷರು ರಾಮಚಂದ್ರ ಸುವರ್ಣ ದೀಪ ಬೆಳಗಿ ಉದ್ಘಾಟಿಸಿದರು. […]
Read More
31-08-2024, 2:40 PM
ಉಪ್ಪಿನಂಗಡಿ: ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ವತಿಯಿಂದ, ಘಟಕದ ಸದಸ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದಿನಾಂಕ 18-08-2024 ರಂದು ರೋಟರಿ ಸಭಾಭವನ ಉಪ್ಪಿನಂಗಡಿಯಲ್ಲಿ ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉಪ್ಪಿನಂಗಡಿ ಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ) ಅಧ್ಯಕ್ಷರು ಹಾಗೂ ಘಟಕದ ಗೌರವ ಸಲಹೆಗಾರರೂ ಆಗಿರುವ ಶ್ರೀ ವರದಾರಾಜ್ ಎಂ. ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಖ್ಯಾತ ದಂತ […]
Read More
30-08-2024, 2:38 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 51ನೇ ಭಜನಾ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಇವರ ಮನೆಯಲ್ಲಿ ದಿನಾಂಕ 30-08-2024 ಶುಕ್ರವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು […]
Read More
28-08-2024, 5:20 AM
ಮೂಡುಬಿದಿರೆ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ನಾರಾಯಣಗುರುಗಳು ಅಸ್ಪ್ರಶ್ಯತೆಯ ವಿರುದ್ಧ ಮೌನ ಕ್ರಾಂತಿಯ ಮೂಲಕ ಸಾಮಾಜಿಕ ಸುಧಾರಣೆಯನ್ನು ತನ್ನ ಜೀವಿತಾವಧಿಯಲ್ಲೇ ಸಾಧಿಸಿ ತೋರಿಸಿದ ಮನುಕುಲದ ಪರಿವರ್ತನಾ ಚಿಂತನೆಯ ವಿಶ್ವಗುರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯ ಪಟ್ಟರು. ಅವರು ದಿನಾಂಕ 28-08-2024ನೇ ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ […]
Read More
27-08-2024, 4:48 AM
ಬಂಟ್ವಾಳ: ಮೇಲು ಕೀಳೆಂದು ಬೀಗುವ, ಬಿಗು ನೀತಿಯ ಖಂಡಿಸಿ ಪಾಮರಪರ ಶಕ್ತಿಯಾಗಿ, ಏಕ ದೇವತಾರಾಧನೆಯ ಬೋಧಿಸಿ, ಸರ್ವರಿಗೂ ಸಮಾನ ಅವಕಾಶದ ಏರು ದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಮೂಲಕ ಪಂಡಿತ – ಪಾಮರರೆಂಬ ಬೇಧವಿಲ್ಲದೆ ಕೃತಕ ಗೋಡೆಯನ್ನೊಡೆದು ಸಕಲರೊಳಗೊಂದಾದ ಅಗೋಚರ ಶಕ್ತಿಯ ಅರಿವು ಮೂಡಿಸಿದ ಮಹಾಶಕ್ತಿ ನಾರಾಯಣ ಗುರುವರ್ಯರು ಸಕಲ ಶೋಷಿತ ಸಮಾಜದ ಆಶಾಕಿರಣ ಎಂದು ಯುವವಾಹಿನಿ (ರಿ) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದರು. ಅವರು ಹರೀಶ್ ಸಾಲ್ಯಾನ್ ಅಜೆಕಲ ಇವರ ಮನೆಯಲ್ಲಿ […]
Read More
26-08-2024, 3:01 PM
ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿ ದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು. ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ […]
Read More