ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್(ರಿ) ಕುಂಟಲ್ಪಾಡಿ ಸಹಭಾಗಿತ್ವದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ
11/09/2025
ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಮುಂಜಾನೆ ಗಣಹೋಮ ನಡೆಸಿ ಮಂದಿರವನ್ನು ಶುದ್ಧೀಕರಿಸಿ ಗುರುಗಳ ಮೂರ್ತಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಹೂಗಳಿಂದ ಅಲಂಕರಿಸಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ನವೀನ್ ಕಕ್ಕೆಬೆಟ್ಟು ರವರ ಮನೆಯಲ್ಲಿ ಗುರುಗಳ ಮೂರ್ತಿಯನ್ನು ಇರಿಸಿ, ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಮೇರಿಹಿಲ್ ಗುರುನಗರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಸತ್ಸಂಗ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಾಗೂ ಗುರು ಪೂಜೆಯನ್ನು ನಡೆಸಿ ಗುರುಗಳ ಮೂರ್ತಿಯನ್ನು ಚೆಂಡೆ ತಾಳ ಹಾಗೂ ಮಕ್ಕಳ ಕುಣಿತ ಭಜನೆಯೊಂದಿಗೆ ಶೋಭಾಯಾತ್ರೆಯೊಂದಿಗೆ ಊರ ಸರ್ವರ ಸಹಕಾರದೊಂದಿಗೆ ಕಕ್ಕೆಬೆಟ್ಟುವಿನಿಂದ ಮಹಾಕಾಳಿ , ಮುತ್ತಪ್ಪ ಗುಡಿ, ರಮಾಶಕ್ತಿ ಮಿಷನ್, ನಾಲ್ಯಪದವು ಶ್ರೀ ಕೃಷ್ಣ ಭಜನಾ ಮಂದಿರ ರಸ್ತೆಯಿಂದ ಕುಂಟಲ್ಪಾಡಿಯವರೆಗೆ ವೈಭವದ ಮೆರವಣಿಗೆಯೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಇಲ್ಲಿಗೆ ಆಗಮಿಸಿ, ನಂತರ ಮಂದಿರದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಿದ ಶ್ರೀ ಚಂಡ ಚಾಮುಂಡೇಶ್ವರಿ ಭಜನಾ ಮಂಡಳಿ ಬೊಲ್ಪು ಗುಡ್ಡೆ ಇವರಿಗೆ ಗೌರವ ಸಲ್ಲಿಸಿ, ಗುರುಗಳಿಗೆ ಗುರುಪೂಜೆ ಹಾಗೂ ಮಹಾಪೂಜೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ , ಮಾಜಿ ಕಾರ್ಪೊರೇಟರ್ ಕಿಶೋರ್ ಕೊಟ್ಟಾರಿ, ಶಕೀಲ ಕಾವ ಹಾಗೂ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ,ಮತ್ತು ಕೇಂದ್ರ ಸಮಿತಿಯ ಹಲವಾರು ಸದಸ್ಯರು ಹಾಗೂ ವಿವಿಧ ಘಟಕಗಳಿಂದ ಆಗಮಿಸಿದ ಅಧ್ಯಕ್ಷರು ಹಾಗೂ ಸದಸ್ಯರು ಭಾಗಿಯಾಗಿದ್ದರು . ನಂತರ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು…
SEP 15, 2025 4.24 PM IST


