10/08/2025 ಘಟಕದ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ
ತುಳುನಾಡಿನ ಸಂಪ್ರದಾಯದ ಪ್ರಕಾರ ಭತ್ತ ಕುಟ್ಟುವುದರ ಮೂಲಕ ವಿಶೇಷವಾಗಿ ಆಟಿದ ಪೊರ್ಲು 2025 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧನ ಲಕ್ಷ್ಮಿ ಗಟ್ಟಿ .(ಸದಸ್ಯರು ರಾಣಿ ಅಬ್ಬಕ್ಕ ಅಧ್ಯಯನ ಪೀಠ ವಿಶ್ವ ವಿದ್ಯಾನಿಲಯ.ಮಂಗಳ ಗಂಗೋತ್ರಿ) ಆಟಿ ತಿಂಗಳ ವಿಶೇಷ ಆಚರಣೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು. ‘ಪರನೀರ್ ನೆಗೆಪೆರೆ ಬಲ್ಲಿ, ಪೊಸ ನೀರ್ ಉರ್ಕರ್ರೆ ಬಲ್ಲಿ’ ಎಂದರೆ ಹಳೇ ನೀರು ಬತ್ತಬಾರದು, ಹೊಸ ನೀರು ಹೆಚ್ಚಾಗಬಾರದು. ಹಿರಿಯರು, ಕಿರಿಯರು ಸಮಾನ ರೀತಿಯಲ್ಲಿ ಮುನ್ನಡೆಯಬೇಕು ಎಂದು ಯುವ ಜನಾಂಗಕ್ಕೆ ಒಳ್ಳೆಯ ಸಂದೇಶ ನೀಡಿದರು.
ಯುವ ಉದ್ಯಮಿ ಜಯಂತ್ ಸುವರ್ಣ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲತೀಶ್ ಪೂಜಾರಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಆಟಿ ಅಮಾವಾಸ್ಯೆ ದಿನ ಹಾಲೆ ಮರದ ಕೆತ್ತೆ ತೆಗೆದು ಸುಮಾರು 50 ರಿಂದ 100 ಮನೆಗೆ ಹಂಚುವ ಘಟಕದ ಸದಸ್ಯರಾದ ಚಂದ್ರಹಾಸ ಸುವರ್ಣ ಮತ್ತು ರೋಹಿತ್, ಸುಮಾರು 50 ವರ್ಷದಿಂದ ಕಷಾಯ ಮಾಡಿ 20 ಮನೆಗಳಿಗೆ ಹಂಚಿಕೊಂಡು ಬರುತ್ತಿರುವ ಜಾನಕಿ ಅಮ್ಮ ರವರನ್ನು ಇವರ ಸಾಮಾಜಿಕ ಕಾಳಜಿ, ಸೇವೆಯನ್ನು ಗುರುತಿಸಿ ಅಭಿನಂದಿಸಲಾಯಿತು.
ಧನಲಕ್ಷ್ಮಿ ಗಟ್ಟಿ ರವರನ್ನು ಅವರ ಸಮಾಜ ಸೇವೆ ಗುರುತಿಸಿ ಅಭಿನಂದಿಸಲಾಯಿತು.
ಆಟಿ ಕಳೆಂಜ ಆಗಮನ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು.
ವೇದಿಕೆಯಲ್ಲಿ ಘಟಕದ ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಕಾರ್ಯದರ್ಶಿ ಜಯಲಕ್ಷ್ಮಿ ಹಾಗೂ ಕಾರ್ಯಕ್ರಮದ ಸಂಚಾಲಕರು, ಕುಟುಂಬ ಸಂಪರ್ಕ ನಿರ್ದೇಶಕರು ಆದ ಸುಜಾತ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಇತರ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಅಧ್ಯಕ್ಷರು ಸ್ವಾಗತಿಸಿದರು. ಮಧುಶ್ರೀ ಪ್ರಶಾಂತ್ ನಿರೂಪಿಸಿದರು. ಭವಾನಿ ಶಂಕರ್ ಪ್ರಾರ್ಥಿಸಿದರು. ಕಾರ್ಯಕ್ರಮದ ಸಂಚಾಲಕರು ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ಘಟಕದ ಸದಸ್ಯರಿಂದ ದೇವಿ ಪ್ರಸಾದ್ ರವರ ನಿರ್ದೇಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸದಸ್ಯರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.
ನಂತರ ಸದಸ್ಯರು ತಯಾರಿಸಿ ತಂದ ಆಟಿ ತಿಂಗಳ ವಿವಿಧ ಖಾದ್ಯಗಳನ್ನು ಬಡಿಸಿ, ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
SEP 19, 2025 7.48 AM IST


