ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)
ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಪುತ್ತೂರು ಘಟಕದ ಆತಿಥ್ಯದಲ್ಲಿ,ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ(ರಿ.) ಪುತ್ತೂರು ಇವರ ಸಹಯೋಗದಲ್ಲಿ ಡೆನ್ನಾನ ಡೆನ್ನನ 2025 ಕಾರ್ಯಕ್ರಮ ದಿನಾಂಕ 25/05/2025ರಂದು ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು ಪುತ್ತೂರು ಇಲ್ಲಿ ನಡೆಯಿತ್ತು. ಬೆಳಿಗ್ಗೆ ಗಂಟೆ 10ಕ್ಕೆ ಕಾರ್ಯಕ್ರಮದ ಧ್ವಜಾರೋಹಣವನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲು ಯಜಮಾನರಾದ ಶ್ರೀಧರಪೂಜಾರಿಯವರು ನೆರವೇರಿಸಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ನಡೆಸಿಕೊಟ್ಟು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪುತ್ತೂರು ಘಟಕದ ಅಧ್ಯಕ್ಷರಾದ ಅಣ್ಣಿ ಪೂಜಾರಿಯವರು ಅಧ್ಯಕ್ಷತೆ ವಹಿಸಿದ್ದರು.. ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕುಳೂರು ಮಾತನಾಡಿ ಯುವವಾಹಿನಿಯ ಪ್ರತಿಷ್ಠಿತ ಕಾರ್ಯಕ್ರಮವು ಈ ವರ್ಷ ಪುತ್ತೂರು ಘಟಕದ ಆಥಿತ್ಯದಲ್ಲಿ ನಡೆಯುತ್ತಿದೆ , ಈ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬರಲೆಂದು ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಬಿ.ಎಸ್ ಸತೀಶ್ ಕುಮಾರ್, ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಎಸೋಸಿಯೇಷನ್, ಮಂಗಳೂರು,
ಶ್ರೀ ವಿಜಯ ಹಾರ್ವಿನ್, ಸಂಚಾಲಕರು, ಸುದಾನ ಸಮೂಹ ವಿದ್ಯಾ ಸಂಸ್ಥೆಗಳು, ಮಂಜಲ್ಪಡ್ಪು ಪುತ್ತೂರು. ಶ್ರೀ ವಿಜಯ್ ಕುಮಾರ್ ಸೊರಕೆ, ಮಾಜಿ ಅಧ್ಯಕ್ಷರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ). ಪುತ್ತೂರು. ಶ್ರೀ ಸತೀಶ್ ಬಿ, ಮಾಲಕರು ಸ್ನೇಹ ಸಿಲ್ಕ್ಸ್ ರೆಡಿಮೇಡ್ ಪುತ್ತೂರು. ಶ್ರೀ ಶ್ರೀಮತಿ ಪುಷ್ಪಲತಾ A.S.I Rtd ಕರ್ನಾಟಕ ಪೊಲೀಸ್ ಇಲಾಖೆ. ಹಾಗೂ ಶ್ರೀ ಸುಶಾಂತ್ ಕರ್ಕೇರ, ಸಾಂಸ್ಕೃತಿಕ ನಿರ್ದೇಶಕರು ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು,
ಶ್ರೀ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು, ಕಾರ್ಯಕ್ರಮದ ಸಂಚಾಲಕರು, ಯುವವಾಹಿನಿ (ರಿ.) ಪುತ್ತೂರು ಘಟಕ,
ಶ್ರೀ ಕೃಷ್ಣಪ್ಪ ಅಮೈ, ಸಂಘಟನಾ ಕಾರ್ಯದರ್ಶಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು, ಬಾಬು ಪೂಜಾರಿ ಇದ್ಪಾಡಿ ಪ್ರಧಾನ ಕಾರ್ಯದರ್ಶಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ಮೋಹನ್ ಶಿಬರ ಸಾಂಸ್ಕೃತಿಕ ನಿರ್ದೇಶಕರು ಯುವವಾಹಿನಿ (ರಿ.)ಘಟಕ ಹಾಗೂ ಶರತ್ ಸಾಲ್ಯಾನ್ ಕೈಪಂಗಳ ದೋಳ ಕಾರ್ಯದರ್ಶಿ ಯುವವಾಹಿನಿ (ರಿ.) ಪುತ್ತೂರು ಘಟಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ನಾರಾಯಣ ಗುರು ವೈಧಿಕ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಹರೀಶ್ ಶಾಂತಿ ಪ್ರಾರ್ಥಿಸಿದರು, ಕಾರ್ಯಕ್ರಮದ ಸಂಚಾಲಕರಾದ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಸ್ವಾಗತಿಸಿದರು ಕಾರ್ಯದರ್ಶಿ ಶರತ್ ಸಾಲ್ಯಾನ್ ಕೈಪಂಗಳ ದೋಳ ರವರು ಧನ್ಯವಾದ ಸಮರ್ಪಿಸಿದರು.
ಅತಿಥಿಯಾಗಿ ಆಗಮಿಸಿದ ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರಿಗೆ ಕಾರ್ಯಕ್ರಮದ ಪರವಾಗಿ ಸನ್ಮಾನಿಸಲಾಯಿತು .
ಸ್ಪರ್ಧಾ ಕಾರ್ಯಕ್ರಮವನ್ನು ಡೋಲು ಬಾರಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಸ್ಪರ್ಧೆಯಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಪ್ರಥಮ ಕುಳೂರು ಘಟಕ,
ದ್ವಿತೀಯ ಸುರತ್ಕಲ್ ಘಟಕ,
ತೃತೀಯ ಬೆಳ್ತಂಗಡಿ ಘಟಕ,
ಚತುರ್ಥ ಪಣಂಬೂರುಕುಳಾಯಿ ಘಟಕ,
ಪಂಚಮ ಬಜ್ಪೆ ಘಟಕ ಪಡೆದುಕೊಂಡಿತು,
ಸ್ಪರ್ಧಿಸಿದ ಎಲ್ಲಾ ಘಟಕಗಳಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಯಿತು.



