ದಿನಾಂಕ 10/08/2025
ಆಟಿದ ನೆಂಪುಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. ಅದಲ್ಲದೆ ಘಟಕದ ಸದಸ್ಯರಾದ ಮೋಹನ್ ಅಮೀನ್ ಕಾಲೆ ಕೋಲದ ಬಗ್ಗೆ ವಿವರಣೆ ನೀಡಿದರು. ಘಟಕದ ಮಾಜಿ ಅಧ್ಯಕ್ಷರಾದ ಗೋಪಾಲ್ ಎಂ. ಪೂಜಾರಿಯವರು ಕೆಲವು ಔಷಧಗಳ ಬಗ್ಗೆ ಮಾಹಿತಿ ನೀಡಿದರು. ಘಟಕದ ಹಿತೈಷಿಯಾಗಿರುವ ಶ್ರೀಯುತ ರವಿ ಉಜ್ಜೋಡಿಯವರು ಆಟಿ ತಿಂಗಳ ಬಗ್ಗೆ ವಿಶೇಷ ಪದ್ಯ ಬರೆದು ಹಾಡಿದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ನವೀನ್ ಕೋಟ್ಯಾನ್ ಹಾಗೂ ಸಂಚಾಲಕರಾದ ಶ್ರೀಮತಿ ಸವಿತಾ ರಾಜೀವ್ ಉಪಸ್ಥಿತರಿದ್ದರು. ಘಟಕದ ಮಾಜಿ ಅಧ್ಯಕ್ಷರಾದ ಪೃಥ್ವಿರಾಜ್ ರವರು ಈ ಕಾರ್ಯಕ್ರಮ ಯಶಸ್ವಿಯಾಗಲು ಪ್ರೋತ್ಸಾಹಿಸಿದಂತಹ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು. ರೋಹಿತ್ ಕುಮಾರ್ ನಿರೂಪಿಸಿದರು. ಸದಸ್ಯರಿಗೆ ವಿಶೇಷ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದ ನಂತರ ಘಟಕದ ಸದಸ್ಯರು ತಾವು ತಮ್ಮ ಮನೆಯಲ್ಲಿ ತಯಾರಿಸಿ ತಂದಂತಹ ಆಟಿ ತಿಂಗಳ 26 ಬಗೆಯ ವಿವಿಧ ತಿಂಡಿ ತಿನಿಸುಗಳನ್ನು ಎಲ್ಲರಿಗೂ ಉಣ ಬಡಿಸಿದರು. ಇದರ ಜೊತೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು.


