Yuvavahini

MAY 07, 2000 10.24 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಕೆ. ರಾಜೀವ ಪೂಜಾರಿ – ಅಧ್ಯಕ್ಷರು -1999-2000

ಕೆ. ರಾಜೀವ ಪೂಜಾರಿ ಇವರು ಯುವವಾಹಿನಿ (ರಿ) ಕೇಂದ್ರ ಸಮಿತಿಯಲ್ಲಿ 1999-2000 ನೇ ಸಾಲಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಇವರು ಅಧ್ಯಕ್ಷರಾಗಿದ್ದ ವರ್ಷದಲ್ಲಿ ಯುವವಾಹಿನಿಯ ನೂತನ ಘಟಕವು ಉಡುಪಿಯಲ್ಲಿ ಆರಂಭವಾಯಿತು. 1999 ರ ಆಗಸ್ಟ್ ತಿಂಗಳಲ್ಲಿ ಶ್ರೀ ಗುರು ಜಯಂತಿಯ ಪ್ರಯುಕ್ತ ಶ್ರೀ ಗುರು ಸಂದೇಶ ಯಾತ್ರೆಯನ್ನು ನಡೆಸಲಾಗಿತ್ತು. ಅವಿಭಜಿತ ದ.ಕ. ಜಿಲ್ಲೆಯಾದ್ಯಂತ 8 ಕಡೆಗಳಿಂದ ಹೊರಟು ಬಂದ ಗುರು ಸಂದೇಶ ಯಾತ್ರೆಯು ಬ್ರಹ್ಮಶ್ರೀ ನಾರಾಯಣ ಗುರುವರ್ಯರು ಪ್ರದಿಪಾದಿಸಿದ ತತ್ವಾದರ್ಶಗಳನ್ನು ಸಮಾಜದಲ್ಲಿ ಬಿತ್ತರಿಸುತ್ತಾ ಬಂಟ್ವಾಳ-ಬಿ.ಸಿ.ರೋಡಿನಲ್ಲಿ ಒಟ್ಟು ಸೇರಿ ಬೃಹತ್ ಯಾತ್ರೆ ನಡೆಸಿ ಬಿ.ಸಿ. ರೋಡಿನ ಜೋಡು ಮಾರ್ಗದಲ್ಲಿರುವ ಬಿಲ್ಲವ ಸಂಘದಲ್ಲಿ ಸಮಾಪನಗೊಂಡಿತು. ಅತ್ಯಂತ ಯಶಸ್ವಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 5000 ಕ್ಕೂ ಮಿಕ್ಕಿ ಸಮಾಜ ಬಾಂಧವರು ಸೇರಿದ್ದರು.

ದಿನಾಂಕ 19-10-1999 ರಿಂದ 21-10-1999 ರ ವರೆಗೆ ಮೂರು ದಿನಗಳ ಕಾಲ ಯುವವಾಹಿನಿ (ರಿ) ಕಟಪಾಡಿ ಘಟಕದ ವತಿಯಿಂದ ನಡೆದ ವಿದ್ಯಾರ್ಥಿ ಶಿಬಿರವು ಯುವವಾಹಿನಿಯಲ್ಲಿ ನವ ಚರಿತ್ರೆಯನ್ನೇ ನಿರ್ಮಿಸಿತು. ಸತತ ಮೂರು ದಿನಗಳವರೆಗೆ ಕೇಂದ್ರ ಸಮಿತಿಯ ಅಧ್ಯಕ್ಷರು ಶಿಬಿರದಲ್ಲಿಯೇ ಇದ್ದು ಶಿಬಿರದ ಯಶಸ್ಸಿನಲ್ಲಿ ಮುತುವರ್ಜಿ ವಹಿಸಿದ್ದರು.

2000 ನೇ ಫೆಬ್ರವರಿ ತಿಂಗಳಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಮಹಿಳಾ ಸಮಾವೇಶವು ನಡೆದಿತ್ತು. ಈ ಸಮಾವೇಶದಲ್ಲಿ ಸ್ವ-ಉದ್ಯೋಗದೊಂದಿಗೆ ಸ್ವಾವಲಂಬನದೆಡೆಗೆ ಎನ್ನುವ ಮೂಲಧ್ಯೇಯಕ್ಕೆ ಒತ್ತು ನೀಡಿ ಮಹಿಳೆಯರಿಗೆ ಸಹಾಯಕವಾಗ ಬಲ್ಲ ಅನೇಕ ವಿಚಾರಗಳು ಮಂಡನೆಯಾಗಿದ್ದವು.

ಕೆ. ರಾಜೀವ ಪೂಜಾರಿಯವರು ಎಂ.ಕಾಂ. ಸ್ನಾತಕೋತ್ತರ ಪದವೀಧರರು. ನವಮಂಗಳೂರು ಬಂದರು ಮಂಡಳಿಯಲ್ಲಿ ಹಿರಿಯ ಲೆಕ್ಕಾಧಿಕಾರಿಯಾಗಿ 36 ವರ್ಷಗಳ ಸೇವೆ ಸಲ್ಲಿಸಿ ಪ್ರಸಕ್ತ ನಿವೃತ್ತರಾಗಿದ್ದಾರೆ. ಇವರ ಮಡದಿ ಶ್ರೀಮತಿ ಲಲಿತಾ ಕೆ. ಇವರು ನವಮಂಗಳೂರು ಬಂದರು ಮಂಡಳಿಯಲ್ಲಿ ಉದ್ಯೋಗಿಯಾಗಿದ್ದಾರೆ. ಈ ದಂಪತಿಗಳ ಮಗ ಸಂದೇಶ್ ಮೆಕ್ಯಾನಿಕಲ್ ಇಂಜಿನಿಯರಾಗಿದ್ದು ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿ ದ್ದಾರೆ. ಮಗಳು ಕು. ಚೈತ್ರಾ ಎಂ.ಬಿ.ಎ. ವಿದ್ಯಾರ್ಥಿನಿ.

ವಿಳಾಸ : ಸಂದೇಶ, ಬಂದರು ಮಂಡಳಿ ನೌಕರರ ವಸತಿ ಕಾಲೊನಿಯ ಹಿಂಬದಿ,
ಹೊಸಬೆಟ್ಟು, ಮಂಗಳೂರು -575 006
ಮೊಬೈಲ್: 9482042763

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!