Yuvavahini

ಘಟಕಗಳು

ಸಹಾಯಾರ್ಥ ನಾಟಕ ಪ್ರದರ್ಶನ

ಉಡುಪಿ:- ಯುವವಾಹಿನಿ ಉಡುಪಿ ಘಟಕದಿಂದ ತಲೆಗೊಂದು ಸೂರು ಯೋಜನೆಯ ಬಡ ಕುಟುಂಬದ ಮನೆ ಕಟ್ಟಿ ಕೊಡುವ ಸಹಾಯಾರ್ಥ ದಿನಾಂಕ 17 ಡಿಸೆಂಬರ್ 2022 ಶನಿವಾರದಂದು ಅಜ್ಜರಕಾಡು ಬಯಲು ರಂಗ ಮಂದಿರದಲ್ಲಿ ಅಭಿನಯ ಕಲಾವಿದರು ಉಡುಪಿ ತಂಡದ “ಶಾಂಭವಿ” ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ರಾಜಕುಮಾರ್ ಅಂಬಲಪಾಡಿ ಇವರನ್ನು ಗೌರವಿಸಲಾಯಿತು, ಅತಿಥಿಗಳಾಗಿ ಆಗಮಿಸಿದಂತ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಪೊಲೀಸ್ ಅಧಿಕಾರಿಗಳಾದ ರಾಮಚಂದ್ರ ಬೈಂದೂರು , ಅಭಿನಯ ತಂಡದ ಅಧ್ಯಕ್ಷರಾದ […]

Read More

ಸ್ವಚ್ಚತಾ ಕಾರ್ಯಕ್ರಮ

ಪಣಂಬೂರು ಕುಳಾಯಿ :- ಯುವವಾಹಿನಿ (ರಿ.) ಪಣಂಬೂರು – ಕುಳಾಯಿ ಘಟಕ ಹಾಗು ನಾಗರಿಕ ಸಲಹಾ ಸಮಿತಿ ಸುರತ್ಕಲ್ ಇವರ ಜಂಟಿ ಆಶ್ರಯದಲ್ಲಿ ಎಂ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಕುಳಾಯಿ ಪರಿಸರದಲ್ಲಿ, ಇತ್ತೀಚಿಗೆ ನಮ್ಮನ್ನಗಲಿದ ಘಟಕದ ಗೌರವ ಸದಸ್ಯರಾದ ದಿl ಮಹಾಬಲ ಟಿ. ಸಾಲ್ಯಾನ್ ರವರ ಸ್ಮರಣಾರ್ಥವಾಗಿ ದಿನಾಂಕ 04 ಡಿಸೆಂಬರ್ 2022 ರಂದುಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಘಟಕದ ಸಮಾಜ ಸೇವಾ ನಿರ್ದೇಶಕರಾದ ಸುಧೀರ್ ರವರ ನಾಯಕತ್ವದಲ್ಲಿ, ಆರಂಭವಾದ ಸ್ವಚ್ಛತಾ ಕಾರ್ಯದಲ್ಲಿ ಅಧ್ಯಕ್ಷರಾದ ರಂಜನ್ ಕೆ.ಕೋಟ್ಯಾನ್, […]

Read More

ರಾಜಧಾನಿಯಲ್ಲಿ ಮೇಳೈಸಿದ ಯುವ ವೈಭವ

ಬೆಂಗಳೂರು :- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇದರ ಸಹಯೋಗದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ನೇತೃತ್ವದಲ್ಲಿ “ಯುವ ವೈಭವ-2022” ಎಂಬ ಸಾಂಸ್ಕೃತಿಕ ಹಬ್ಬವು ದಿನಾಂಕ 04 ಡಿಸೆಂಬರ್ 2022ರಂದು ಡಾ| ರಾಜಕುಮಾರ್ ಒಳಾಂಗಣ ಕ್ರೀಡಾಂಗಣ, ಮಹಾಲಕ್ಷ್ಮಿ ಲೇಔಟ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀಧರ ಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕಿಶನ್ […]

Read More

ವಿದ್ಯಾನಿಧಿಯ ಸದ್ಬಳಕೆಯೊಂದಿಗೆ ಸಮಾಜದ ಸತ್ಪ್ರಜೆಗಳಾಗಿ :- ಉದಯ ಅಮೀನ್ ಮಟ್ಟು ಆಶಯ

ಕೂಳೂರು :- ಸಮಾಜದಲ್ಲಿರುವ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಯುವವಾಹಿನಿ (ರಿ.) ಕೂಳೂರು ಘಟಕ ಕಳೆದ 7 ವರುಷಗಳಿಂದ ವಿದ್ಯಾನಿಧಿ ನೀಡುತ್ತಾ ಬಂದಿದೆ . ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉನ್ನತ ಅಂಕ ಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಕೂಳೂರಿನ ಪಂಪ್ ಹೌಸ್ ಬಳಿ ದಿನಾಂಕ 03 ಡಿಸೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ವಿದ್ಯಾನಿಧಿ […]

Read More

ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ :- ಕೆ. ಎಲ್ ಕುಂಡಂತಾಯ

ಉಡುಪಿ :- ತುಳುನಾಡು ಭಾವನಾತ್ಮಕ ಕುಟುಂಬ ಪದ್ಧತಿಯನ್ನು ಹೊಂದಿದ್ದು ಇಲ್ಲಿನ ಆಚಾರ ವಿಚಾರಗಳು, ಸಂಸ್ಕೃತಿಯ ಉಳಿವಿಗೆ ಇದರ ಪಾತ್ರ ಮಹತ್ವದ್ದಾಗಿದೆ. ಜಾನಪದ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕೆ ಇಂದು ನನಗೆ ಸಾರ್ಥಕ್ಯದ ಕ್ಷಣವಾಗಿದೆ, ಅದೇ ರೀತಿ ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ ಎಂದು ಜಾನಪದ ವಿದ್ವಾಂಸರೂ, ಸಂಶೋಧಕರಾದ ಕೆ.ಎಲ್. ಕುಂಡಂತಾಯ ಇವರು ನುಡಿದರು. ಅವರು ಯುವವಾಹಿನಿ ಉಡುಪಿ ಘಟಕದ ವತಿಯಿಂದ ದಿನಾಂಕ 20 ನವೆಂಬರ್ 2022ರ ರವಿವಾರದಂದು ಉಡುಪಿಯ ಚಿಟ್ಪಾಡಿಯ ಲಕ್ಷ್ಮೀ ಸಭಾ […]

Read More

ಗುರುಗಳ ತತ್ವಾದರ್ಶವೇ ಯುವ ಸಮುದಾಯಕ್ಕೆ ಪ್ರೇರಣೆ:- ರಕ್ಷಿತ್ ಶಿವರಾಮ್

ಉಪ್ಪಿನಂಗಡಿ :- ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಕಳೆದ 35 ವರ್ಷಗಳಿಂದ ಸಮಾಜಮುಖಿ ಚಿಂತನೆಗಳೊಂದಿಗೆ ಸಾಗುತ್ತಿರುವ ಯುವವಾಹಿನಿಯ ಯುವಸಮುದಾಯಕ್ಕೆ ಗುರುಗಳ ಪ್ರೇರಣೆಯೇ ದಾರಿದೀಪ ಎಂದು ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ತಿಳಿಸಿದರು. ಅವರು ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಇವರ ಮನೆಯಲ್ಲಿ ದಿನಾಂಕ 19 ನವೆಂಬರ್2022 ರಂದು ಜರಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]

Read More

ಪದಪ್ರದಾನ ಸಮಾರಂಭ

ಕಡಬ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕಡಬ ಘಟಕದ 2022-23ನೇ ಸಾಲಿನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ದಿನಾಂಕ 19 ನವೆಂಬರ್ 2022 ನೇ ಶನಿವಾರದಂದು ಶ್ರೀ ದುರ್ಗಂಬಿಕಾ ಅಮ್ಮನವರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ. ಟಿ ಮಹೇಶ್ಚಂದ್ರ ಸಾಲ್ಯಾನ್ ಇವರು ಈ ವರ್ಷದ ಕೆಲಸ ಕಾರ್ಯಗಳನ್ನು ಗಮನಿಸಿ ಅಭಿನಂದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ […]

Read More

ಚಿನ್ನರೊಂದಿಗೆ ಸುಸಮಯ

ಕಂಕನಾಡಿ :- ದಿನಾಂಕ 14 ನವೆಂಬರ್ 2022ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಘಟಕದ ವತಿಯಿಂದ ನೆಕ್ಕರೆಮಾರ್ ಅಂಗನವಾಡಿಯಲ್ಲಿ ಚಿಣ್ಣರೊಂದಿಗೆ ಸುಸಮಯ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಸ್ಥಳೀಯ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ನಮ್ಮ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ರವರಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಪೃಥ್ವಿರಾಜ್ ವಹಿಸಿದ್ದರು. ಅಂಗನವಾಡಿ ಶಿಕ್ಷಕಿ ಪುಷ್ಪರವರು ಪ್ರಾರ್ಥಿಸಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿಯ ನೂತನ ಶಿಕ್ಷಕಿ ಕುಮಾರಿ ಪ್ರತೀಕ್ಷಾರವರು ಧನ್ಯವಾದ ಸಮರ್ಪಿಸಿದರು. ವೇದಿಕೆಯಲ್ಲಿ ಘಟಕದ […]

Read More

ಅಂಗನವಾಡಿ ಪುಟಾಣಿ ಮಕ್ಕಳ ಜೊತೆ ಮಕ್ಕಳ ದಿನಾಚರಣೆ ಆಚರಣೆ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ಮಂಜೊಟ್ಟಿ ಅಂಗನವಾಡಿ ಕೇಂದ್ರ ಪಂಜಿಮೋಗರು ನಲ್ಲಿ ದಿನಾಂಕ 14 ನವೆಂಬರ್ 2022ರ ಸೋಮವಾರದಂದು ಬೆಳಗ್ಗೆ ಶಾಲಾ ಶಿಕ್ಷಕಿಯಾದ ಪ್ರಮೀಳರವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಯಂತ್ ಸುವರ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜವಹಾರ ಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ನೆಹರೂರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂತರ ಅಂಗನವಾಡಿ […]

Read More

ಯುವವಾಹಿನಿ ಸೇವಾ ಮನೋಭಾವ ಹೊಂದಿರುವ ವಿಭಿನ್ನ ಸಂಸ್ಥೆ : ಡಾ. ಭರತ್ ವೈ ಶೆಟ್ಟಿ

ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!