06-01-2019, 2:04 PM
ಮಂಗಳೂರು : ನಿರಂತರವಾಗಿ ಸ್ವಚ್ಚತಾ ಕಾರ್ಯ ನಡೆಸುವ ಯುವವಾಹಿನಿ ಕೂಳೂರು ಘಟಕವು ಈ ಬಾರಿ ಜೀವಜಲ ನೀಡುವ ನದಿಯನ್ನು ಸ್ವಚ್ಚ ಗೊಳಿಸುವ ಮೂಲಕ ಮಾದರಿಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಶಾಸಕರಾದ ಭರತ್ ಶೆಟ್ಟಿ ತಿಳಿಸಿದರು. ಅವರು ದಿನಾಂಕ 06.01.2019 ರಂದು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಜರುಗಿದ ಮಂಗಳೂರಿನ ಫಲ್ಗುಣಿ ನದಿಯ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ,ಕಾರ್ಯದರ್ಶಿ […]
Read More
31-12-2018, 4:48 PM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕ .ಘಟಕದ ಮಾಸಿಕ ಸೇವಾ ಯೋಜನೆ “ಆಸರೆ” ಇದರ 5 ನೇ ಕಂತನ್ನು ಬಜಿರೆ ಗ್ರಾಮದ ಕೆರೆಕೋಡಿ ನಿವಾಸಿ ಹಾಸನದಲ್ಲಿ Bsc ನರ್ಸಿಂಗ್ ಕಲಿಯುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು/ಸುಶ್ಮಿತಾ ಇವರ ಹಾಸ್ಟೆಲ್ ಶುಲ್ಕಕ್ಕಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ನಿತೀಶ್ ಎಚ್, ನೂತನ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ,ಕೇಂದ್ರಸಮಿತಿಯ ನಾಮನಿರ್ದೇಶಿತ ಸದಸ್ಯ ಯೋಗಿಶ್ ಪೂಜಾರಿ ಬಿಕ್ರೋಟ್ಟು,ಕಾರ್ಯದರ್ಶಿ ಸತೀಶ್ ಪಿ ಎನ್, ನಿರ್ದೇಶಕರಾದ ಹರೀಶ್ ಪಿ ಎಸ್, ಸುನೀಲ್ […]
Read More
30-12-2018, 2:48 PM
ಉಪ್ಪಿನಂಗಡಿ : ಕನ್ನಡ ನಾಡು ನುಡಿಗೆ ವಿಶು ಕುಮಾರ್ ಅವರ ಕೊಡುಗೆ ಅನನ್ಯಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ತಿಳಿಸಿದರು. ಅವರು ದಿನಾಂಕ 30.12.2018 ರಂದು ಕುಕ್ಕುಜೆ ವಿಜಯ ಶಿಲ್ಪಿ ಇವರ ಮನೆಯಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ-16 ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸಾಹಿತಿಯಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಕವನ ,ಕಥೆ ,ಲೇಖನ […]
Read More
28-12-2018, 4:06 PM
ಕೊಲ್ಯ : ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲೆ ಬುನಾದಿ ಹಾಕುವುದು ಸೂಕ್ತ ,ಐ.ಎ.ಎಸ್ ,ಐ.ಪಿ.ಎಸ್ ನಂತಹ ಪರೀಕ್ಷೆಗಳಿಗೆ ಇಂದಿನಿಂದಲೇ ಕಠಿಣ ಪರಿಶ್ರಮ ಪಟ್ಟು ಓದಿ ಅಭ್ಯಾಸ ಮಾಡಿಕೊಂಡು ಸರಕಾರಿ ಅಧಿಕಾರಿಯಾಗಿ ಮುಂದಿನ ಜೀವನವನ್ನು ಸಂತೋಷದಿಂದ ಕಳೆಯಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಸರ್ವಜ್ಞ ಐ.ಎ.ಎಸ್.ಅಕಾಡೆಮಿ ಇದರ ನಿರ್ದೇಶಕರು, ಯುವವಾಹಿನಿ (ರಿ) ಕಂಕನಾಡಿ ಘಟಕದ ಉಪಾಧ್ಯಕ್ಷರಾಗಿರುವ ಸುರೇಶ್ ಎಂ.ಎಸ್ ರವರು ಮಾತನಾಡಿ ತಿಳಿಸಿದರು. ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟೀಯ […]
Read More
26-12-2018, 3:32 PM
ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಶಾಶ್ವತ ವಿದ್ಯಾ ನಿಧಿ ಯೋಜನೆಯ ಸದಸ್ಯರಾದ ಶ್ರೀ ಶ್ರೀ ಮುತ್ತಪ್ಪ ಪೂಜಾರಿ ಮತ್ತು ಶ್ರೀಮತಿ ಸುಜಾತ ಎಚ್.ಕೆ.ದಂಪತಿಗಳ ಕುಟುಂಬ ಸದಸ್ಯರ ಸಹಕಾರದೊಂದಿಗೆ ವಿದ್ಯಾ ನಿಧಿಗೆ ದೇಣಿಗೆಯ ಹಸ್ತಾಂತರ ಕಾರ್ಯಕ್ರಮವು ದಿನಾಂಕ 26-12-2018 ನೇ ಬುಧವಾರದಂದು ಸಾಯಂಕಾಲ ಮುತ್ತಪ್ಪ ಪೂಜಾರಿಯವರ ಹಿರಿಯ ಮುಂದಾಳುತ್ವದಲ್ಲಿ ಅವರ ನಿವಾಸ ಕುಂಪಲದಲ್ಲಿ ಜರಗಿತು. ಸಮಾಜದ ಹಿರಿಯ ಮಹಾನ್ಚೇತನ ಬಲಿಷ್ಠ ಭಾರತದ ಸ್ವಾತಂತ್ರ್ಯ ಹೋರಾಟಗಾರ 93 ವರ್ಷ ಹರೆಯದ ಮಂಗಳೂರು ಬಳ್ಳಾಲ್ ಭಾಗ್ ನಿವಾಸಿ ಎಚ್ .ಜಿ. […]
Read More
25-12-2018, 5:03 PM
ಉಪ್ಪಿನಂಗಡಿ : ದಿನಾಂಕ 25-12-2018ನೇ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಅರೋಗ್ಯ ಶಿಬಿರ ನಡೆಯಿತು. ಇದರ ಪ್ರಯೋಜನವನ್ನು ಸುಮಾರು ನೂರೈವತ್ತಕ್ಕಿಂತಲೂ ಹೆಚ್ಚು ಜನ ಪಡೆದುಕೊಂಡರು. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯ ಇದರ ಮುಖ್ಯ ಗುರುಗಳಾದ ಶ್ರೀ ವೈ.ಸಾಂತಪ್ಪ ಇವರು […]
Read More
25-12-2018, 4:05 AM
ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು. ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ […]
Read More
23-12-2018, 3:08 PM
ಉಪ್ಪಿನಂಗಡಿ : ದಿನಾಂಕ 23-12-2018ನೇ ಆದಿತ್ಯವಾರದಂದು ದಿ.ಗುರುಸಾಗರ್ ಇವರ ಸ್ಮರಣಾರ್ಥದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಮತ್ತು ಶ್ರೀ ರಾಮ ಭಜನಾ ಮಂಡಳಿ ಕರುವೇಲು ಮತ್ತು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು ಹಾಗೂ ಯೆನೊಪೊಯ ದಂತ ಮಹಾವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ಬಂಟ್ವಾಳ ತಾಲೂಕಿನ ಕರವೇಲು ಶಾಲೆಯಲ್ಲಿ ನಡೆಯಿತು. ಈ ಶಿಬಿರವನ್ನು ದಿ. ಗುರುಸಾಗರ್ ಇವರ ತಾಯಿ ವಂದನಾ ಶರತ್ ಮುದಲಾಜೆ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಉಪ್ಪಿನಂಗಡಿ ಅಧ್ಯಕ್ಷರಾದ […]
Read More