Yuvavahini

OCT 21, 2025 3.48 PM IST

ಯುವ ಆರೋಗ್ಯ” ಕಾರ್ಯಕ್ರಮ-ಯುವವಾಹಿನಿ (ರಿ.) ಬೆಂಗಳೂರು ಘಟಕ

ದಿನಾಂಕ: 15 ಸೆಪ್ಟೆಂಬರ್ 2025, ಭಾನುವಾರ ಮಧ್ಯಾಹ್ನ
ಸ್ಥಳ: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಪದ್ಮನಾಭನಗರ

ಕಾರ್ಯಕ್ರಮವು ಸದಸ್ಯರಿಗಾಗಿ ಫಿಟ್ನೆಸ್ ಆಟಗಳು (ಫ್ಲ್ಯಾಂಕ್ ಚಾಲೆಂಜ್ ಮುಂತಾದವು)ಗಳಿಂದ ಪ್ರಾರಂಭವಾಯಿತು. ಬಳಿಕ, ಸ್ಪರ್ಶ್ ಆಸ್ಪತ್ರೆಯ ಪ್ರಸಿದ್ಧ ಹೃದ್ರೋಗ ತಜ್ಞರಾದ ಡಾ. ಬಸವರಾಜ್ ಹಗರಗಿ ಅವರು ಹೃದಯದ ಆರೋಗ್ಯ ಕುರಿತಾದ ಪ್ರೇರಣಾದಾಯಕ ಹಾಗೂ ಜ್ಞಾನಮಯ ಉಪನ್ಯಾಸವನ್ನು ನೀಡಿದರು.

ಡಾ ಬಸವರಾಜ್ ಹಗರಗಿಯವರ ಕೆಲವು ಮುಖ್ಯ ಸಂದೇಶಗಳು* :
1. ಹೃದಯವು ನಮ್ಮ ದೇಹದ ಎಂಜಿನ್‌ನಂತೆ ಕಾರ್ಯನಿರ್ವಹಿಸುತ್ತದೆ.
2. ಕೊಲೆಸ್ಟ್ರಾಲ್ ಜಮಾವಣೆಯಿಂದ ಹೃದಯದಲ್ಲಿ ಬ್ಲಾಕ್‌ಗಳು ಉಂಟಾಗುತ್ತವೆ.
3. ಹೃದಯಾಘಾತವು ಕೇವಲ ವಯೋವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಸಂಭವಿಸುತ್ತದೆ. ಆದ್ದರಿಂದ ಲಕ್ಷಣಗಳು ಕಾಣಿಸಿಕೊಳ್ಳುವ ಮುನ್ನವೇ ಕಾಳಜಿಯನ್ನು ವಹಿಸಬೇಕು.
4. ಧೂಮಪಾನ, ಮದ್ಯಪಾನ ಹಾಗೂ ಪ್ಯಾಸಿವ್ ಸ್ಮೋಕಿಂಗ್ ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತವೆ.
5. ಪ್ರತಿಯೊಂದು ಊಟದಲ್ಲೂ ಕನಿಷ್ಠ 50% ಹಣ್ಣು-ತರಕಾರಿಗಳನ್ನು ಸೇರಿಸಿಕೊಳ್ಳುವುದು, ಸಾಕಷ್ಟು ವ್ಯಾಯಾಮ ಅತ್ಯಗತ್ಯ.
6. ಹೊರಗಿನ ಆಹಾರ, ವಿಶೇಷವಾಗಿ ಜಂಕ್ ಫುಡ್ ಹಾಗೂ ಕೆಟ್ಟ ಎಣ್ಣೆಯಲ್ಲಿ ತಯಾರಾಗುವ ಆಹಾರವನ್ನು ತಪ್ಪಿಸಿಕೊಳ್ಳಬೇಕು.

ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಡಾ. ಬಸವರಾಜ್ ಸಮರ್ಪಕ ಉತ್ತರ ನೀಡಿದರು. ಬಳಿಕ ಅವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸ್ಪರ್ಶ್ ಆಸ್ಪತ್ರೆ ಮತ್ತು ಯುವವಾಹಿನಿಯ ಸಂಯುಕ್ತ ಆಶಯದಲ್ಲಿ ಕುಟುಂಬ ಆರೋಗ್ಯ ಕಾರ್ಡ್ ಬಿಡುಗಡೆ ಮಾಡಲಾಯಿತು. ಸ್ಪರ್ಶ್ ಆಸ್ಪತ್ರೆಯ ಸಿಬ್ಬಂದಿ ಶ್ರೀಅಕ್ಷಯ್ ಅವರು ಈ ಕಾರ್ಡ್‌ನ ಲಾಭಗಳ ಬಗ್ಗೆ ವಿವರಿಸಿದರು. ಇದು ಯುವವಾಹಿನಿಯ 350ಕ್ಕೂ ಹೆಚ್ಚು ಸದಸ್ಯರಿಗೆ ಬಹಳ ಉಪಯುಕ್ತವಾಗಿದೆ.

ಮಾಸಿಕ ಸಭೆ
ಸಭೆಯನ್ನು ಶ್ರೀ ಜಯಂತ್ ಸಾಲ್ಯಾನ್ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು.

ಆರೋಗ್ಯ ನಿರ್ದೇಶಕಿ ಶ್ರೀಮತಿ ಅನಿತಾ ಕಮಲಾಕ್ಷ ಅವರು ಸ್ವಾಗತ ನೀಡಿ, ಯುವ ಆರೋಗ್ಯ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.

ಕಾರ್ಯದರ್ಶಿ ಶ್ರೀ ಸಂತೋಷ್ ಪಣಪಿಲ ಅವರು ಹಿಂದಿನ ತಿಂಗಳ ವರದಿಯನ್ನು ವಾಚಿಸಿದರು.

ಅಧ್ಯಕ್ಷರಾದ ಶ್ರೀ ಶಶಿಧರ್ ಕೋಟ್ಯಾನ್ ಅವರು ಖಜಾಂಚಿಯ ಅನುಪಸ್ಥಿತಿಯಲ್ಲಿ ಹಣಕಾಸು ಲೆಕ್ಕ ಪತ್ರವನ್ನು ಮಂಡಿಸಿದರು.

ಸದಸ್ಯರು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಗೌರವ ಸಲಹೆಗಾರರಾದ ಶ್ರೀಸುಧೀರ್ ಪೂಜಾರಿ ಅವರು ಯುವ ಆರೋಗ್ಯ ಕಾರ್ಯಕ್ರಮವು ಅತ್ಯುತ್ತಮ ಹೆಜ್ಜೆ ಮತ್ತು ಇನ್ನಷ್ಟು ಇಂತಹ ಉಪಯುಕ್ತ ಕಾರ್ಯಕ್ರಮಗಳು ನಡೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಧ್ಯಕ್ಷರಾದ ಶ್ರೀ ಶಶಿಧರ ಕೋಟ್ಯಾನ್ ಅವರು ಬೆಂಗಳೂರಿನಲ್ಲಿ ಯುವವಾಹಿನಿಯನ್ನು ಇನ್ನಷ್ಟು ಬಲಪಡಿಸುವ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡು, ಮುಂಬರುವ ರಾಜ್ಯಮಟ್ಟದ ಯುವ ವೈಭವ ಕಾರ್ಯಕ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

ಶ್ರೀ ಸುಧೀರ್ ಪೆರಾಡಿ ಅವರು ಯುವ ವೈಭವದ ಪ್ರಮುಖ ಅಂಶಗಳನ್ನು ವಿವರಿಸಿದರು.

ಆರೋಗ್ಯ ನಿರ್ದೇಶಕ ಶ್ರೀಹರೀಶ್ ಅವರು ಮಾತನಾಡಿ, ಆರೋಗ್ಯ ಕಾರ್ಡ್‌ಗಳನ್ನು ವಿತರಿಸಿದರು.

ಶ್ರೀ ದಿನೇಶ್ ಎಂ. ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಅಂತ್ಯಗೊಂಡಿತು.
ಶ್ರೀಮತಿ ಮಧುಮತಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!