ಯುವವಾಹಿನಿ ಯುವಶಕ್ತಿಯ ಪ್ರೇರಣೆಯ ದೀಪ .ಸಮಾಜ ಸೇವೆ, ಶಿಸ್ತು ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಪಾಲಿಸುತ್ತಾ, ಯುವಕರಲ್ಲಿ ಹೊಸ ಚೈತನ್ಯವನ್ನು ಯುವವಾಹಿನಿ ತುಂಬುತ್ತಿದೆ.
ನಿರಂತರ ಸೇವೆ, ಶಿಸ್ತು, ಮತ್ತು ಸಕಾರಾತ್ಮಕ ಚಿಂತನೆಗಳ ಮೂಲಕ ನಾರಾಯಣಗುರುಗಳ ಸಂದೇಶ ಅನುಷ್ಠಾನ ಮಾಡುತ್ತಿರುವ ಯುವವಾಹಿನಿ ಯುವ ಪೀಳಿಗೆಗೆ ಪ್ರೇರಣೆಯ ದೀಪವಾಗಿದೆ. ಎಂದು ಬಂಟ್ವಾಳ ತಾಲುಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ತಿಳಿಸಿದರು
ಅವರು ಘಟಕದ ಆಶ್ರಯದಲ್ಲಿ ದಿನಾಂಕ 09/10/2025 ರಂದು ಮೇನಾಡು ಉದಯ ಪೂಜಾರಿ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆಯಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು.
ಯುವವಾಹಿನಿ ತನ್ನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಮಾಡಿದೆ ಎಂದು ಗುರುತತ್ವವಾಹಿನಿ ಆತಿಥ್ಯ ನೀಡಿದ ಯುವವಾಹಿನಿ ಬಂಟ್ವಾಳ ಘಟಕದ ಆರೋಗ್ಯ ನಿರ್ದೇಶಕ ಉದಯ ಪೂಜಾರಿ ಮೇನಾಡು ತಿಳಿಸಿದರು
ಘಟಕದ ಸದಸ್ಯರೆಲ್ಲರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂಗೀತದಲ್ಲಿ
ಸಾತ್ವಿಕ್ ದೇರಾಜೆ
ರಾಜೇಶ್ ಅಮ್ಟೂರು, ವಿನಯ ಆಚಾರ್ಯ ಸಹಕರಿಸಿದರು
ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು


