06-08-2017, 12:01 PM
ಬ್ರಹ್ಮಶ್ರೀ ನಾರಾಯಣ ಗುರುಗಳು 1909ರಲ್ಲಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಅಸ್ಖಲಿತ ವಾಣಿಯಿಂದ ಹರಿದು ಬಂದ ಅತುಲನೀಯವಾದ ಜ್ಞಾನಾಮೃತದಿಂದ ಪ್ರೇರಿತರಾದ ನಮ್ಮ ಸಮಾಜ ಬಾಂಧವರು 1910ರಲ್ಲಿ ಶ್ರೀ ವೆಂಕಟೇಶ ಭಜನಾ ಸಂಘವನ್ನು ಸ್ಥಾಪನೆ ಮಾಡಿದರು. ಬಳಿಕ ಶಿವಭಕ್ತಿ ಯೋಗ ಸಂಘವೆಂಬ ಸಮಾನ ಮನಸ್ಕ ಇನ್ನೊಂದು ಸಂಘವನ್ನು ಸೇರ್ಪಡೆಗೊಳಿಸಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ ಎಂಬ ನೂತನ ಸಂಘಟನೆ ಸ್ಥಾಪನೆಯಾಯಿತು. ಈ ಸಂಸ್ಥೆ 1926ರಲ್ಲಿ ಸರಕಾರದ ಆಗಿನ ರಿಜಿಸ್ಟ್ರೇಶನ್ ಆ್ಯಕ್ಟ್ನಂತೆ ಸಂಖ್ಯೆ 2/1925-26 ರಂತೆ ನೋಂದಣಿ […]
Read More
05-08-2017, 2:03 PM
ಹೆಣ್ಣು ಎಂದಿಗೂ ಅಶಕ್ತಳಲ್ಲ ಅವಳ ರಕ್ಷಣೆಯನ್ನು ಮಾಡುವ ಸಾಮರ್ಥ್ಯ ಆಕೆಗೆ ಇದೆ.ಆದರೆ ಈ ಬಗ್ಗೆ ಹೆಣ್ಣಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು. ಸ್ರೀ ದುರ್ಗಾ ಶಕ್ತಿಯ ಪ್ರತಿರೂಪ ಪ್ರತಿ ಮಹಿಳೆಯರಲ್ಲಿಯೂ ದುರ್ಗೆಯ ಶಕ್ತಿ ಅಡಕವಾಗಿದೆ,ಅದನ್ನು ಜಾಗೃಗೊಳಿಸುವ ಕಾರ್ಯ ನಡೆಯಬೇಕಾಗಿದೆ ಎಂದು ರಣರಾಗಿಣಿ ಮಹಿಳಾ ಶಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕಾರರಾದ ಶ್ರೀಮತಿ ಲಕ್ಷ್ಮೀ ಪೈ ತಿಳಿಸಿದರು. ಅವರು ದಿನಾಂಕ 05.08.2017 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ […]
Read More
02-08-2017, 2:32 PM
ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 02.08.2017 ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಶಿವಾನುಗ್ರಹ ಸಭಾಂಗಣದಲ್ಲಿ ಜರಗಿತು.ಕಟಪಾಡಿ ವಿಶ್ವನಾಥ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.ಯುವವಾಹಿನಿ (ರಿ) ಕಟಪಾಡಿ ಘಟಕದ ಅಧ್ಯಕ್ಷರಾದ ಸುಕುಮಾರ್ ಆರ್ ಕೋಟ್ಯಾನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು ಯುವವಾಹಿನಿ (ರಿ) ಕಟಪಾಡಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಮಾಹೇಶ್ ಎನ್ ಅಂಚನ್ ಕಾರ್ಯದರ್ಶಿಯಾಗಿ ನಿತಿನ್ ಅಂಬಾಡಿ […]
Read More
02-08-2017, 1:34 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಕು| ಕಾವ್ಯಾಳ ಸಂಶಯಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಅಗ್ರಹ. ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ. ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ […]
Read More
31-07-2017, 9:23 AM
ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ.ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳಲಾಗುವುದು ಅನಿವಾರ್ಯವಾಗುತ್ತದೆ ಎಂಬ ಮನವಿ ಪತ್ರವನ್ನು ಬಂಟ್ವಾಳ ತಾಲೂಕಿನ ತಹಶೀಲ್ದಾರರ […]
Read More
30-07-2017, 11:23 AM
ನಾಳಿನ ಸದೃಢ ಸಮಾಜಕ್ಕೆ ಇಂದು ಸನ್ನದ್ಧರಾದಲ್ಲಿ ಮಾತ್ರ ಯುವ ಸಮುದಾಯವನ್ನು ಸಂಸ್ಕøತಿ ಸಂಸ್ಕಾರಗಳ ಮೂಲಕ ಅದರ ಬಗ್ಗೆ ತಿಳುವಳಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು. ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಆಟಿ ಆನಿ-ಇನಿ-ಎಲ್ಲೆ ಕಾರ್ಯಕ್ರಮವನ್ನು ಬತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅಧ್ಯಕ್ಷತೆಯನ್ನು […]
Read More
30-07-2017, 11:08 AM
ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಗ್ರಾಮವಾರು ಯುವವಾಹಿನಿ ಸಂಘವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ನಿಯೋಜಿತ ಅಧ್ಯಕ್ಷ ಯಶವಂತ ಪೂಜಾರಿರವರು ಹೇಳಿದರು. ಅವರು ದಿನಾಂಕ: 30.07.2017 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2017-18ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]
Read More
30-07-2017, 7:18 AM
ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 30.07.2017 ರಂದು ಸುರತ್ಕಲ್ ಮಹಿಳಾ ಕೇಂದ್ರದ ಸಭಾಂಗಣದಲ್ಲಿ ಉಚಿತ ಹೃದಯ ರೋಗ ,ಮಧುಮೇಹ ತಪಾಸಣೆ, ಹಾಗೂ ಮಾಹಿತಿ ಶಿಬಿರ ಜರಗಿತು. ಒಮೇಗಾ ಆಸ್ಪತ್ರೆ ಮಂಗಳೂರು, ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಮಂಗಳೂರು, ಅಪದ್ಬಾಂದವ ಸಮಾಜ ಸೇವಾ ಸಂಘ ಸುರತ್ಕಲ್, ಮಹಿಳಾ ಕೇಂದ್ರ ಸುರತ್ಕಲ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಶಿಬಿರ ಯಶಸ್ವಿಯಾಗಿ ಜರುಗಿತು. ಈ ಶಿಬಿರದಲ್ಲಿ ಇಸಿಜಿ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಹೃದಯದ ಸ್ಕ್ಯಾನಿಂಗ್, ಹೃದಯ ತಜ್ಞರಿಂದ ಪರೀಕ್ಷೆ ಹಾಗೂ ಸಲಹೆ, ಡಯಾಬಿಟಿಸ್ […]
Read More
23-07-2017, 12:29 PM
ತುಳುನಾಡಿನ ಜನರ ಎಲ್ಲ ಆಚರಣೆ ಮತ್ತು ಆಹಾರ ಪದ್ಧತಿಗಳು ಕೇವಲ ಒಂದು ಸಮುದಾಯಕ್ಕೆ ಮೀಸಲಾಗಿರುವ ವಿಷಯವಲ್ಲ. ಅದು ಸರ್ವಕಾಲಿಕ ಸತ್ಯವನ್ನು ಒಳಗೊಂಡ ಒಂದು ಪವಿತ್ರ ಸಂಸ್ಕøತಿ ಎಂದು ಮಂಗಳೂರು ಆಕಾಶವಾಣಿಯ ಹಿರಿಯ ಕಾರ್ಯಕ್ರಮ ನಿರ್ವಾಹಕರಾದ ಡಾ| ಸದಾನಂದ ಪೆರ್ಲ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಬಿಲ್ಲವ ಸಮಾಜ ಸೇವಾಸಂಘದಲ್ಲಿ ಜರಗಿದ 15ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆಟಿ ಕೆಟ್ಟ ದಿನಗಳ ಒಂದು ಮಾಸ ಎಂದು ಪ್ರತಿಬಿಂಬಿಸಲಾಗುತ್ತಿದೆ. ಆಟಿ ತಿಂಗಳು ಅತ್ಯಂತ ಶ್ರೇಷ್ಠ ತಿಂಗಳು […]
Read More
23-07-2017, 9:09 AM
ಮಹಾ ಮಾನತಾವಾದದ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಮಾನವ ಜನಾಂಗಕ್ಕೆ ಹೊಸ ದಾರಿ ತೋರಿದವರು. ಸಮಾಜದ ಒಳಿತಿಗಾಗಿ ದುಡಿದವರು. ಅವರ ಸಂದೇಶದ ಅನುಷ್ಟಾನ ಮಾಡುತ್ತಿರುವ ಯುವವಾಹಿನಿಯಂತಹ ಯುವಶಕ್ತಿ ಸಮಾಜದ ಆದರ್ಶ ಸಂಘಟನೆಯಾಗಿದೆ ಎಂದು ಪುರೋಹಿತರಾದ ಕೇಶವ ಶಾಂತಿ ನಾಟಿ ತಿಳಿಸಿದರು. ಅವರು ದಿನಾಂಕ 23.7.2017 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲದ ಅಕ್ಕಮ್ಮ ಎಂಬ ತೀರಾ ಬಡ ಕುಟುಂಬಕ್ಕೆ 650 ಚ.ಅ.ಗಳ ಸುಮಾರು ರೂ. […]
Read More