Yuvavahini

ಮಂಗಳೂರು

‘ಒಂದೇ ಜಾತಿ, ಒಂದೇ ಮತ’ ತತ್ವದ ಮೂಲ ಅರ್ಥವನ್ನು ಅರಿಯುವುದು ಮುಖ್ಯ : ವರದರಾಜ್ ಮಟ್ಟು ಕಟಪಾಡಿ

ಮಂಗಳೂರು, ಸೆ. 1: ನಾರಾಯಣ ಗುರುಗಳ ತತ್ವ ಹಾಗೂ ಆದರ್ಶಗಳನ್ನು ಪಾಲಿಸುವ ಮೊದಲು ಅವುಗಳ ಮೂಲ ಅದ್ವೈತದ ಅರ್ಥವನ್ನು ಅರಿತುಕೊಳ್ಳುವುದು ಅತ್ಯಂತ ಮುಖ್ಯ ಎಂದು ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.)ನ ಟ್ರಸ್ಟಿ ವರದರಾಜ್ ಮಟ್ಟು ಕಟಪಾಡಿ ಹೇಳಿದರು. ಉರ್ವಸ್ಟೋರ್‌ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸೆ. 1ರಂದು ನಡೆದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದ ಅವರು ಮಾತನಾಡಿದರು. ನಾರಾಯಣ ಗುರುಗಳು […]

Read More

ನಾರಾಯಣ ಗುರು ಜಯಂತಿಯಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಇತಿಹಾಸ ಮೆಲುಕು

ಮಂಗಳೂರು ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆಗಸ್ಟ್ 28ರಂದು ಸಂಜೆ 6.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುಪೂಜೆ ನೆರವೇರಿಸಲಾಯಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರವು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯ ಹಾಗೂ ಬಿಲ್ಲವ ಸಮಾಜದ ಸಂಘಟಿತ ಪ್ರಯತ್ನದ ಪ್ರತೀಕವಾಗಿ ರೂಪುಗೊಂಡ ಕ್ಷೇತ್ರವಾಗಿದೆ. 1908ರಲ್ಲಿ ಬಿಲ್ಲವ ಸಮಾಜದ ಮುಖಂಡ ಹಾಗೂ ಉದ್ಯಮಿ ಹೋಯ್ಗೆ ಬಜಾರ್ ಕೊರಗಪ್ಪ ಅವರು ಕೇರಳಕ್ಕೆ ತೆರಳಿ ನಾರಾಯಣ ಗುರುಗಳನ್ನು […]

Read More

ಶಾಲಾ ಮಕ್ಕಳಿಗೆ ಸಿಹಿ ವಿತರಿಸಿ ನಾರಾಯಣ ಗುರು ಜಯಂತಿ ಆಚರಣೆ

ಮಂಗಳೂರು ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಶಾಲಾ ಮಕ್ಕಳು ಹಾಗೂ ಅಂಗನವಾಡಿ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಗುರುಜಯಂತಿಯನ್ನು ಆಚರಿಸಲಾಯಿತು. ಆಗಸ್ಟ್ 28ರಂದು ಕೊಟ್ಟಾರದಲ್ಲಿರುವ ಸೇಂಟ್ ಪೀಟರ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಯ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಅನ್ನದಾನವು ಶ್ರೇಷ್ಠ ದಾನವಾಗಿದ್ದು, ಸಾಧ್ಯವಾದಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಭಗವಂತನ ಸೇವೆ ಮಾಡಿದ ತೃಪ್ತಿ ದೊರೆಯುತ್ತದೆ ಎಂಬ ಆಶಯದೊಂದಿಗೆ ಕಾರ್ಯಕ್ರಮ […]

Read More

ಉದ್ಯಮಶೀಲತೆಯ ಮೂಲಕ ಸ್ವಾವಲಂಬನೆ ಸಾಧ್ಯ: ಚಂದ್ರಿಕಾ ಎಸ್. ನಾಯಕ್

ಮಂಗಳೂರು: ಸಮಾಜದಲ್ಲಿ ವ್ಯವಸ್ಥಿತವಾಗಿ ಬದುಕಲು ಉದ್ಯೋಗದ ಅಗತ್ಯವಿದೆ. ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಲು ಉತ್ತಮ ಅವಕಾಶಗಳು ದೊರೆತಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಉದ್ಘಾಟಕಿ ಚಂದ್ರಿಕಾ ಎಸ್. ನಾಯಕ್ ಹೇಳಿದರು. ಅವರು ಆ. 24ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಉರ್ವ ಸ್ಟೋರ್‌ನ ರಘು ಬಿಲ್ಡಿಂಗ್‌ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (CEDOK), ಮಂಗಳೂರು […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು ಅಗಸ್ಟ್ 24 : “ಭಜನೆಯು ಕೇವಲ ಹಾಡಲ್ಲ, ಅದು ಭಕ್ತನಿಗೂ ಪರಮಾತ್ಮನಿಗೂ ನಡುವಿನ ಮಧುರವಾದ ಅನುಸಂಧಾನ” ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 24-08-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಝೆಡ್ ಕಲಾ ವೇದಿಕೆ ಭಜನಾ ತಂಡ ಕುಳಾಯಿ ಮಂಗಳೂರು ಇವರ ಸಹಯೋಗದಲ್ಲಿ ನೆರವೇರಿತು. ಹರಿನಾಮ ಸ್ಮರಣೆಯ ಭಕ್ತಿ ಭಾವ […]

Read More

ಆರಂಭದಲ್ಲೇ ಪತ್ತೆಹಚ್ಚಿದರೆ ಕ್ಯಾನ್ಸರ್ ಗುಣಪಡಿಸಬಹುದು: ಮಮತಾ ಸುವರ್ಣ

ಮಂಗಳೂರು ಅಗಸ್ಟ್ 21: “ಕ್ಯಾನ್ಸರ್ ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಆರಂಭದ ಹಂತದಲ್ಲಿಯೇ ರೋಗವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಗುಣಪಡಿಸಲು ಸಾಧ್ಯ. ದೇಹದಲ್ಲಿ ಯಾವುದೇ ಅಸಹಜ ಬದಲಾವಣೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಕ್ಯಾನ್ಸರ್ ವಿಭಾಗದ ಸಲಹೆಗಾರ್ತಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಮಮತಾ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆ.21ರಂದು ಆಯೋಜಿಸಲಾದ ಕ್ಯಾನ್ಸರ್ ರೋಗದ ಮಾಹಿತಿ ಹಾಗೂ ಜಾಗೃತಿ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸೇವೆ

ಮಂಗಳೂರು, ಆಗಸ್ಟ್ 17: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಭಜನಾ ಸೇವೆಯು ಸೋಮವಾರ ಸಂಜೆ ಕ್ಷೇತ್ರದಲ್ಲಿ ಭಕ್ತಿ ಭಾವದಿಂದ ನಡೆಯಿತು. ಈ ವಾರದ ಭಜನಾ ಸೇವೆಯನ್ನು ವೇದಾವತಿ ಮತ್ತು ಬಳಗ, ಅಳಪೆ–ಮಂಗಳೂರು ಇವರ ಸಹಯೋಗದಲ್ಲಿ ನೆರವೇರಿಸಲಾಯಿತು. ಹರಿನಾಮ ಸ್ಮರಣೆಯೊಂದಿಗೆ ಭಕ್ತಿ ಭಾವಪೂರ್ಣವಾಗಿ ಭಜನೆ ನಡೆಸಿ, ಶ್ರೀ ಗೋಕರ್ಣನಾಥ ಹಾಗೂ ಶ್ರೀ ನಾರಾಯಣಗುರುಗಳ ಚರಣಕ್ಕೆ ಭಜನಾ ಸೇವೆಯನ್ನು […]

Read More

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವುದು ನಮ್ಮ ಕರ್ತವ್ಯ : ರೇಖಾ ಗೋಪಾಲ್

ಮಂಗಳೂರು, ಆಗಸ್ಟ್ 15: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಿರಿಯರು ಹಾಗೂ ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೈನಿಕರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ಆಗಸ್ಟ್ 15ರಂದು ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. “ನಾವು ಇಂದು ನೆಮ್ಮದಿಯಾಗಿ ಬದುಕಲು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಸೈನಿಕರ ಸೇವೆಯೇ ಪ್ರಮುಖ […]

Read More

ಯುಪಿಐ ಡಿಜಿಟಲ್ ಪಾವತಿ ಮೇಲೆ ಎಂಡಿಆರ್ ಎಂಬ ತೂಗುಗತ್ತಿ: ಚಂದ್ರಶೇಖರ್ ಕಿನ್ನಿಗೋಳಿ

ಮಂಗಳೂರು ಅಗಸ್ಟ್ 11: “ಭಾರತವು ವಿಶ್ವದಲ್ಲೇ ಅತೀ ಹೆಚ್ಚು ಡಿಜಿಟಲ್ ಪಾವತಿ ವ್ಯವಸ್ಥೆ ಬಳಸುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ. ಬೀದಿಬದಿ ಅಂಗಡಿಗಳಿಂದ ಹಿಡಿದು ದೊಡ್ಡ ವ್ಯಾಪಾರ ವಹಿವಾಟುಗಳವರೆಗೆ ಡಿಜಿಟಲ್ ಪಾವತಿ ವ್ಯಾಪಕವಾಗಿ ಬಳಕೆಯಾಗುತ್ತಿದೆ. ವೈಯಕ್ತಿಕ ಡಿಜಿಟಲ್ ಪಾವತಿಗೆ ಪ್ರಸ್ತುತ ಯಾವುದೇ ಶುಲ್ಕವಿಲ್ಲದಿದ್ದರೂ, ವಾಣಿಜ್ಯ ವಹಿವಾಟುಗಳಲ್ಲಿ ಮುಂದಿನ ದಿನಗಳಲ್ಲಿ ನಿರ್ದಿಷ್ಟ ಮಿತಿಯನ್ನು ಮೀರಿದ ಪಾವತಿಗಳಿಗೆ ಸೇವಾ ಶುಲ್ಕ ವಿಧಿಸುವ ಸಾಧ್ಯತೆಯಿದೆ” ಎಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಕೋಶಾಧಿಕಾರಿ ಹಾಗೂ ಹಣಕಾಸು ನಿರ್ವಹಣಾ ತಜ್ಞ ಚಂದ್ರಶೇಖರ್ ಕಿನ್ನಿಗೋಳಿ ಹೇಳಿದರು. ಯುವವಾಹಿನಿ […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 10-08-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಹಯೋಗದಲ್ಲಿ ನೆರವೇರಿತು. ಹರಿನಾಮ ಸ್ಮರಣೆಯ ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!