2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಗಸ್ಟ್ 10, 2025ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು.
ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾರ್ಯದರ್ಶಿ ಪ್ರಥಮೇಶ್ ರವರು ಎಲ್ಲರನ್ನು ಸ್ವಾಗತಿಸಿದರು.
ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ಉದ್ಘಾಟಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು.ಪ್ರಬೋಧ್ ಚಂದ್ರ ಹೆಜಮಾಡಿ ಪ್ರಸ್ತಾಪಿಸಿದರು.ಜೊತೆ ಕಾರ್ಯದರ್ಶಿ ಕು. ಪ್ರಾಪ್ತಿ ಆರ್ ಸುವರ್ಣ ರವರು ಗತ ಸಾಲಿನ ಕಾರ್ಯ ಚಟುವಟಿಕೆಗಳ ವರದಿ ಮಂಡಿಸಿದರು.ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ತಂಡಕ್ಕೆ ಶುಭ ಹಾರೈಸಿದರು.
* ಹೊಸದಾಗಿ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿಶಾಂಕ್ ಎಸ್. ಕೋಟ್ಯಾನ್ ಅವರು ಮಾತನಾಡಿ, “ಘಟಕದೊಂದಿಗೆ ಇನ್ನಷ್ಟು ಕಲ್ಯಾಣಕಾರಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವುದರ ಜೊತೆಗೆ, ಎಲ್ಲರ ಸಹಕಾರ ನಮ್ಮ ತಂಡಕ್ಕೆ ಇರಲಿ,” ಎಂದು ಅಭಿಪ್ರಾಯಪಟ್ಟರು.
* ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ನಿರ್ಗಮನ ಘಟಕಾಧ್ಯಕ್ಷೆ ಶ್ರೀಮತಿ ದೀಪ ದಿನೇಶ್ ಅವರು ಮಾತನಾಡಿ ತಮ್ಮ ಸೇವಾ ಅವಧಿಯಲ್ಲಿ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.
* ಕಾರ್ಯಕ್ರಮದ ಅಂಗವಾಗಿ SSLC ಹಾಗೂ PUC ಪರೀಕ್ಷೆಯಲ್ಲಿ ಶೇ.95 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜೊತೆಗೆ 1 ರಿಂದ 10ನೇ ತರಗತಿವರೆಗಿನ 50 ವಿದ್ಯಾರ್ಥಿಗಳಿಗೆ ಟಿಫಿನ್ ಬಾಕ್ಸ್ಗಳನ್ನು ವಿತರಿಸಲಾಯಿತು.ನಮ್ಮೂರಿನ ಪಿ. ಎಚ್. ಡಿ(PHD) ಪದವೀಧರರಾದ ಡಾ|ಗಂಗೋತ್ರಿ ಸನಿಲ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
* ಮುಖ್ಯ ಅತಿಥಿಗಳಾಗಿ ಶ್ರೀ ವೈ. ಸುಕುಮಾರ್, ಶ್ರೀ ರವಿ ಪೂಜಾರಿ ಚಿಲಿಂಬಿ ಹಾಗೂ ಶ್ರೀ ಲೋಹಿತ್ ರೆಂಜಾಳ ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ಕು. ಪ್ರಾಪ್ತಿ ಆರ್ ಸುವರ್ಣ ರವರು ವಂದಿಸಿದರು.


