ದಿನಾಂಕ 09- 09- 2025 ಯುವವಾಹಿನಿ ಸಭಾಂಗಣ ಉರ್ವಸ್ಟೋರ್
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವಾಹಿನಿಯು ಹಮ್ಮಿಕೊಳ್ಳುತ್ತಿರುವ ಶಿವಗಿರಿ ಯಾತ್ರೆಯಿಂದ ಅನೇಕರಿಗೆ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಹಾಗೂ ಅವರು ಸಮಾಜದಲ್ಲಿ ತಂದ ಬದಲಾವಣೆಗಳನ್ನು ತಿಳಿಯುವಂತಾಗಿದೆ. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಗುರುಗಳ ಸಂದೇಶವನ್ನು ಅನುಸರಿಸಿ ವಿದ್ಯೆ ಕಲಿಸಿದ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಸಾಹಿತಿ, ಯುವ ವಕೀಲರಾದ ಮನೋಜ್ ಕುಮಾರ್ ವಾಮಂಜೂರು ಮಾತನಾಡಿ ವಿವೇಕಾನಂದರವರನ್ನು ಇಡಿ ವಿಶ್ವಕ್ಕೆ ಪರಿಚಯಿಸಿದ ಸರ್ವಧರ್ಮ ಸಮ್ಮೇಳನ ಚಿಕಾಗೋದಲ್ಲಿ ನಡೆದರೆ ಅದೇ ರೀತಿ ಎರಡನೇ ಸರ್ವಧರ್ಮ ಸಮ್ಮೇಳನ ಕೇರಳದಲ್ಲಿ ನಾರಾಯಣ ಗುರುಗಳು ಆಯೋಜಿಸಿದ್ದರು.ಅಸಮಾನತೆಯಿಂದಾಗಿ ದೌರ್ಜನ್ಯಕ್ಕೊಳಗಾದ ಕೆಳವರ್ಗದ ಜನರು ಮತಾಂತರವಾಗುತ್ತಿದ್ದ ಸಂಧರ್ಭ ಜಾತಿ ಮತ ಯಾವುದಾದರೇನು ಮನುಷ್ಯ ಒಳ್ಳೆಯವನಾದರೆ ಸಾಕು ಎಂಬ ಸಂದೇಶದೊಂದಿಗೆ ಅಂದಿನ ಸರ್ವಧರ್ಮ ಸಮ್ಮೇಳನ ನಡೆಯಿತು ಎಂದರು.
ಶಿಕ್ಷಕರ ದಿನಾಚರಣೆಯ ಕುರಿತು ಸವಿತಾ ಕೋಟ್ಯಾನ್ ರವರು ಮಾತನಾಡಿದರು.ಈ ಸಂದರ್ಭ ಶಿಕ್ಷಕರನ್ನು ಘಟಕದ ವತಿಯಿಂದ ಗೌರವಿಸಲಾಯಿತು.
ಘಟಕದ ಅಧ್ಯಕ್ಷ ಅಶೋಕ್ ಅಂಚನ್ ಕೋಡಿಕಲ್ ಅಧ್ಯಕ್ಷತೆ ವಹಿಸಿದ್ದರು.ಸಮಾಜ ಸೇವಾ ನಿರ್ದೇಶಕರಾದ ಉಷಾರವರು ಸ್ವಾಗತಿಸಿದರು.ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು ವಂದಿಸಿದರು. ನಾರಾಯಣ ಗುರುಗಳ ತತ್ವ ಆದರ್ಶಗಳ ಪ್ರಚಾರ ನಿರ್ದೇಶಕರಾದ ಪೂವಪ್ಪ ಕುಕ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸತೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.ಜಯಂತಿ ಕೋಟ್ಯಾನ್ ಹಾಗೂ ಪೂರ್ಣಿಮಾ ಯು ಆರ್ ಪ್ರಾರ್ಥನೆ ಗೀತೆ ಹಾಡಿದರು.ಘಟಕದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.


