Yuvavahini

APR 06, 2025 1.44 PM IST

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ

ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ ನಾಗೇಶ್ ಅಮೀನ್ ಮುಲ್ಲಕಾಡು, ಅಧ್ಯಕ್ಷೀಯ ಭಾಷಣದಲ್ಲಿ ನನ್ನ ಒಂದು ವರ್ಷದ ಅವಧಿಯಲ್ಲಿ ಅಧ್ಯಕ್ಷನಾಗಿ ಯಶಸ್ಸು ಪಡೆಯಲು ಮೂಲ ಕಾರಣವೇ ಭಜನೆ ಹಾಗೂ ವೈಯಕ್ತಿಕನಲ್ಲಿ ಬದುಕಿನಲ್ಲಿ ಮಾಡಿದ ಹೊಂದಾಣಿಕೆ ಎಂದರು. ಭಜನೆ ನನ್ನ ಜೀವನದ ಅವಿಭಾಜ್ಯ ಅಂಗ, ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಸಾಧಿಸಿದರೆ ಮಾತ್ರ ಯಶಸ್ಸು ಶತಸಿದ್ಧ. ಸಮಾಜ ಸೇವೆಯಲ್ಲಿ ಯಶಸ್ಸು ಪಡೆಯಬೇಕೆಂದರೆ ಕುಟುಂಬದ ಸದಸ್ಯರ ತ್ಯಾಗ ಹಾಗೂ ಬೆಂಬಲವು ಅತೀ ಮುಖ್ಯವಾಗಿದೆ, ನನ್ನ ಒಂದು ವರ್ಷದ ಯಶಸ್ಸಿನಲ್ಲಿ ಯುವವಾಹಿನಿ ಕುಟುಂಬದ ಪ್ರತಿ ಸದಸ್ಯರ ಸಮಪಾಲು ಇದೆ ಎನ್ನುತ್ತಾ ಎಲ್ಲರಿಗೂ ಮನಃಪೂರ್ವಕವಾಗಿ ಧನ್ಯವಾದ ಸಮರ್ಪಣೆ ಮಾಡಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷರಾದ ಶ್ರೀ ರವಿ ಪೂಜಾರಿ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ, ಮಂಗಳೂರು ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಎ.ಕೆ. ನ್ಯೂರೋ ಸೈಕ್ಯಾಟ್ರಿ ಮತ್ತು ಕೌನ್ಸಿಲಿಂಗ್ ಸೆಂಟರ್ ನ ಡಾಕ್ಟರ್ ಕಿರಣ್ ಕುಮಾರ್ ಪಿ.ಕೆ. ಮುಖ್ಯ ಅತಿಥಿಯಾಗಿ ಬಂದಿದ್ದು, ನೂತನ ತಂಡಕ್ಕೆ ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರು, ಕೇಂದ್ರ ಸಮಿತಿಯ ಅಧ್ಯಕ್ಷರು, ಉದ್ಘಾಟಕರು ಹಾಗೂ ಮುಖ್ಯ ಅತಿಥಿಯವರನ್ನು ಸನ್ಮಾನ ಮಾಡಿ ಗೌರವಿಸಲಾಯಿತು.

ಅಧ್ಯಕ್ಷರಾದ ಶ್ರೀ ನಾಗೇಶ್ ಅಮೀನ್ ಆರಂಭದಲ್ಲಿ ಎಲ್ಲರಿಗೂ ಸ್ವಾಗತ ಮಾಡಿದರು, ಮಾಜಿ ಅಧ್ಯಕ್ಷರಾದ ಶ್ರೀ ಗಣೇಶ್ ವಿ.ಕೋಡಿಕಲ್ ಪ್ರಸ್ತಾವನೆಗೈದರು, ನಿಕಟಪೂರ್ವ ಅಧ್ಯಕ್ಷರು ಹಾಗೂ ಮುಖ್ಯ ಚುನಾವಣಾಧಿಕಾರಿಯಾದ ಶ್ರೀ ಗಣೇಶ್ ಸುವರ್ಣ ನೂತನ ತಂಡದ ಪರಿಚಯಿಸಿದರು, ಕಾರ್ಯದರ್ಶಿ ಶ್ರೀ ಶ್ರವಣ್ ಎಸ್. ಕೂಳೂರು, ವಾರ್ಷಿಕ ವರದಿ ವಾಚಿಸಿದರು, ಪ್ರಚಾರ ನಿರ್ದೇಶಕರಾದ ಶ್ರೀ ಹರೀಶ್ ಕೆ.ಸುವರ್ಣ ಸನ್ಮಾನ ಪತ್ರ ಓದಿದರು, ನಿಯೋಜಿತ ಕಾರ್ಯದರ್ಶಿ ಶ್ರೀ ಯಶವಂತ ಪೂಜಾರಿ ಉಳಾಯಿಬೆಟ್ಟು ಧನ್ಯವಾದ ಸಮರ್ಪಣೆ ಮಾಡಿದರು, ನಿಯೋಜಿತ ನೂತನ ಅಧ್ಯಕ್ಷರಾದ ಶ್ರೀ ಅಶೋಕ್ ಅಂಚನ್ ಕೋಡಿಕಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಗಳೂರು ಘಟಕದ ಮಹಿಳಾ ಸದಸ್ಯರು ಹಾಗೂ ಗಾನವಾಹಿಣಿ ಕರೋಕೆ ಕ್ಲಬ್‌ ನ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿಲಾಗಿತ್ತು, ಘಟಕದ ಸದಸ್ಯರಾದ ಸತೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.ಯುವವಾಹಿನಿ ಇತರ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!