ಯುವವಾಹಿನಿ(ರಿ.) ಬೆಳ್ತಂಗಡಿ ಘಟಕ
ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
9.3.2025ನೇ ಆದಿತ್ಯವಾರ ಸ್ಥಳ. ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಭವನ ಅವಳು ಬದುಕಲು ಕಲಿಸಿದವಳು ಎನ್ನುವ ಶೀರ್ಷಿಕೆಯ ಅಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ನಾಟಿವೈದ್ಯ ಶ್ರೀಮತಿ ಡೀಕಮ್ಮ ಅಲ್ಯೊಟ್ಟು ಉಜಿರೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಿಲ್ಲೂರಿನ ವೈದ್ಯರಾದ ಡಾ|| ವಾಣಿ ಸುಗುಣ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಶ್ಮಿ ನಾರಾವಿ ಹಾಗೂ ಹಿರಿಯ ನಾಟಿ ವೈದ್ಯರಾದ ಶ್ರೀಮತಿ ಡೀಕಮ್ಮ ಇವರನ್ನು ಸನ್ಮಾನಿಸಲಾಯಿತು. ಘಟಕದ ಅದ್ಯಕ್ಷರು ಅಧ್ಯಕ್ಷತೆ ವಹಿಸಿದ್ದರು..
ವೇದಿಕೆಯಲ್ಲಿ ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ, ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಮಹಿಳಾ ನಿರ್ದೇಶಕರಾದ ಶ್ರೀಮತಿ ಪ್ರಮೀಳಾ ಮಾಲೂರು, ಮಹಿಳಾ ಸಂಚಾಲನ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಶಾಂಭವಿ ಮುಂಡೂರು ಉಪಸ್ಥಿತರಿದ್ದರು. ಶ್ರೀಮತಿ ಸೇವಂತಿ ನಿರಂಜನ್ ಸ್ವಾಗತಿಸಿ, ಶ್ರೀಮತಿ ಸುಧಾಮಣಿ ಆರ್ ಮತ್ತು ಕುಮಾರಿ ಜಿತೀಕ್ಷ ನಿರೂಪಿಸಿ ಶ್ರೀಮತಿ ಬೇಬಿಂದ್ರ ಧನ್ಯವಾದವಿತ್ತರು. ಕಾರ್ಯಕ್ರಮದ ಮೊದಲು ಘಟಕದ ಮಹಿಳಾ ಸದಸ್ಯರಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು


