Yuvavahini

SEP 19, 2025 8.44 AM IST

ಆಟಿದ ನೆಂಪುಕಾರ್ಯಕ್ರಮ -ಯುವವಾಹಿನಿ(ರಿ.)ಕಂಕನಾಡಿ ಘಟಕ

ದಿನಾಂಕ 10/08/2025
ಆಟಿದ ನೆಂಪುಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. ಅದಲ್ಲದೆ ಘಟಕದ ಸದಸ್ಯರಾದ ಮೋಹನ್ ಅಮೀನ್ ಕಾಲೆ ಕೋಲದ ಬಗ್ಗೆ ವಿವರಣೆ ನೀಡಿದರು. ಘಟಕದ ಮಾಜಿ ಅಧ್ಯಕ್ಷರಾದ ಗೋಪಾಲ್ ಎಂ. ಪೂಜಾರಿಯವರು ಕೆಲವು ಔಷಧಗಳ ಬಗ್ಗೆ ಮಾಹಿತಿ ನೀಡಿದರು. ಘಟಕದ ಹಿತೈಷಿಯಾಗಿರುವ ಶ್ರೀಯುತ ರವಿ ಉಜ್ಜೋಡಿಯವರು ಆಟಿ ತಿಂಗಳ ಬಗ್ಗೆ ವಿಶೇಷ ಪದ್ಯ ಬರೆದು ಹಾಡಿದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ನವೀನ್ ಕೋಟ್ಯಾನ್ ಹಾಗೂ ಸಂಚಾಲಕರಾದ ಶ್ರೀಮತಿ ಸವಿತಾ ರಾಜೀವ್ ಉಪಸ್ಥಿತರಿದ್ದರು. ಘಟಕದ ಮಾಜಿ ಅಧ್ಯಕ್ಷರಾದ ಪೃಥ್ವಿರಾಜ್ ರವರು ಈ ಕಾರ್ಯಕ್ರಮ ಯಶಸ್ವಿಯಾಗಲು ಪ್ರೋತ್ಸಾಹಿಸಿದಂತಹ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು. ರೋಹಿತ್ ಕುಮಾರ್ ನಿರೂಪಿಸಿದರು. ಸದಸ್ಯರಿಗೆ ವಿಶೇಷ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದ ನಂತರ ಘಟಕದ ಸದಸ್ಯರು ತಾವು ತಮ್ಮ ಮನೆಯಲ್ಲಿ ತಯಾರಿಸಿ ತಂದಂತಹ ಆಟಿ ತಿಂಗಳ 26 ಬಗೆಯ ವಿವಿಧ ತಿಂಡಿ ತಿನಿಸುಗಳನ್ನು ಎಲ್ಲರಿಗೂ ಉಣ ಬಡಿಸಿದರು. ಇದರ ಜೊತೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!