Yuvavahini

FEB 05, 1995 10.45 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು

ಕೆ. ವಿಶ್ವನಾಥ್ – ಅಧ್ಯಕ್ಷರು -1994-95

ಬಿ.ಎ. ಪದವೀಧರ, ನವ ಮಂಗಳೂರು ಬಂದರು ಮಂಡಳಿಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಸಹಾಯಕ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದವರು. ಲಯನ್ಸ್, ಜೇಸೀ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ. ನವ ಮಂಗಳೂರು ಬಂದರು ಸಾರ್ವಜನಿಕ ಗಣೇಶೋತ್ಸವ ಮತ್ತು ನಾಗಬನ ಜೀರ್ಣೋದ್ಧಾರ ಸಮಿತಿಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಅಪಾರ ಅನುಭವ ಗಳಿಸಿರುವರು.

1994-95 ರ ಸಾಲಿನ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. 1994 ರ ಆಗಸ್ಟ್ ತಿಂಗಳಲ್ಲಿ ಮಂಗಳೂರು ಶ್ರೀ ಕ್ಷೇತ್ರ ಕುದ್ರೋಳಿಯಿಂದ ಉಡುಪಿ ಬನ್ನಂಜೆಯವರೆಗೆ ಶ್ರೀ ಗುರು ಸಂದೇಶ ಯಾತ್ರೆಯನ್ನು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಅದ್ವಿತೀಯವಾಗಿ ನಡೆಸಿರುವರು. ಶ್ರೀ ಗುರು ಸಂದೇಶ ಯಾತ್ರೆಯು ಸರ್ವಧರ್ಮ ಸಮ್ಮೇಳನದೊಂದಿಗೆ ಸಮಾರೋಪ ಗೊಂಡದ್ದು ಅಂದಿನ ವಿಶೇಷವಾಗಿತ್ತು. ನಮ್ಮ ಸಮಾಜದ ಮಹಿಳೆಯರಿಗೆ ಉತ್ತಮ ಸ್ಥಾನಮಾನ ದೊರೆಯಬೇಕೆಂಬ ಮಹತ್ತರ ಆಶೋತ್ತರವನ್ನಿಟ್ಟುಕೊಂಡು ಪಣಂಬೂರು ಘಟಕದ ಸಹಯೋಗದೊಂದಿಗೆ ಮಹಿಳಾ- ಘಟಕವನ್ನು ತಮ್ಮ ಅಧಿಕಾರ ಅವಧಿಯಲ್ಲಿ ಸ್ಥಾಪಿಸಿ ಒಂದು ವಿಚಾರ ಕಮ್ಮಟವನ್ನು ಏರ್ಪಡಿಸಿದ್ದರು. ಅಲ್ಲದೆ ಯುವವಾಹಿನಿಯ ಸಂಪರ್ಕದ ಕೊಂಡಿಯನ್ನು ಬೆಳೆಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲದೆ, ಮೈಸೂರು ಜಿಲ್ಲೆಯ ಬೋಗಾದಿಯಲ್ಲಿ ದಿನಾಂಕ ೧೫.೫.೯೪ರಂದು ಒಂದು ಘಟಕವನ್ನು ಪ್ರಾರಂಭಿಸುವಲ್ಲಿ ಯಶಸ್ವಿಯಾಗಿದ್ದರು.

ಮಡದಿ ಅಂಬಿಕಾ, ವಿಶಾಲ್ ಹಾಗೂ ವಿನೋದ್ ಇಬ್ಬರು ಗಂಡು ಮಕ್ಕಳು ಹಾಗೂ ಅಶ್ವಿನಿ ಎಂಬ ಹೆಣ್ಣು ಮಗಳು, ಸೊಸೆಯಂದಿರಾದ ಶಕುಂತಲಾ, ರೂಪಿಕಾ, ಅಳಿಯ ಕೃಷ್ಣದಾಸ್, ಮೊಮ್ಮಕ್ಕಳಾದ ವಿನ್ಯಾಸ್ ಹಾಗೂ ಲಿಕಿಶಾ ವರವನ್ನೊಳಗೊಂಡ ಸುಖಿ ಸಂಸಾರ ಇವರದ್ದು.

ವಿಳಾಸ: ಶಿವಾಂಗಿ, ಶಿವಗಿರಿ ನಗರ, ಹೊಸಬೆಟ್ಟು, ಮಂಗಳೂರು- 575001
ಮೊಬೈಲ್: 9980900533

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!