14-05-2026, 9:00 PM
ಕೋಟೆಕಾರ್: ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ದಿನಾಂಕ 14-05-2026 ನೇ ಗುರುವಾರ ಸಾಯಂಕಾಲ 7 ಗಂಟೆಗೆ, ನೆತ್ತಿಲ ಕೋಟೆಕಾರಿನಲ್ಲಿರುವ ಘಟಕದ ಕಾರ್ಯದರ್ಶಿ ಸೌಮ್ಯ ಯೋಗೀಶ್ ರವರ ಗೃಹದಲ್ಲಿ ಗುರು ಸ್ಮರಣೆ-ಗುರು ಭಜನೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಯೋಗೀಶ್ ಕೋಟೆಕಾರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಭಕ್ತಿಪೂರ್ವಕ ಚಾಲನೆ ನೀಡಿದರು. ಘಟಕದ ಸದಸ್ಯರಿಂದ ಸುಮಧುರ ಗುರು ಭಜನಾ ಸಂಕೀರ್ತನೆ ನೆರವೇರಿತು.ಭಜನೆಯ ಬಳಿಕ ಗುರುಗಳಿಗೆ ಮಹಾಪೂಜೆ ನಡೆದು, ಕಾಫಿ ತೀರ್ಥ ಪ್ರಸಾದ ವಿತರಿಸಲಾಯಿತು. ಘಟಕದ ಮಾಜಿ […]
Read More
14-05-2026, 8:00 PM
ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ‘ಗುರು ಸತ್ಸಂಗ’ ಕಾರ್ಯಕ್ರಮವು ಬಲಯಿಪಾದೆಯ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಪ್ರೀತ್ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಗುರು ಸಂದೇಶ:ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಅವರು ಜಂಟಿಯಾಗಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಭಕ್ತಿಪೂರ್ವಕ ‘ಗುರು ಸತ್ಸಂಗ […]
Read More
12-05-2026, 9:00 PM
ವಿಟ್ಲ : ದಿನಾಂಕ 12/05/2026 ಮಂಗಳವಾರದಂದು ಯುವವಾಹಿನಿ ಘಟಕದ ವತಿಯಿಂದ ಹೊನ್ನಾವರದಲ್ಲಿರುವ ಜಾಲಿ ಆಂಡ್ ಜಾಲಿ ವಾಟರ್ ಪಾರ್ಕ್ಗೆ ಮನರಂಜನಾ ಪ್ರವಾಸವನ್ನು ಆಯೋಜಿಸಲಾಯಿತು. ಈ ಪ್ರವಾಸದಲ್ಲಿ ಘಟಕದ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಸೇರಿದಂತೆ ಒಟ್ಟು 41 ಮಂದಿ ಭಾಗವಹಿಸಿದ್ದರು. ಬೆಳಗ್ಗಿನಿಂದಲೇ ಉತ್ಸಾಹಭರಿತವಾಗಿ ಆರಂಭವಾದ ಈ ಪ್ರವಾಸದಲ್ಲಿ ಸದಸ್ಯರು ವಿವಿಧ ಜಲಕ್ರೀಡೆಗಳು ಹಾಗೂ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಂಡರು. ಪ್ರವಾಸದ ಅವಧಿಯು ಸ್ನೇಹ, ಸಹಕಾರ ಮತ್ತು ಸಂಘಟನಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಂತಾಗಿತ್ತು. ಎಲ್ಲಾ ಸದಸ್ಯರು ಸಂತೋಷ ಹಾಗೂ […]
Read More
12-05-2026, 1:00 PM
ಮೂಡಬಿದಿರೆ : ಯುವವಾಹಿನಿ (ರಿ.) ಮೂಡಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (BVT) ಮಣಿಪಾಲ ಹಾಗೂ ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ, ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಸಹಕಾರದೊಂದಿಗೆ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾದ 15 ದಿನಗಳ ‘ಉಚಿತ ಫ್ಯಾಷನ್ ಡಿಸೈನ್ ತರಬೇತಿ’ ಕಾರ್ಯಕ್ರಮವು ದಿನಾಂಕ 12.05.2026 ರ ಮಂಗಳವಾರದಂದು ಇಲ್ಲಿನ ಸಮಾಜ ಮಂದಿರದಲ್ಲಿ ದೀಪ ಪ್ರಜ್ವಲನೆಗಳೊಂದಿಗೆ ಸಡಗರದಿಂದ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಮೂಡಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು, “ಇಂದಿನ ದಿನಗಳಲ್ಲಿ ಮಹಿಳೆಯರು […]
Read More
11-05-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 11-05-2026 ರಂದು ಸಂಜೆ 5.30 ಗಂಟೆಗೆ ಶ್ರೀ ತ್ರಯಂಬಕ ಭಜನಾ ಮಂಡಳಿ ಸುರತ್ಕಲ್ ಇವರ ಸಹಯೋಗದೊಂದಿಗೆ ನಡೆಯಿತು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
10-05-2026, 7:00 PM
ಕುಪ್ಪೆಪದವು : “ನಾರಾಯಣ ಗುರುಗಳ ತತ್ವದಂತೆ ‘ವಿದ್ಯೆ–ಉದ್ಯೋಗ–ಸಂಪರ್ಕ’ ಎಂಬ ಧ್ಯೇಯೋದ್ದೇಶದೊಂದಿಗೆ ರಾಜ್ಯವ್ಯಾಪಿ ಬೆಳೆಯುತ್ತಿರುವ ಯುವವಾಹಿನಿ ಸಂಸ್ಥೆಯು, ಯುವಶಕ್ತಿಯನ್ನು ಸಮಾಜಸೇವೆಯತ್ತ ಕೊಂಡೊಯ್ಯುತ್ತಿರುವುದು ಹೆಮ್ಮೆಯ ವಿಚಾರ,” ಎಂದು ಶಾಸಕರಾದ ವೈ ಭರತ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕುಪ್ಪೆಪದವು-ಎಡಪದವು ಘಟಕದ ವತಿಯಿಂದ ವಿದ್ಯಾನಿಧಿ ಸಹಾಯಾರ್ಥವಾಗಿ ಕಿಲೆಂಜಾರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಘಟಕವು ಯುವಜನರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಶ್ಲಾಘಿಸಿದರು. ಪಂದ್ಯಕೂಟವನ್ನು ಕಿಲೆಂಜಾರು ಅರಮನೆ […]
Read More
10-05-2026, 2:00 PM
ಸುರತ್ಕಲ್ : ದಿನಾಂಕ 10-05-2026 ರಂದು ಇಡ್ಯಾ ಕ್ಷೇತ್ರದಲ್ಲಿ ನಡೆದ ಶ್ರೀ ವಿಠೋಭ ರುಕುಮಾಯಿ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪುನಃಪ್ರತಿಷ್ಠೆ ಮತ್ತು ಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ರೂ.15,000 ಮೊತ್ತದ ಚೆಕ್ ಅನ್ನು ಕ್ಷೇತ್ರದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು, ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಮತ್ತು ಕ್ಷೇತ್ರದ ಶಾಂತಿಯವರು ಘಟಕದ ಅಧ್ಯಕ್ಷರನ್ನು ಸ್ಮರಣಿಕೆ ಹಾಗೂ ಶಾಲು […]
Read More
09-05-2026, 9:00 PM
ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕ ಹಾಗೂ ಹೆಜಮಾಡಿ ಬಿಲ್ಲವರ ಸಂಘದ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕ ಶನಿಪೂಜೆ ಹಾಗೂ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಭಕ್ತಿಭಾವ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಹಾಗೂ ಕೋಶಾಧಿಕಾರಿಯಾದ ಸತೀಶ್ ಕಿಲ್ಪಾಡಿ ಅವರು ಭಾಗವಹಿಸಿ ಶುಭ ಹಾರೈಸಿದರು. ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ಅವರು ತಮ್ಮ ಸಂದೇಶದಲ್ಲಿ ತಿಳಿಸಿದರು. ಸಾರ್ವಜನಿಕ ಶನಿಪೂಜೆಯಲ್ಲಿ […]
Read More
09-05-2026, 8:00 PM
ಹೆಜಮಾಡಿ : ಯುವವಾಹಿನಿ(ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಹರೀಶ್ ಶಾಂತಿ ಹೆಜಮಾಡಿ ಇವರ ಪೌರೋಹಿತ್ಯದಲ್ಲಿ 28 ನೇ ವರ್ಷದ ಸಾರ್ವಜನಿಕ ಶನಿಪೂಜೆ ಮತ್ತು ಭಾಸ್ಕರ್. ಕೆ. ಪಡುಬಿದ್ರಿ ಇವರ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಹೆಜಮಾಡಿ ನಾರಾಯಣಗುರು ಮಂದಿರದಲ್ಲಿ ದಿನಾಂಕ:09-05-2026 ರಂದು ಆದಿತ್ಯವಾರ ಜರಗಿತು.ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮತ್ತು ಕೋಶಾಧಿಕಾರಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು.
Read More
08-05-2026, 1:00 PM
ವಿಟ್ಲ : ಯುವವಾಹಿನಿ (ರಿ) ವಿಟ್ಲ ಘಟಕದ ವತಿಯಿಂದ ಬಿಲ್ಲವ ಸಂಘ (ರಿ) ಕುಂಡಡ್ಕ ಸಹಕಾರದೊಂದಿಗೆದಿನಾಂಕ 08/05/2026 ರಂದು ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯ ಸಾಧಕರಿಗೆ ಪ್ರತಿಭಾ ಪುರಸ್ಕಾರ ಮತ್ತು ರಾಜ್ಯಕ್ಕೆ ಎಸ್ ಎಸ್ ಎಲ್ ಸಿ ಯಲ್ಲಿ 7ನೇ ರಾಂಕ್ ಬಂದ ವಿದ್ಯಾರ್ಥಿಗೆ ಸನ್ಮಾನಿಸಲಾಯಿತು
Read More