ದಿನಾಂಕ 27/07/2025 ರಂದು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಸಹಭಾಗಿತ್ವದಲ್ಲಿ
ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮೊದಲಿಗೆ ಘಟಕದ ಸದಸ್ಯರು ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಹಾಗೂ ಸಾಹಿತಿಕಾರರು ಮತ್ತು ಸಂತ ಅಲೋಶಿಯಸ್ ಪಿಯು ಕಾಲೇಜಿನ ಉಪನ್ಯಾಸಕರಾದ ಶ್ರೀ ಮೋಹನ್ ರಾಜ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ನವೀನ್ ರವರು ಆಗಮಿಸಿದಂತಹ ಅತಿಥಿಗಳಿಗೆ ವೀಳ್ಯದೆಲೆ ಕೊಟ್ಟು ಶಾಲು ಹೊದಿಸಿ ಹಾಗೂ ಬಂದಂತಹ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಮುಖ್ಯ ಅತಿಥಿಗಳಾದ ಮೋಹನ್ ರಾಜ್ ರವರು ನಮ್ಮ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭಹಾರೈಸಿದರು ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಆಟಿ ತಿಂಗಳ ವಿಶೇಷತೆಗಳನ್ನು ವೇದಿಕೆಯ ಮೇಲೆ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ನಾಲ್ಕು ಜನ ಹಿರಿಯರಿಗೆ ಸನ್ಮಾನವನ್ನು ಮಾಡಿ ಅವರ ಆಶೀರ್ವಾದವನ್ನು ಪಡೆಯಲಾಯಿತು. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಅಂಕವನ್ನು ಪಡೆದ 9 ಮಕ್ಕಳನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ನಂತರ ಅತಿಥಿಗಳಾಗಿ ಬಂದಂತಹ ಯುವ ವಾಹಿನಿ (ರಿ) ಕೇಂದ್ರ ಸಮಿತಿಯ ಕೋಶಾಧಿಕಾರಿಯದ ಸುನಿಲ್ ಕೆ ಅಂಚನ್ ರವರು ನಮ್ಮ ಘಟಕಕ್ಕೆ ಹಾಗೂ ನಾವು ನಡೆಸಿದ ಕಾರ್ಯಕ್ರಮಕ್ಕೆ ಶುಭಾಶಯ ನೀಡಿದರು, ಒಟ್ಟಿಗೆ ಇಪ್ಪತ್ತಕ್ಕೂ ಅಧಿಕ ಖಾದ್ಯಗಳನ್ನು ಘಟಕದ ಸದಸ್ಯರು ಹಾಗೂ ಆತ್ಮೀಯರು ಮನೆಯಲ್ಲಿ ತಯಾರಿಸಿ ಎಲ್ಲರಿಗೂ ಉಣಬಡಿಸಿದರು. ನಂತರ ಆಗಮಿಸಿದಂತಹ ಅತಿಥಿಗಳಿಗೆ ನೆನಪಿನ ಕಾಣಿಕೆಯಾಗಿ ಗಿಡವನ್ನು ನೀಡಲಾಯಿತು. ಕೊನೆಯದಾಗಿ ಘಟಕದ ಪದಾಧಿಕಾರಿ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ತುಕಾರಾಂ ಪೂಜಾರಿಯವರು ಆಗಮಿಸಿದಂತಹ ಹಾಗೂ ಈ ಕಾರ್ಯಕ್ರಮ ಯಶಸ್ವಿಯಾಗಲು ಪ್ರೋತ್ಸಾಹಿಸಿದಂತಹ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿದರು. ನಿರೂಪಕರಾಗಿ ಶ್ರೀಯುತ ಪ್ರತಿಷ್ ಗೌರೀಶ್ ಅವರು ಕಾರ್ಯನಿರ್ವಹಿಸಿದರು.


