ಶ್ರೀ ಗಣೇಶ ಚತುರ್ಥಿ ಯ ಪ್ರಯುಕ್ತ ಪ್ರತಿ ವರ್ಷ ನಡೆಸುವಂತೆ ದಿನಾಂಕ 27-08-2025 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ, ಆವರಣದಲ್ಲಿ ಯುವವಾಹಿನಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟಾ ಸ್ಪರ್ಧಾ ಕಾರ್ಯಕ್ರಮವನ್ನು ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು.
ಮಕ್ಕಳ ವಿಭಾಗ ಮಹಿಳಾ ವಿಭಾಗ ಪುರುಷ ವಿಭಾಗ ಹೀಗೆ ಬೇರೆ ಬೇರೆ ವಿಭಾಗಗಳಾಗಿ ಹತ್ತು ಹಲವರು ಮನರಂಜನ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು .
ತದನಂತರ ಚುಟುಕಾಗಿ ನಡೆದ ಸಮಾರೋಪ ಸಮಾರಂಭದಲ್ಲಿ ಘಟಕದ ಅಧ್ಯಕ್ಷರು ವರುಣ್ ಕುಮಾರ್, ಸ್ಥಾಪಕ ಅಧ್ಯಕ್ಷರು ನಿತೇಶ್ ಜೆ ಕರ್ಕೇರ ,ನಿಕಟಪೂರ್ವ ಅಧ್ಯಕ್ಷರು ಸಚಿನ್ ಎಸ್ ಕರ್ಕೇರ ,ಅತಿಥಿಯಾಗಿ ಆಗಮಿಸಿದ ವಿಜಯ್ ಪೂಜಾರಿ ,ಗ್ರಾಮ ಪಂಚಾಯತ್ ಸದಸ್ಯರು ಅಮಿತಾ ಎಸ್ ಪೂಜಾರಿ ಉಪಸ್ಥಿತರಿದ್ದರು .
ಪ್ರಾರ್ಥನೆಯ ಮುಖಾಂತರವಾಗಿ ಆರಂಭವಾದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರು ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು ,ನಿತೇಶ್ ಜೇ ಕರ್ಕೇರ ಇವರು ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ವಿಶೇಷವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಅಭಿನಂದನಾರ್ಹ ಬಹುಮಾನ ಹಾಗೂ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಎಲ್ಲಾ ವಿಭಾಗದ ವಿಜೇತರಿಗೂ ಬಹುಮಾನ ನೀಡಿ ಅಭಿನಂದಿಸಲಾಯಿತು. ಅಂತಿಮವಾಗಿ ಧನ್ಯವಾದ ಸಮರ್ಪಣೆಯ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು.


