Yuvavahini

ಘಟಕಗಳು

ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಶಕ್ತಿನಗರ, ಜೂನ್ 28: ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ […]

Read More

ಯುವ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಯುವಜನರಲ್ಲಿ ಜಾಗೃತಿ ಮೂಡಿಸಲಿ: ಕಿರಣ್ ಹೆಗ್ಡೆ

ಮಾಣಿ, ಜೂ. 28: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಯುವ ಸದಸ್ಯತ್ವ ಅರಿವು, ನಾಯಕತ್ವ ತರಬೇತಿ ಹಾಗೂ ವಿದ್ಯಾರ್ಥಿ ಅಭಿನಂದನಾ ಕಾರ್ಯಕ್ರಮ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜೇಶ್ ಸುವರ್ಣ, ಬಂಟ್ವಾಳ ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪ್ರೌಢಶಾಲಾ ಮಂಡಳಿಯ ಅಧ್ಯಕ್ಷ ಕಿರಣ್ ಹೆಗ್ಡೆ ಮಾತನಾಡಿ, “ಯುವಜನರಲ್ಲಿ ಸಂಘಟನಾ ಮನೋಭಾವ, […]

Read More

ನೂತನ ಕಚೇರಿ ಉದ್ಘಾಟನೆ

ಬೆಂಗಳೂರು, ಜೂ. 28: ಯುವವಾಹಿನಿ (ರಿ.) ಬೆಂಗಳೂರು ಘಟಕದ ನೂತನ ಕಚೇರಿಯನ್ನು ಚಿಕ್ಕಬಿದಿರೆಕಲ್ಲು ಸಮೀಪದ ಭವಾನಿನಗರದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಭಾನುವಾರ ಉದ್ಘಾಟಿಸಲಾಯಿತು. ಗುರುಗಳಾದ ಜಯಂತ್ ಸಾಲಿಯಾನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್ ಹಾಗೂ ಸುಧೀರ್ ಎಸ್.ಪಿ. ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶ್ರೀಧರ್ ಡಿ., ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೋಟ್ಯಾನ್, ನಿಕಟಪೂರ್ವ ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ, ನೂತನ ಅಧ್ಯಕ್ಷ […]

Read More

“ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ”: ರಾಜೇಶ್ ಸುವರ್ಣ

ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಾಮಾಜಿಕ ಜಾಲತಾಣ ಹಾಗೂ ವೆಬ್‌ಸೈಟ್ ಸಂಪಾದಕರಾದ ರಾಜೇಶ್ ಸುವರ್ಣ ಅವರು ಯುವಕರಿಗೆ ಸದಸ್ಯತ್ವದ ಮಹತ್ವ, ನಾಯಕತ್ವದ ಗುಣಗಳು […]

Read More

ಮರದ ನೆರಳು ಬದುಕಿಗೆ ನೆರಳು ಸಂಪನ್ನ

ಮಾಣಿ: “ಮರದ ನೆರಳು – ಬದುಕಿಗೆ ನೆರಳು” ಎಂಬ ಮಹೋನ್ನತ ಧ್ಯೇಯದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿದ್ದ “ಯುವ ವೃಕ್ಷೋತ್ಸವ” ಅಭಿಯಾನವು ಯಶಸ್ವಿಯಾಗಿ ಪೂರ್ಣಗೊಂಡಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಘಟಕವು 20 ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿತು. ಅಭಿಯಾನದ ಸಮಾರೋಪ ಕಾರ್ಯಕ್ರಮವು ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಈ ಅಭಿಯಾನದ ಮೂಲಕ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು […]

Read More

ಅಂಗನವಾಡಿ ಕೇಂದ್ರಕ್ಕೆ ಡಿಜಿಟಲ್ ಸ್ಕೇಲ್ ಕೊಡುಗೆ

ಪುತ್ತೂರು, ಜೂನ್ 27: ಸಮಾಜಸೇವೆಯ ಅಂಗವಾಗಿ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಕೊಯಿಲತಡ್ಕ ಅಂಗನವಾಡಿ ಕೇಂದ್ರಕ್ಕೆ ಅಗತ್ಯವಿದ್ದ ಡಿಜಿಟಲ್ ಸ್ಕೇಲ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಅಂಗನವಾಡಿ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘಟಕದ ವತಿಯಿಂದ ಡಿಜಿಟಲ್ ಸ್ಕೇಲ್ ಅನ್ನು ಹಸ್ತಾಂತರಿಸಲಾಯಿತು. ಮಕ್ಕಳ ಆರೋಗ್ಯದ ಮೇಲ್ವಿಚಾರಣೆ ಹಾಗೂ ಬೆಳವಣಿಗೆಯನ್ನು ನಿಖರವಾಗಿ ದಾಖಲಿಸಲು ಈ ಉಪಕರಣವು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಪುತ್ತೂರು ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಸಂಘಟನಾ ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ […]

Read More

ಬಡ ಕುಟುಂಬದ ಮನೆಗೆ ಉಚಿತ ವಿದ್ಯುತ್ ಸಂಪರ್ಕ

ವೇಣೂರು ಜೂನ್ 26: ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ “ಬೆಳಕು” ಯೋಜನೆಯಡಿ ಸಮಾಜಮುಖಿ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡು, ಬೆಳ್ತಂಗಡಿ ತಾಲೂಕಿನ ಪೇರಿ–ಹೊಸಂಗಡಿ ಗ್ರಾಮದ ಶ್ರೀಮತಿ ಬೇಬಿ ಅವರ ಮನೆಗೆ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು. ಈ ಕಾರ್ಯಕ್ರಮವು ದಿನಾಂಕ 26-06-2026ರಂದು ಪೇರಿ–ಹೊಸಂಗಡಿ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್ ನಾರಾವಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನ ಹಾಗೂ “ಆಸರೆ” ಯೋಜನೆ ಕುರಿತು ಚರ್ಚಿಸಿ, […]

Read More

ಶಾಲೆಗಳ ಅಭಿವೃದ್ಧಿಗೆ ನೀಡುವ ಸಹಕಾರ ಮಕ್ಕಳ ಉಜ್ವಲ ಭವಿಷ್ಯಕ್ಕೆ ನೆರವು: ಅಶೋಕ್ ಕುಮಾರ್ ಪಡ್ಪು

ಮಾಣಿ, ಜೂನ್ 25: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮಜಿ ವೀರಕಂಭ ಶಾಲೆಯ ಮುಖಮಂಟಪದ ಮೇಲ್ಚಾವಣಿಗೆ ಅಳವಡಿಸಲಾದ ಶೀಟ್‌ಗಳ ಸಮರ್ಪಣೆ ಹಾಗೂ ಹಸ್ತಾಂತರ ಕಾರ್ಯಕ್ರಮ ಮತ್ತು “ಯುವ ವೃಕ್ಷೋತ್ಸವ–2026” ಕಾರ್ಯಕ್ರಮವು ಗುರುವಾರ ಶಾಲಾ ಆವರಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಅಶೋಕ್ ಪಡ್ಪು ಮಾತನಾಡಿ, “ಶಾಲೆಗಳ ಅಭಿವೃದ್ಧಿಗೆ ನೀಡುವ […]

Read More

ಗುರು ಸಂದೇಶ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ವಿ ಬದುಕು ಸಾಧ್ಯ: ತೇಜೇಶ್ ಬಂಗೇರ

ಉಡುಪಿ, ಜೂನ್ 25: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಗುರುವಾರ ಸಂಜೆ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಸಂದೇಶ್ ಕಟಪಾಡಿ ಅವರ ಆತಿಥ್ಯದಲ್ಲಿ ಕಟಪಾಡಿಯಲ್ಲಿರುವ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಜನಾ ಸಂಕೀರ್ತನೆ ನಡೆಸಿದರು. ಬಳಿಕ ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಸುವರ್ಣ ಅವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ, ಎಲ್ಲರಿಗೂ ಮಹಾಪ್ರಸಾದ ವಿತರಿಸಿದರು. ಗುರು ಸಂದೇಶ ನೀಡಿದ ಖ್ಯಾತ ನಿರೂಪಕರು ಹಾಗೂ ಘಟಕದ […]

Read More

“ಮನೆಗೊಂದು ಮರ, ಊರಿಗೊಂದು ವನ” ಅಭಿಯಾನ

ಉಡುಪಿ, ಜೂನ್ 25: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ “ಮನೆಗೊಂದು ಮರ – ಊರಿಗೊಂದು ವನ” ಅಭಿಯಾನಕ್ಕೆ ಗುರುವಾರ ಸಂಜೆ ಕಟಪಾಡಿಯಲ್ಲಿರುವ ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಸಂದೇಶ್ ಕಟಪಾಡಿ ಅವರ ನಿವಾಸದ ಪರಿಸರದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ಹಾಗೂ ಯುವವಾಹಿನಿ (ರಿ.) ಉಡುಪಿ ಘಟಕದ ಸಮಾಜ ಸೇವಾ ನಿರ್ದೇಶಕ ಸುಜಿತ್ ಮಟ್ಟು ಅವರು ಗಿಡಗಳನ್ನು ವಿತರಿಸುವ ಮೂಲಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!