ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೆಯ ಜನುಮ ಮಹೋತ್ಸವದ ಪ್ರಯುಕ್ತ ಈ ಸಾಲಿನ ಮೊದಲ ಗೃಹಭಜನೆ ಘಟಕದ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಅನಿತಾ ಕಮಲಾಕ್ಷ ಅವರ ಮನೆಯಲ್ಲಿ ನೆರವೇರಿತು.
ಘಟಕದ ಸದಸ್ಯರಾದ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿತು. ಘಟಕದ ಸದಸ್ಯರಿಂದ ಭಜನೆ ಹಾಗೂ ಕುಣಿತ ಭಜನೆ ಕಾರ್ಯಕ್ರಮ ಮೂಡಿ ಬಂತು. ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜನೆ ಮಾಡಿದ ಶ್ರೀಮತಿ ಅನಿತಾ ಕಮಲಾಕ್ಷ ಅವರ ಸಹಕುಟುಂಬಕ್ಕೆ ಹಾಗೂ ಯುವವಾಹಿನಿ ಕುಟುಂಬದ ಸರ್ವರಿಗೂ ಶ್ರೀ ಗುರುದೇವರು ಅಭಿವೃದ್ಧಿಯ ದಾರಿ ತೋರಿಸಲಿ ಎಂದು ಅಧ್ಯಕ್ಷರು ಪ್ರಾರ್ಥಿಸಿದರು.
ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್, ಮಾಜಿ ಅಧ್ಯಕ್ಷರುಗಳಾದ ಸುಧೀರ್, ಕಿಶನ್ ಪೂಜಾರಿ, ಶ್ರೀಧರ್ ಡಿ ಹಾಗೂ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಅಧ್ಯಕ್ಷರು ಮತ್ತು ಕಾರ್ಯದರ್ಶಿ ಹಾಗೂ ಸರ್ವ ಪದಾಧಿಕಾರಿಗಳು
ಯುವವಾಹಿನಿ (ರಿ) ಬೆಂಗಳೂರು ಘಟಕ.


