Yuvavahini

NOV 13, 2024 5.59 PM IST

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ

ಯುವತುಡರ್ – 2024 ದೀಪಾವಳಿ ಸಂಭ್ರಮ

ಉಪ್ಪಿನಂಗಡಿ : ದಿನಾಂಕ 13.11.2024 ರಂದು ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಆಚರಣೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ಇವರ ಅಧ್ಯಕ್ಷತೆಯಲ್ಲಿ, ಘಟಕದ ಪದಾಧಿಕಾರಿ ಶ್ರೀ ಅಂಕಿತ್ ರವರ ಸೂರಜ್ ಮನೆಯಲ್ಲಿ ನಡೆಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ಮುಂದೆ ದೀಪ ಬೆಳಗಿಸಿ, ಭಜನಾ ಸೇವೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಉಪ್ಪಿನಂಗಡಿಯ ಖ್ಯಾತ ದಂತ ವೈದ್ಯರಾದ ಡಾ. ರಾಜಾರಾಮ್ ಕೆ.ಬಿ ಯವರು ದೀಪಾವಳಿ ಆಚರಣೆಯ ಬಗ್ಗೆಸವಿವರವಾದ ಮಾಹಿತಿಯನ್ನು ನೀಡಿದರು.

ಯುವ ಉದ್ಯಮಿ ಅಂಕಿತ್.ಎಂ.ಜೆ ಯವರು ಯುವವಾಹಿನಿಯ ಮೂಲಕ ಯುವಕರುಮುಂದೆ ಬರಬೇಕು, ಯುವವಾಹಿನಿ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲು ಕೈಜೋಡಿಸಬೇಕು ಎಂದು ತಿಳಿಸಿದರು

ಗೌರವ ಸಲಹೆಗಾರರಾದ ಶ್ರೀ ವರದರಾಜ್ ಎಂ, ಅಂಕಿತ್ ರವರ ತಾಯಿ ಶ್ರೀಮತಿ ಸರೋಜಿನಿ ಜಗನ್ನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರುಗಳಾದ ಜಯವಿಕ್ರಮ್, ಅಜಿತ್ ಪಾಲೇರಿ, ಗುಣಕರ್ ಅಗ್ನಾಡಿ, ಗುಣಕರ ಮುಗ್ಗ, ರವೀಂದ್ರ ಬೊಲೊಡಿ, ಜಯಾನಂದ ಕಲ್ಲಾಪು, ಹರೀಶ್ ಪಾಲೆತ್ತಡಿ, ಜನಾರ್ಧನ ಪೂಜಾರಿ ನೂಜ, ಕೃಷ್ಣಪ್ಪ ಪೂಜಾರಿ, ಆಶಿತ್ ಎಂ.ವಿ, ಚಂದ್ರಶೇಖರ್ ಸನಿಲ್, ಮನೋಹರ್ ಕುಮಾರ್, ಕುಶಾಲಪ್ಪ ಹತ್ತು ಕಳಸೆ, ಉಪಾಧ್ಯಕ್ಷರಾದ ಪುನೀತ್ ವಿ.ಡಿ, ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಭಾಗವಹಿಸಿದ್ದರು.

ಕಾರ್ಯಕ್ರಮ ಆಯೋಜಿಸಿದ ಶ್ರೀಮತಿ ಸರೋಜಿನಿ ಜಗನ್ನಾಥ್ ಮತ್ತು ಅವರ ಮಗ ಅಂಕಿತ್ ಎಂ.ಜೆ ಇವರುಗಳನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು.

ಅಧ್ಯಕ್ಷರಾದ ಸೋಮಸುಂದರ್ ಕೊಡಿಪ್ಪಾನ ಸ್ವಾಗತಿಸಿದರು.

ಕಾರ್ಯದರ್ಶಿ ಶ್ರೀಮತಿ ಅನಿತಾ ಸತೀಶ್ ರವರು ಧನ್ಯವಾದ ಸಲ್ಲಿಸಿದರು.

ಮನೋಹರ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!