Yuvavahini

APR 18, 1999 10.20 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಚೆನ್ನಕೇಶವ – ಅಧ್ಯಕ್ಷರು -1998-99

ಶ್ರೀಯುತರ ಅಧ್ಯಕ್ಷ ಅವಧಿಯಲ್ಲಿ ಕಾಸರಗೋಡಿನ ಚಿಪ್ಪಾರು ಘಟಕದಿಂದ ಶೀರೂರಿನ ಘಟಕದವರೆಗೆ ಘಟಕ ಭೇಟಿಯನ್ನು ಮಾಡಿದ ಸಾಧನೆ ಅವಿಸ್ಮರಣೀಯ. ಇವರ ಅಧಿಕಾರ ಅವಧಿಯಲ್ಲಿ ವಿದ್ಯಾನಿಧಿಯಿಂದ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯ ನೀಡಲಾಗಿತ್ತು.

ಪುತ್ತೂರಿನ ಓರ್ವ ವಿದ್ಯಾರ್ಥಿ ಶ್ರೀ ಪ್ರವೀಣ್ ಕುಮಾರ್ ಇವರ ಆಥ್ಲೆಟಿಕ್ಸ್‌ನ ತರಬೇತಿ ಸಮಯದಲ್ಲಿ ಪೌಷ್ಠಿಕ ಆಹಾರ ಅವಶ್ಯಕತೆಗೆ ಮಾಸಿಕ 150/-ರಂತೆ ಧನ ಸಹಾಯ ನೀಡಲಾಗಿತ್ತು.

ಕು. ಪ್ರಮೀಳಾರ ಪಿಯುಸಿ ವ್ಯಾಸಂಗದ ಸಂಪೂರ್ಣ ಖರ್ಚಿನ ಜವಾಬ್ದಾರಿಯನ್ನು ತಮ್ಮ ಸಮಾಜದ ದಾನಿಯಾದ ಕೆ.ಎ. ಜಯಚಂದ್ರರವರಿಂದ ಭರಿಸುವಂತೆ ಸಹಕರಿಸಲಾಗಿತ್ತು.

11-10-98 ರಂದು ನಮ್ಮ ಸಮಾಜದ ಶಿಕ್ಷಕರ ಸಮಾವೇಶವನ್ನು ಮಂಗಳೂರಿನ ಕುದ್ರೋಳಿಯ ಶ್ರೀ ಅಧ್ಯಕ್ಷ ಕೊರಗಪ್ಪ ಸಭಾಭವನದಲ್ಲಿ ನಡೆಸಲಾಗಿತ್ತು. ಪಣಂಬೂರಿನಲ್ಲಿ ಅಂತರ್ ಘಟಕ ಕ್ರಿಕೆಟ್ ಪಂದ್ಯಾಟ ನಡೆಸಲಾಗಿತ್ತು.

ಪತ್ನಿ ಶ್ರೀಮತಿ ಮಿತ್ರ ಚೆನ್ನಕೇಶವ, ಮತ್ತು ನಿಶಿತ್ ಹಾಗೂ ನಿಕಿತ್ ಎರಡು ಗಂಡು ಮಕ್ಕಳನ್ನೊಳಗೊಂಡ ಸುಖ ಸಂಸಾರ ಇವರದ್ದು.

ಕಿನ್ನಿಗೋಳಿ Jc ಸ್ಥಾಪಕ ಅಧ್ಯಕ್ಷರಾದ ಇವರು ತನ್ನ ವೃತ್ತಿ ನಿಮಿತ್ತ ಸುರತ್ಕಲ್‌ಗೆ ಸ್ಥಳಾಂತರಗೊಂಡು ಬಳಿಕ JcI ಬೆಳೆಸುವಲ್ಲಿ ತನ್ನ ಉತ್ಕೃಷ್ಠ ಸೇವೆಯನ್ನು ನೀಡಿರುತ್ತಾರೆ.

ವಲಯಾಧಿಕಾರಿಯಾಗಿ ದುಡಿದ ಇವರು ರಾಷ್ಟ್ರೀಯ ಮಟ್ಟದಲ್ಲಿ ಎಛಿ ಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಛಿಯ ಉನ್ನತ ಶ್ರೇಣಿಯ ಸೆನೆಟರ್ ಆಗಿ ವಲಯ 15 ರಲ್ಲಿ ಅಂತರ್‌ರಾಷ್ಟ್ರೀಯ ಸಮ್ಮೇಳನಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಪ್ರವಾಸ ಇವರ ಒಂದು ಹವ್ಯಾಸ. ಮಿತ್ರರೊಂದಿಗೆ, ಅನೇಕ ವೇಳೆ ಏಕಾಂಗಿಯಾಗಿ ದೇಶಾದ್ಯಂತ ಸಂಚರಿಸುವ ಇವರು ಉತ್ತಮ ಚಾರಣಿಗರು ಕೂಡ. ಇತ್ತೀಚೆಗೆ ಎವರೆಸ್ಟ್ ಬೇಸ್ ಕ್ಯಾಂಪ್‌ವರೆಗೆ ಚಾರಣ ಮಾಡಿ ಯಶಸ್ವಿಯಾಗಿ ಹಿಂದಿರುಗಿದ್ದಾರೆ. ವಿದೇಶ ಪ್ರವಾಸದಲ್ಲಿ ಹಲವಾರು ದೇಶಗಳನ್ನು ಸುತ್ತಿ ಅನುಭವಗಳಿಸಿರುವ ಇವರು ಮಿತಭಾಷಿ.

ವಿಳಾಸ: ಕೋಸ್ಟಲ್ ಟಯರ್‍ಸ್
ಶ್ರೀ ಗೋವಿಂದಾದಾಸ ಕಾಲೇಜಿನ ಎದುರುಗಡೆ
ಸುರತ್ಕಲ್, ಮಂಗಳೂರು-575014
ಮೊಬೈಲ್: 9901895434

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!