Yuvavahini

ಘಟಕಗಳು

ಯುವವಾಹಿನಿ(ರಿ) ಮಾಣಿ ಘಟಕದ ಸದಸ್ಯರ ವಾತ್ಸಲ್ಯ ಪಯಣ…ಸ್ನೇಹ ಸಿಂಚನ-2019

ಮಾಣಿ : ದೇಶ ಸುತ್ತು ಕೋಶ ಓದು ಎನ್ನುವ ಮಾತಿನಂತೆ ಅನುಭವ ವಿಸ್ತಾರ ಹಾಗೂ ಯುವವಾಹಿನಿ ಕುಟುಂಬದ ಸದಸ್ಯರೊಳಗಿನ ಸ್ನೇಹ, ವಾತ್ಸಲ್ಯದ ಗಟ್ಟಿತನಕ್ಕಾಗಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡ ಸುಂದರ ಕಾರ್ಯಕ್ರಮವೇ “ಸ್ನೇಹ ಸಿಂಚನ- ಯುವವಾಹಿನಿ ಕುಟುಂಬದ ವಾತ್ಸಲ್ಯ ಪಯಣ” ಸ್ನೇಹ ಸಿಂಚನ ಪಯಣ ಸಾಗಿದ್ದು ಉಡುಪಿ ಜಿಲ್ಲೆಯ ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ದ್ವೀಪಕ್ಕೆ.ದಿನಾಂಕ 03-03-19 ಅದಿತ್ಯವಾರದಂದು ಬೆಳಿಗ್ಗೆ 63ಮಂದಿ ಯುವವಾಹಿನಿ ಸದಸ್ಯರೊಂದಿಗೆ ತಂಡವು ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಇವರ ನೇತೃತ್ವದೊಂದಿಗೆ […]

Read More

ಯುವವಾಹಿನಿ ಸೇವಾ ಸಂಜೀವಿನಿ ಲೋಕಾರ್ಪಣೆ

ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ದಿನಾಂಕ 03-03-2019 ಆದಿತ್ಯವಾರ ಗಾಯತ್ರಿ ಮಿನಿ ಹಾಲ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಅತ್ಯಮೂಲ್ಯವಾದ ಯೋಜನೆ ಯುವವಾಹಿನಿ ಸೇವಾ ಸಂಜೀವಿನಿ ಯ ಲೋಕಾರ್ಪಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ಅವರು ವಹಿಸಿದ್ದರು. ಪ್ರೀತಿ ಎಂಬ ಎಣ್ಣೆಯನ್ನು ಸುರಿದು,ನಂಬಿಕೆ ಎನ್ನುವ ಬತ್ತಿಯನ್ನು ಇಟ್ಟು,ಆತ್ಮವಿಶ್ವಾಸ ಎನ್ನುವ ದೀಪದಡಿಯಲ್ಲಿ ಅಶಕ್ತರ ಪಾಲಿಗೆ ಬೆಳಕಾಗಾಗಬೇಕೆಂಬ ಅಭಿಲಾಷೆಯೊಂದಿಗೆ, ಯುವವಾಹಿನಿ ಸೇವಾ ಸಂಜೀವಿನಿ’ ಯುವವಾಹಿನಿ ಬೆಂಗಳೂರು ಘಟಕದ ಬಹುದಿನಗಳ ಕನಸಿನ ಯೋಜನೆಯನ್ನು ಬೆಂಗಳೂರು […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಯುವವಾಹಿನಿಯ ವಿವಿಧ ಘಟಕಗಳ ಹೊರೆಕಾಣಿಕೆ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಜರಗಿದ ಬೃಹತ್ ಹೊರೆಕಾಣಿಕೆ ಮೆರವಣಿಗೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯು ತನ್ನ ವಿವಿಧ ಘಟಕಗಳನ್ನು ಸಂಘಟಿಸಿ ಒಟ್ಟು 23 ಘಟಕಗಳ ಹೊರೆಕಾಣಿಕೆ ಸೇವೆಯ ಜೊತೆ ಆಕರ್ಷಕ ನಾರಾಯಣ ಗುರುಗಳ ಟ್ಯಾಬ್ಲೋ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿತು. ಮೆರವಣಿಗೆಯು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ಮೂಡಿ ಬರಲು ಯುವವಾಹಿನಿಯ ನೂರಾರು ಕಾರ್ಯಕರ್ತರು ಸಮಾಜ ಭಾಂಧವರ ಜೊತೆ ಸೇರಿಕೊಂಡು ಐತಿಹಾಸಿಕ ಮೆರವಣಿಗೆಯ ಯಶಸ್ವಿ ಗೆ ಕಾರಣಕರ್ತರಾದರು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರಲ್ಲಿ ಶ್ರೀ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಪದ ಪ್ರದಾನ ಸಮಾರಂಭ

ಬೆಳ್ತಂಗಡಿ : ಸಂಘಟನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡುವುದರೊಂದಿಗೆ ಸಮಾಜ ಸೇವೆ ಮಾಡಬೇಕು ಎಂದು ಮಾಜಿ ಶಾಸಕ, ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಗೌರಾವಾಧ್ಯಕ್ಷ ಕೆ.ವಸಂತ ಬಂಗೇರ ಹೇಳಿದರು. ಅವರು ಫೆ.24 ರಂದು ಸುವರ್ಣ ಆರ್ಕೇಡ್‌ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಬೆಳ್ತಂಗಡಿ ಘಟಕದ ನೂತನ ಪದಾದಿಕಾರಿಗಳ ಪದಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಬಿಲ್ಲವ ಸಂಘಟನೆ ತಾಲೂಕಿನಲ್ಲಿ 55 ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದು, ಯುವ ವಾಹಿನಿ ಕಳೆದ 5 ವರ್ಷಗಳಿಂದ ಉತ್ತಮ […]

Read More

ಯುವವಾಹಿನಿ(ರಿ.) ಬಜ್ಪೆ ಘಟಕದ ವತಿಯಿಂದ ಫಲಾನುಭವಿಗಳಿಗೆ ಶ್ರವಣ ಸಾಧನ ವಿತರಣೆ

ಬಜ್ಪೆ: ಯುವವಾಹಿನಿ(ರಿ.) ಬಜ್ಪೆ ಘಟಕದ 5ನೇ ವರ್ಷದ ಸಮಾಜಮುಖಿ ಕಾರ್ಯಕ್ರಮಗಳ ಅಂಗವಾಗಿ, ಸ್ವಾಮಿ ಕೊರಗಜ್ಜ ಸೇವಾ ಸಮಿತಿ,‌ ಅಂಬಿಕಾರೋಡ್ ತೊಕೊಟ್ಟು ಇವರ ಸಹಕಾರದಲ್ಲಿ ದಿನಾಂಕ 23/02/2019ರಂದು ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ, ಬಜ್ಪೆ ಇಲ್ಲಿ ಶ್ರವಣ ಸಮಸ್ಯೆಯಿಂದ ಬಳಲುತ್ತಿರುವ ಅಶಕ್ತರಿಗೆ ಶ್ರವಣ ಸಾಧನ ವಿತರಣೆಯು ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಬಜ್ಪೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ವಿನೋಧರ ಪೂಜಾರಿ, ನೋಟರಿ ಮತ್ತು ವಕೀಲರು ನೆರವೇರಿಸಿ, ತನ್ನ ಉದ್ಘಾಟನಾ ಭಾಷಣದಲ್ಲಿ ಯುವವಾಹಿನಿ ಬಜ್ಪೆ ಘಟಕದ […]

Read More

ನಿಜವಾಗಿಯೂ ಹಸಿದವನಿಗೆ ಅನ್ನ ನೀಡುವ ಕಾರ್ಯ ಶ್ಲಾಘನೀಯ : ರಾಜೀವ ಪೂಜಾರಿ

ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ಶಾಶ್ವತ ವಿದ್ಯಾನಿಧಿ ಯೋಜನೆಗೆ ತೃತೀಯ ಹಂತದ ಚಾಲನಾ ಕಾರ್ಯಕ್ರಮವು ದಿನಾಂಕ 20-02-2019 ನೇ ಬುಧವಾರದಂದು ಬ್ರಹ್ಮ ಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಜರಗಿತು. ಬ್ರಹ್ಮ ಶ್ರೀ ನಾರಾಯಣಗುರುವರ್ಯರಿಗೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಶ್ಮೀರದ ಪುಲ್ವಾಮಾ ದಲ್ಲಿ ಉಗ್ರರ ಅಟ್ಟಹಾಸಕ್ಕೆ ಮಡಿದ ಭಾರತೀಯ ವೀರ ಯೋಧರಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಿದ ನಂತರ ಯುವವಾಹಿನಿ (ರಿ)ಕೊಲ್ಯ ಘಟಕದ ಸಂಘಟನಾ ಕಾರ್ಯದರ್ಶಿ ಶಶಿಕಾಂತ್ ಪರ್ಯತ್ತೂರು ರವರ ಪ್ರಾರ್ಥನೆಯೊಂದಿಗೆ ಸಭಾಕಾರ್ಯಕ್ರಮವು ಪ್ರಾರಂಭವಾಯಿತು. ಮುಖ್ಯ […]

Read More

ವಿಶುಕುಮಾರ್ 4 ಕಾದಂಬರಿಗಳನ್ನು ಮರುಮುದ್ರಣಗೊಳಿಸಿದ ಯುವವಾಹಿನಿ

ಮಂಗಳೂರು : ಹಿರಿಯ ಸಾಹಿತಿ, ನಟ, ನಿರ್ದೇಶಕ ದಿ.ವಿಶುಕುಮಾರ್ ಅವರ 16 ಕಾದಂಬರಿಗಳು ಹಾಗೂ 12 ನಾಟಕಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಜನಮಾನಸದಿಂದ ದೂರವಾಗುತ್ತಿರುವ ಅವುಗಳನ್ನು ಮತ್ತೆ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ ಸಂಸ್ಥೆಯು ಮೊದಲ ಹಂತದಲ್ಲಿ 4 ಕಾದಂಬರಿಗಳನ್ನು ಮರುಮುದ್ರಣ ಗೊಳಿಸಿ ದಿನಾಂಕ17.02.2019 ರಂದು ಮಂಗಳೂರು ಪುರಭವನದಲ್ಲಿ ಬಿಡುಗಡೆಗೊಳಿಸಿದೆ. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದೊಂದಿಗೆ ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ […]

Read More

ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಬಿಡುಗಡೆ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಫೆಬ್ರವರಿ ತಿಂಗಳ ಸಂಚಿಕೆಯನ್ನು ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ್ ಕೆ, ವಕೀಲರಾದ ವಿಜಯಲಕ್ಷ್ಮಿ ವಿಶುಕುಮಾರ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕರಾಂ ಪೂಜಾರಿ, ಸಸಿಹಿತ್ಲು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಕುಮಾರ್ ಬಿ.ಎನ್, […]

Read More

ವಿಶುಕುಮಾರ್ ಒಡನಾಡಿಗಳೊಂದಿಗೆ ಸಂವಾದ-ಆದಿನಗಳು

ಮಂಗಳೂರು : ಸಾಯೋದಕ್ಕಿಂತ ಸತ್ತು ಬದುಕಬೇನ್ನುವ ಮಾತಿದೆ. ಇದಕ್ಕೊಪ್ಪುವಂತೆ ನಮ್ಮನಗಲಿದ ವಿಶ್ವನಾಥ್ ಯಾನೆ ವಿಶುಕುಮಾರರು ಸತ್ತು ಬದುಕಿದವರು. ಅದೆಷ್ಟೋ ಸಾಧನೆಗಳನ್ನು ನೋಡಿದ್ದೇವೆ. ಕೇವಲ ಪ್ರಶಸ್ತಿ ಪತ್ರ, ಸ್ಮರಣಿಕೆ, ಪಾರಿತೋಷಕಗಳಿಂದ ಕೆಲವರನ್ನು ಗುರುತಿಸಬಹುದು. ಆದರೆ ಬದುಕಿದ ದಾರಿ, ಸವೆಸಿದ ಸಮಯ, ತೋರಿದ ತಾಳ್ಮೆ ಇನ್ನೊರ್ವರಿಗೆ ಆದರ್ಶವಾಗುತ್ತೆ ಎಂದಾದರೆ ಆ ಬದುಕು, ಆದರ್ಶ, ದೇವರಿಗೆ ಸಮ ಅನ್ನೋದು ಸತ್ಯ. ಪ್ರತಿಯೊಂದು ಕ್ಷೇತ್ರದಲ್ಲೂ ಸಮರ್ಥವಾಗಿ ತನ್ನನ್ನು ತೊಡಗಿಸಿಕೊಂಡು, ಸರಳತೆ, ತಾಳ್ಮೆ, ಸಹನೆ, ಶಿಸ್ತು, ಸಮಯಕ್ಕೆ ಉದಾಹರಣೆಯಾಗಿ ಸತ್ತು ಬದುಕಿದ ವಿಶುಕುಮಾರ್‌ರವರದ್ದು ಆದರ್ಶನೀಯ […]

Read More

ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದೊಂದಿಗೆ ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವರಾದ ಯು.ಟಿ.ಖಾದರ್ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದರು. ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಮೂಡಿಸಿ : ಖಾದರ್ ಮಾಲ್ ಸಂಸ್ಕೃತಿ, ಆಧುನಿಕ ಆಟಗಳಲ್ಲಿ ತೊಡಗುವ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಮೂಡಿಸಲು ಪೋಷಕರು ಪ್ರೇರಕರಾಗಬೇಕು, ಮಕ್ಕಳನ್ನು ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರದರ್ಶನಗಳಿಗೂ ಕರೆದೊಯ್ಯಬೇಕು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!