Yuvavahini

DEC 08, 2024 9.17 AM IST

ಯುವವಾಹಿನಿ (ರಿ) ಪುತ್ತೂರು ಘಟಕ

ಕೋಟಿ – ಚೆನ್ನಯ ಕ್ರೀಡಾಕೂಟ

ಪುತ್ತೂರು : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕೆಡೆಂಜಿ ದಿನಾಂಕ 08-12-2024 ರಂದು ಅವಿಭಜಿತ ಪುತ್ತೂರು ತಾಲೂಕಿನ ಸಮಾಜ ಬಾಂಧವರಿಗಾಗಿ ನಡೆದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದಿಂದ ಹಲವಾರು ವರ್ಷಗಳ ಬಳಿಕ ಯುವವಾಹಿನಿ ಪುತ್ತೂರು ಘಟಕವು ದೊಡ್ಡ ಮಟ್ಟದಲ್ಲಿ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಮುಖ್ಯವಲ್ಲ. ಬಿಲ್ಲವ ಸಮಾಜ ಬಾಂಧವರು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಎಂದರು.

ಪುತ್ತೂರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನಿರ್ದೇಶಕರಾದ ಶ್ರೀಕಾಂತ್ ಬಿರಾವು ಮಾತನಾಡಿ ಪುತ್ತೂರಿನ ಯುವವಾಹಿನಿ ಘಟಕವು ಸಮಾಜದ ಅಭಿವೃದ್ಧಿಗೋಸ್ಕರ ಉತ್ತಮ ಕಾರ್ಯ ಮಾಡುತ್ತಿದೆ. ಯುವ ಸಮುದಾಯವನ್ನು ಒಗ್ಗೂಡಿಸಲು ಕ್ರೀಡೆಯಿಂದ ಮಾತ್ರ ಸಹಕಾರಿ. ಈ ನಿಟ್ಟಿನಲ್ಲಿ ಯುವಕರಿಗೆ ಕ್ರಿಕೆಟ್, ಮಹಿಳೆಯರಿಗೆ ತ್ರೋಬಾಲ್ ಕ್ರೀಡೆಯನ್ನು ಆಯೋಜಿಸುತ್ತಿದೆ ಎಂದರು.

ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಜಯಂತ ಬರಿಮಾರು ಮಾತನಾಡಿ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಪುತ್ತೂರಿನ ಯುವವಾಹಿನಿ ಘಟಕವು ಕಾರ್ಯ ನಿರ್ವಹಿಸುತ್ತಿದೆ. ಬಿಲ್ಲವ ಸಮಾಜ ಬಾಂಧವರು – ಬಿಲ್ಲವ ಸಂಘ, ಯುವವಾಹಿನಿ ಸಂಘದಲ್ಲಿ ಪಾಲು ಪಡೆದು ಸಾಮಾಜಿಕ ಚಿಂತನೆಯೊಂದಿಗೆ ಕೆಲಸ ಮಾಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ.ಎನ್ ಮಾತನಾಡಿ, ಹಲವಾರು ವರ್ಷಗಳಿಂದ ಸಮಾಜ ಬಾಂಧವರಿಗೋಸ್ಕರ ಕ್ರೀಡಾ ಕೂಟವನ್ನು ಆಯೋಜನೆ ಮಾಡುವ ಕನಸು ಇದೀಗ ನನಸಾಗಿದೆ. ನಮ್ಮ ಸಮಾಜ ಬಾಂಧವರಲ್ಲಿ ಅನೇಕ ಪ್ರತಿಭೆಗಳಿವೆ. ಈ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ ಎಂದರು.

ಕ್ರೀಡಾ ನಿರ್ದೇಶಕ ಲೋಹಿತ್ ಸ್ವಾಗತಿಸ,ಕಾರ್ಯದರ್ಶಿ ಸಮಿತ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!