Yuvavahini

ಘಟಕಗಳು

ಬಿಲ್ಲವ ಪ್ರೀಮಿಯರ್ ಲೀಗ್–2026: ಮಹಿಳಾ ಕ್ರಿಕೆಟ್ ಮೂಲಕ ಸಂಘಟನೆ, ಏಕತೆ ಮತ್ತು ಸಬಲೀಕರಣಕ್ಕೆ ವೇದಿಕೆ

ಪಡುಬಿದ್ರಿ : ಯುವವಾಹಿನಿ (ರಿ.), ಪಡುಬಿದ್ರಿ ಘಟಕದ ವತಿಯಿಂದ ಆಹ್ವಾನಿತ ತಂಡಗಳ ಮಹಿಳಾ ಕ್ರಿಕೆಟ್ ಪಂದ್ಯಾವಳಿ “ಬಿಲ್ಲವ ಪ್ರೀಮಿಯರ್ ಲೀಗ್ (BPL)–2026” ಅನ್ನು 2026ರ ಜನವರಿ 31 ಮತ್ತು ಫೆಬ್ರವರಿ 1ರಂದು ರಾಜೀವ್ ಗಾಂಧಿ ಕ್ರೀಡಾಂಗಣ, ಹೆಜಮಾಡಿದಲ್ಲಿ ಆಯೋಜಿಸಲಾಗಿದೆ. ಕ್ರೀಡೆಯ ಮೂಲಕ ಸಂಘಟನೆ, ಏಕತೆ ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಈ ಪಂದ್ಯಾಕೂಟದ ಮುಖ್ಯ ಉದ್ದೇಶವಾಗಿದ್ದು, ಈ ಸಂದರ್ಭದಲ್ಲಿ ಪ್ರತಿಭಾವಂತ ಆಟಗಾರ್ತಿಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಗುವುದು. ಪಂದ್ಯಾಕೂಟದ ವಿಜೇತರಿಗೆ ಒಟ್ಟು ₹1,75,000 […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ದಿನಾಂಕ: 05-01-2026 ರಂದು ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಲಹರಿ ತಂಡ ಬಿಜೈ ಮಂಗಳೂರು ಇವರ ಸಹಯೋಗದಿಂದ ನೆರವೇರಿತು. ಯುವವಾಹಿನಿ (ರಿ.) ಮಂಗಳೂರು ಘಟಕದ ಒಂದನೇ ಉಪಾಧ್ಯಕ್ಷರು ಹರೀಶ್ ಕೆ. ಸುವರ್ಣ ಮತ್ತು ಸದಸ್ಯರು ಉಪಸ್ಥಿತಿ ಇದ್ದರು.

Read More

ಸೇವೆ–ಕ್ರೀಡೆ–ಸೌಹಾರ್ದತೆಯ ಸಂಗಮ: ದಶ ಸಂಭ್ರಮಕ್ಕೆ ಯುವವಾಹಿನಿಯಿಂದ ಸಮಾಜಮುಖಿ ಸಂದೇಶ

ಬೆಳ್ತಂಗಡಿ: ನೊಂದ ಕುಟುಂಬಗಳಿಗೆ ಸಾಂತ್ವನ ನೀಡುವ ಜೊತೆಗೆ ಯುವಜನತೆಯಲ್ಲಿ ಸ್ನೇಹ, ಸೌಹಾರ್ದತೆ ಮತ್ತು ಸಂಘಟನಾ ಮನೋಭಾವವನ್ನು ಬೆಳೆಸುವ ಕಾರ್ಯದಲ್ಲಿ ಯುವವಾಹಿನಿಯ ಪಾತ್ರ ಶ್ಲಾಘನೀಯವಾಗಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಶ ಸಂಭ್ರಮದ ಪ್ರಯುಕ್ತ ಆಯೋಜಿಸಲಾದ ಕ್ರೀಡಾಕೂಟ ಹಾಗೂ ಸಾಂತ್ವನ ನಿಧಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಗೇರ ಬ್ರಿಗೇಡ್ ಅಧ್ಯಕ್ಷ ಬಿನುತಾ ಬಂಗೇರ ಮಾತನಾಡಿ, ನೊಂದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡುವ ಜೊತೆಗೆ ಮನಸ್ಸಿಗೆ ಧೈರ್ಯ ತುಂಬುವ ಸಂಘಟನೆ […]

Read More

ಮನೋರಂಜನಾ ಚಟುವಟಿಕೆಗಳಿಂದ ಸಂಘಟನೆ ಸದೃಢ

ಹೆಜಮಾಡಿ: ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದಾಗ ಸಂಘಟನೆಗಳು ಇನ್ನಷ್ಟು ಸದೃಢವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಹೇಳಿದರು. ಅವರು ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಆಯೋಜಿಸಲಾದ ತುಳು ಹಾಸ್ಯಮಯ ನಾಟಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ದಿನಾಂಕ 04-01-2026ರಂದು ಡಾ. ದೇವದಾಸ್ ಕಾಪಿಕಾಡ್ ಅವರ “ಎನ್ನನೇ ಕಥೆ” ತುಳು ಹಾಸ್ಯಮಯ […]

Read More

ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಕೊಲ್ಯ ಘಟಕದ ಸದಸ್ಯರ ಭಾಗವಹಿಕೆ

ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಮಂಗಳೂರು ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿದರು ಕಾರ್ಯಕ್ರಮವು ಭಕ್ತಿಭಾವ ಹಾಗೂ ನೆರವೇರಿತು.

Read More

ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಯುವವಾಹಿನಿ ಶಕ್ತಿ ನಗರ ಘಟಕದಿಂದ ಸ್ವಯಂಸೇವೆ

ಮಂಗಳೂರು: ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವಾರ್ಷಿಕ ಜಾತ್ರಾ ಉತ್ಸವದ ಅಂಗವಾಗಿ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಶಕ್ತಿ ನಗರ ಘಟಕದ ಸದಸ್ಯರಿಂದ ಸ್ವಯಂಸೇವಾ ಕಾರ್ಯ ನಡೆಯಿತು. ಜಾತ್ರೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸ್ವಚ್ಛತೆ, ಶಿಸ್ತು ಹಾಗೂ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಸೇವೆಯೇ ಸಾಧನೆ ಎಂಬ ಧ್ಯೇಯದೊಂದಿಗೆ ಯುವವಾಹಿನಿ ಶಕ್ತಿ ನಗರ ಘಟಕದ ಸದಸ್ಯರು ಸಮಾಜಮುಖಿ ಸೇವೆ ಸಲ್ಲಿಸಿ ಮೆಚ್ಚುಗೆಗೆ ಪಾತ್ರರಾದರು. ಈ ಸ್ವಯಂಸೇವಾ ಕಾರ್ಯವು ಯುವವಾಹಿನಿಯ […]

Read More

ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವರ್ಷಾವಧಿ ಉತ್ಸವದಲ್ಲಿ ಯುವವಾಹಿನಿ ಕೊಲ್ಯ ಘಟಕದ ಸ್ವಯಂಸೇವೆ

ಮಂಗಳೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವರ್ಷಾವಧಿ ಉತ್ಸವದ ಪ್ರಯುಕ್ತ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಸ್ವಯಂಸೇವಾ ಕಾರ್ಯದಲ್ಲಿ ತೊಡಗಿ ಸೇವೆ ಸಲ್ಲಿಸಿದರು. ಉತ್ಸವದ ವೇಳೆ ಭಕ್ತಾದಿಗಳಿಗೆ ಸಹಾಯ, ಶಿಸ್ತು ಹಾಗೂ ಸ್ವಚ್ಛತೆ ಕಾಪಾಡುವ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಸಮಾಜಮುಖಿ ಸೇವೆಯ ಮೂಲಕ ಯುವವಾಹಿನಿ ಕೊಲ್ಯ ಘಟಕವು ಸಂಘಟನೆಯ ಸೇವಾ ಧ್ಯೇಯವನ್ನು ಮತ್ತೊಮ್ಮೆ ಸಾರಿತು.

Read More

ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ಕ್ಷೇತ್ರದರ್ಶನ

ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]

Read More

ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ

ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ಪೂಜ್ಯ ನಾರಾಯಣ ಗುರುಗಳು ರಚಿಸಿದ “ದೈವ ದಶಕಂ” ಕೃತಿಯ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಸದಸ್ಯರು […]

Read More

ಯುವವಾಹಿನಿ ಸದಸ್ಯರ ಸ್ವಯಂ ಸೇವೆ

ಪಣಂಬೂರು ಕುಳಾಯಿ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿಯಲ್ಲಿ ನಡೆದ ವರ್ಷಾವಧಿ ಉತ್ಸವದ ಸಂದರ್ಭದಲ್ಲಿ ದಿನಾಂಕ 04.01.2026 ರಂದು ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಸದಸ್ಯರು ಸ್ವಯಂಸೇವೆಯ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಉತ್ಸವದ ಅವಧಿಯಲ್ಲಿ ಶಿಸ್ತು, ಸಹಕಾರ ಮತ್ತು ಸೇವಾಭಾವನೆಯೊಂದಿಗೆ ಯುವವಾಹಿನಿ ಸದಸ್ಯರು ಕಾರ್ಯ ನಿರ್ವಹಿಸಿದರು

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!