Yuvavahini

ಘಟಕಗಳು

ಸರಕಾರಿ ಶಾಲೆಗೆ ಸಹಾಯ ಹಸ್ತ

ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 20/07/2018ನೇ ಶುಕ್ರವಾರ ನಾಲ್ಯಪದವು ಸರಕಾರಿ ಶಾಲಾ ಬಡ ಮಕ್ಕಳಿಗೆ ಉಚಿತವಾಗಿ ಊಟದ ಸ್ಟೀಲ್ ತಟ್ಟೆಯನ್ನು ವಿತರಿಸಲಾಯಿತು . ಮತ್ತು 10,000/-ರೂಪಾಯಿಗಳ ಧನಸಹಾಯವನ್ನು ಶಾಲೆಯ ಅಭಿವೃದ್ಧಿಗಾಗಿ ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಪರವಾಗಿ ಯುವವಾಹಿನಿ(ರಿ.) ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರನ್ನು ಅಭಿನಂದಿಸಲಾಯಿತು. ಮತ್ತು ಶಾಲೆಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನುಆಚರಿಸಲಾಯಿತು. ಈ […]

Read More

ಸದೃಡ ಸಮಾಜದ ನಿರ್ಮಾಣ ಯುವ ಸಮುದಾಯದ ಧ್ಯೇಯವಾಗಿರಬೇಕು : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಸದೃಡ ಸಮಾಜದ ನಿರ್ಮಾಣ ಯುವ ಸಮುದಾಯದ ಮುಖ್ಯ ಧ್ಯೇಯವಾಗಿರಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಉಡುಪಿ ಘಟಕದ ಕಾರ್ಯ ಶ್ಲಾಘನೀಯ ಎಂದು ವಿದಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 15.07.2018 ರಂದು ಉಡುಪಿ ಬಲಾಯಿಪಾದೆ ಯುವವಾಹಿನಿ ಸಭಾಂಗಣದಲ್ಲಿ ನಡೆದ ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಜರುಗಿದ ವಿದ್ಯಾನಿಧಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದರು. ಉಡುಪಿಯ ಎಡಿಷನಲ್ ಎಸ್ಪಿ ಕುಮಾರ ಚಂದ್ರ ಮಾತನಾಡಿ ಐಎಎಸ್, ಐಪಿಎಸ್ […]

Read More

ಸ್ವಚ್ಚತಾ ಆಂದೋಲನಾ

ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ ಕುಪ್ಪೆಪದವು ಪರಿಸರದ ಸಾರ್ವಜನಿಕ ಸ್ಥಳಗಳಲ್ಲಿ ಅದರ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಕುಪ್ಪೆಪದವು ಘಟಕದ ಅಧ್ಯಕ್ಷ ಅರುಣ್ ಕುಮಾರ್ ನೇತ್ರತ್ವದಲ್ಲಿ ಈ ಕಾರ್ಯ ನಡೆಯಿತು

Read More

ನಮ್ಮ ನಡೆ ಬೇಸಾಯದ ಕಡೆ

ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ ನಮ್ಮ ನಡೆ ಬೇಸಾಯದ ಕಡೆ ಎಂಬ ಪರಿಕಲ್ಪನೆಯ ಅಡಿಯಲ್ಲಿ ದಿನಾಂಕ‌ 14.07.2018 ರಂದು ಘಟಕದ ಸದಸ್ಯರು ಹಲ ಉಳುಮೆ ನಡೆಸಿ ಕೃಷಿ ಬಿತ್ತನೆ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕುಪ್ಪೆಪದವು ಘಟಕದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು

Read More

ಕಣ್ಣಿನ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.

Read More

ಯುವವಾಹಿನಿಯ ವಾರ್ಷಿಕ ಸಮಾವೇಶಕ್ಕೆ ಸಚಿವೆ ಜಯಮಾಲರಿಗೆ ಆಹ್ವಾನ

ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]

Read More

ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು… 6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ […]

Read More

ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ

ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ […]

Read More

ಉಚಿತ ದಂತ ಚಿಕಿತ್ಸಾ ಶಿಬಿರ

ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!